Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿ.ಕೆ.ಶಿವಕುಮಾರ್ ಜೊತೆ ಹೆಜ್ಜೆ ಹಾಕಲಿದ್ದಾರೆ ಹಂಸಲೇಖ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗಾಗಿ ಪಾದಾಯಾತ್ರೆ ಮಾಡಲಿದ್ದು, ಇದಕ್ಕಾಗಿ ಜನ ಬೆಂಬಲ, ಸೆಲೆಬ್ರಿಟಿ ಬೆಂಬಲವನ್ನು ಪಡೆಯುವ ಕಾಯಕದಲ್ಲಿ ತೊಡಗಿದ್ದಾರೆ.
ಮೇಕೆದಾಟು ಪಾದಯಾತ್ರೆಗೆ ಹಲವು ಸಂಘಟನೆಗಳ ಬೆಂಬಲ ಕೋರಿರುವ ಡಿ.ಕೆ.ಶಿವಕುಮಾರ್, ಎರಡು ದಿನದ ಹಿಂದಷ್ಟೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಚಿತ್ರರಂಗದ ಬೆಂಬಲವನ್ನು ಕೋರಿದ್ದರು. ಇದೀಗ ರಿಯಾಲಿಟಿ ಶೋಗೆ ಭೇಟಿ ನೀಡಿ ಅಲ್ಲಿಯೂ ಮೇಕೆದಾಟು ಯೋಜನೆಯ ಮಹತ್ವ, ಅನುಕೂಲ, ಪಾದಯಾತ್ರೆಯ ರೂಪುರೇಷೆ ಇತರೆ ವಿಚಾರಗಳ ಬಗ್ಗೆ ಮಾತನಾಡಿ, ಬೆಂಬಲಕ್ಕೆ ಮನವಿ ಮಾಡಿದ್ದಾರೆ.
ಕನ್ನಡದ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ 'ಸರಿಗಮಪ' ವೇದಿಕೆಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್, ಹಂಸಲೇಖ, ವಿಜಯ ಪ್ರಕಾಶ್, ಅರ್ಜುನ್ ಜನ್ಯ ಅವರುಗಳ ಮೂಲಕ ರಾಜ್ಯದ ಬೆಂಬಲವನ್ನು ಪಾದಯಾತ್ರೆಗಾಗಿ ಕೇಳಿದರು.
ಇತ್ತೀಚೆಗಷ್ಟೆ ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ 'ಯರೆಬೇವು' ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಡನೆ ವೇದಿಕೆ ಹಂಚಿಕೊಂಡಿದ್ದ ಹಂಸಲೇಖ, ವಚನ ಸಾಹಿತ್ಯ, ಡೆಮೊಕ್ರಸಿ ಹಾಗೂ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರ್ಯಗಳನ್ನು ಮನಸಾರೆ ಹೊಗಳಿದ ಹಂಸಲೇಖ. ಕರ್ನಾಟಕಕ್ಕೆ ಸಿದ್ಧರಾಮಯ್ಯ ನೀಡಿದ ಕೊಡುಗೆಗಳ ಬಗ್ಗೆ ವೇದಿಕೆ ಮೇಲೆ ಮಾತಾಡಿದರು. ಮತ್ತೆ ಈ ರಾಜ್ಯಕ್ಕೆ ಸಿದ್ದರಾಮ್ಯ ಮುಖ್ಯಮಂತ್ರಿ ಆಗಬೇಕು ಅಂತ ಹಂಸಲೇಖ ಹೇಳಿದರು. ''ಈ ಧರ್ಮೋಕ್ರಸಿಯನ್ನು ಪಕ್ಕಕ್ಕೆ ಸರಿಸಿ, ಡೆಮೊಕ್ರಸಿಯನ್ನು ತಂದುಕೊಡಲಿ. ಹಾಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಾಡನ್ನು ಮತ್ತೆ ಹಾಲಾಗಿಸಲಿ'' ಎಂದು ಹಂಸಲೇಖ ಅಂದು ಹೇಳಿದ್ದರು.
ಅದೇ ವೇದಿಕೆಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹಂಸಲೇಖ ಅವರು ಜಾತಿವಾದ, ಧರ್ಮಾಂದತೆ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳಿಗೆ ಬೆಂಬಲ ಸೂಚಿಸಿದರು. ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಆಡಿದ್ದ ಮಾತು ಸರಿಯಾಗಿಯೇ ಇದೆ ಎಂದು ಸಹ ಸಿದ್ದರಾಮಯ್ಯ ಹೇಳಿದರು.