Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೋಟ್ಯಾಧಿಪತಿ' ಶೀರ್ಷಿಕೆ ಸರಿ ಎಂದ ಗುರುಪ್ರಸಾದ್
'ಕೋಟ್ಯಾಧಿಪತಿ' ಶೋಗೆ ಸಂಭಾಷಣೆ ಬರೆಯುತ್ತಿರುವುದು ಗುರುಪ್ರಸಾದ್ ಎಂಬುದು ಎಲ್ಲರಿಗೂ ಗೊತ್ತೇ ಇದೆ ಎಂದು ಭಾವಿಸುತ್ತೇವೆ. ಅವರು 'ಕೋಟ್ಯಾಧಿಪತಿ' ಶೀರ್ಷಿಕೆಯಲ್ಲಿ ಇಣುಕಿರುವ ವ್ಯಾಕರಣ ದೋಷದ ಬಗ್ಗೆ ಮಾತನಾಡುತ್ತಾ, 'ಕೋಟ್ಯಾಧಿಪತಿ' ಶೀರ್ಷಿಕೆಯೇ ಸರಿ ಎಂದಿದ್ದಾರೆ.
ಈ ಮೂಲಕ ಹಲವಾರು ದಿನಗಳಿಂದ ಕೇಳಿಬರುತ್ತಿದ್ದ ಶೀರ್ಷಿಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. 'ಕೋಟ್ಯಾಧಿಪತಿ' ಶೀರ್ಷಿಕೆಯೇ ಸರಿ ಎಂದು ಅವರು ತಿಳಿಸಿದ್ದಾರೆ. ಆದರೆ ಇದು ಖಂಡಿತ ಭಂಡವಾದವಂತೂ ಅಲ್ಲ.
'ಕೋಟ್ಯಾಧಿಪತಿ' ಪದಪ್ರಯೋಗ ತಪ್ಪು ಎಂದು ಹಲವರು ಪತ್ರ ಬರೆದು ಅವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಜಿಜ್ಞಾಸೆ ನಡೆಸಿದ್ದಾರೆ. ಪಂಡಿತರು, ಸಾಹಿತಿಗಳ ಜೊತೆ ಚರ್ಚಿಸಿದ್ದಾರೆ. ವ್ಯಾಕರಣ ತಜ್ಞರ ಜೊತೆಗೂ ಮಾತನಾಡಿದ್ದಾರೆ. ಕಡೆಗೆ ವ್ಯಾಕರಣ ತಜ್ಞ ಹಾಗೂ ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ಸಲಹೆಯನ್ನೂ ಕೇಳಿದ್ದಾರೆ. ಅವರು ಹೇಳಿದ್ದೇನೆಂದರೆ...
ವ್ಯಾಕರಣ ಪ್ರಕಾರ 'ಕೋಟ್ಯಧಿಪತಿ' ಸರಿ. ಆದರೆ ಆಡುಭಾಷೆಯಲ್ಲಿ 'ಕೋಟ್ಯಾಧಿಪತಿ' ಎಂದು ಕರೆಯುತ್ತಿದ್ದಾರೆ. ಹಾಗಾಗಿ ಎರಡರಲ್ಲಿ ಯಾವ ಪದ ಬಳಸಿದರೂ ತಪ್ಪಲ್ಲ ಎಂದಿದ್ದಾರೆ. ಹಾಗಾಗಿ ರೂಢಿಮೂಲವಾದ 'ಕೋಟ್ಯಾಧಿಪತಿ' ಶೀರ್ಷಿಕೆಯನ್ನೇ ಬಳಸುತ್ತಿದ್ದೇವೆ ಎಂದಿದ್ದಾರೆ.
ಕೋಟಿ' ಮತ್ತು 'ಅಧಿಪತಿ' ಎಂಬ ಎರಡು ಪದಗಳನ್ನು ಕೂಡಿಸಿ ಬರೆದರೆ 'ಕೋಟ್ಯಧಿಪತಿ' ಎಂದಾಗುತ್ತದೆಯೇ ಹೊರತು 'ಕೋಟ್ಯಾಧಿಪತಿ' ಅಲ್ಲ. ಇನ್ನು 'ಕೋಟ್ಯಧಿಪತಿ' ಪದವನ್ನು ಸಂಧಿ ಮಾಡಿದಾಗ ಯಣ್ ಸಂಧಿಯಾಗುತ್ತದೆ ಎಂಬ ವಾದ ಕೇಳಿಬಂದಿತ್ತು.
ಇದಕ್ಕೆ ಇನ್ನೊಂದೆರಡು ಉದಾಹರಣೆಗಳನ್ನೂ ಕೊಡಲಾಗಿತ್ತು. ಅತಿ + ಅಂತ್ಯ =ಅತ್ಯಂತ ಹಾಗೆಯೇ ಮನು + ಅಂತರ= ಮನ್ವಂತರ. ಆದರೆ 'ಲಕ್ಷಾಧಿಪತಿ' ಪದವನ್ನು ಬಿಡಿಸಿ ಬರೆದಾಗ ಲಕ್ಷ + ಅಧಿಪತಿ = ಲಕ್ಷಾಧಿಪತಿ (ಸವರ್ಣದೀರ್ಘ ಸಂಧಿ) ಆಗುತ್ತದೆ.
ಕೋಟ್ಯಂತರ ವೀಕ್ಷಕರು ನೋಡುವ ಕೋಟ್ಯಾಧಿಪತಿ ಶೀರ್ಷಿಕೆ ವಿವಾದಕ್ಕೆ 'ಮಠ' ಗುರುಪ್ರಸಾದ್ ಸಮರ್ಥನೆ ನೀಡುವ ಮೂಲಕ ತೆರೆ ಎಳೆದಿದ್ದಾರೆ. ವ್ಯಾಕರಣ ಪರವಾಗಿ ಅಲ್ಲದೆ ರೂಢಿಗತವಾಗಿ ಬಳಕೆಯಲ್ಲಿರುವ ಪದವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಅಷ್ಟೆ. (ಒನ್ ಇಂಡಿಯಾ ಕನ್ನಡ)