ಹೇಮಶ್ರೀ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿ ಬಂಧನ

By Rajendra

ಇಷ್ಟು ದಿನ ತಣ್ಣಗಾಗಿದ್ದ ಕಿರುತೆರೆ ತಾರೆ ಹೇಮಶ್ರೀ ಅನುಮಾನಾಸ್ಪದ ಸಾವಿನ ಪ್ರಕರಣ ಈಗ ಮತ್ತೆ ಕಾವೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಸುರೇಂದ್ರ ಬಾಬು ಅವರ ಕಾರು ಚಾಲಕ ಸತೀಶ್ ನನ್ನು ಹೆಬ್ಬಾಳ ಪೊಲೀಸರು ಶುಕ್ರವಾರ (ಅ.26) ಬೆಳಗ್ಗೆ ಬಂಧಿಸಿದ್ದಾರೆ.

ಹೇಮಶ್ರೀ ಅನುಮಾನಾಸ್ಪದ ಸಾವಿನ ಪ್ರಕರಣ ಬಯಲಾಗುತ್ತಿದ್ದಂತೆ (ಅ.9, 2012) ಸತೀಶ್ ನಾಪತ್ತೆಯಾಗಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಆದರೂ ಈತ ತಲೆಮರೆಸಿಕೊಂಡು ಪೊಲೀಸರ ಕೈಗೆ ಸಿಕ್ಕಿರಲಿಲ್ಲ.

ಈತ ಇಷ್ಟು ದಿನಗಳ ಕಾಲ ಎಲ್ಲಿ ತಲೆಮರೆಸಿಕೊಂಡಿದ್ದ, ಏಕೆ ನಾಪತ್ತೆಯಾಗಿದ್ದ? ಹೇಮಶ್ರೀ ಕೊಲೆ ಪ್ರಕರಣಕ್ಕೂ ಈತನಿಗೂ ಏನು ಸಂಬಂಧ? ಈ ಪ್ರಕರಣದಲ್ಲಿ ಈತನ ಪಾತ್ರವೇನು? ಎಂಬುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಸದ್ಯಕ್ಕೆ ಈತನನ್ನು ಬಂಧಿಸಿರುವ ಹೆಬ್ಬಾಳ ಪೊಲೀಸರು ಈತನಿಂದ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ.

ಹೇಮಶ್ರೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಕೇವಲ ಸಾಕ್ಷಿಯೇ? ಅಥವಾ ಈ ಅನುಮಾನಾಸ್ಪದ ಸಾವಿನ ಹಿಂದೆ ಈತನ ಕೈವಾಡವೂ ಇದೆಯೇ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಲಿದೆ.

ಕಳೆದ ಎರಡು ವರ್ಷಗಳಿಂದ ಈತ ಹೇಮಶ್ರೀ ಪತಿ ಸುರೇಂದ್ರ ಬಾಬು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಕಾಲ ಕೆಲಸ ಬಿಟ್ಟಿದ್ದ ಈತ ಪುನಃ ಕೆಲಸಕ್ಕೆ ಸೇರಿದ್ದ ಎನ್ನುತ್ತವೆ ಮೂಲಗಳು. ಹೇಮಶ್ರೀ ಸಾವಪ್ಪಿದ ದಿನವೇ ಈತ ಪುನಃ ಕೆಲಸಕ್ಕೆ ಸೇರಿಕೊಂಡಿದ್ದನೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. (ಏಜೆನ್ಸೀಸ್)

More from Filmibeat

English summary
Following the murder of film and TV actor Hemashree (33), the Hebbal police have arrested the Surendra Babu's car driver Satish on 26th October, who was the prime suspect.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X