Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಶ್ರೀ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿ ಬಂಧನ
ಹೇಮಶ್ರೀ ಅನುಮಾನಾಸ್ಪದ ಸಾವಿನ ಪ್ರಕರಣ ಬಯಲಾಗುತ್ತಿದ್ದಂತೆ (ಅ.9, 2012) ಸತೀಶ್ ನಾಪತ್ತೆಯಾಗಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಆದರೂ ಈತ ತಲೆಮರೆಸಿಕೊಂಡು ಪೊಲೀಸರ ಕೈಗೆ ಸಿಕ್ಕಿರಲಿಲ್ಲ.
ಈತ ಇಷ್ಟು ದಿನಗಳ ಕಾಲ ಎಲ್ಲಿ ತಲೆಮರೆಸಿಕೊಂಡಿದ್ದ, ಏಕೆ ನಾಪತ್ತೆಯಾಗಿದ್ದ? ಹೇಮಶ್ರೀ ಕೊಲೆ ಪ್ರಕರಣಕ್ಕೂ ಈತನಿಗೂ ಏನು ಸಂಬಂಧ? ಈ ಪ್ರಕರಣದಲ್ಲಿ ಈತನ ಪಾತ್ರವೇನು? ಎಂಬುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಸದ್ಯಕ್ಕೆ ಈತನನ್ನು ಬಂಧಿಸಿರುವ ಹೆಬ್ಬಾಳ ಪೊಲೀಸರು ಈತನಿಂದ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ.
ಹೇಮಶ್ರೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಕೇವಲ ಸಾಕ್ಷಿಯೇ? ಅಥವಾ ಈ ಅನುಮಾನಾಸ್ಪದ ಸಾವಿನ ಹಿಂದೆ ಈತನ ಕೈವಾಡವೂ ಇದೆಯೇ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಲಿದೆ.
ಕಳೆದ ಎರಡು ವರ್ಷಗಳಿಂದ ಈತ ಹೇಮಶ್ರೀ ಪತಿ ಸುರೇಂದ್ರ ಬಾಬು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಕಾಲ ಕೆಲಸ ಬಿಟ್ಟಿದ್ದ ಈತ ಪುನಃ ಕೆಲಸಕ್ಕೆ ಸೇರಿದ್ದ ಎನ್ನುತ್ತವೆ ಮೂಲಗಳು. ಹೇಮಶ್ರೀ ಸಾವಪ್ಪಿದ ದಿನವೇ ಈತ ಪುನಃ ಕೆಲಸಕ್ಕೆ ಸೇರಿಕೊಂಡಿದ್ದನೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. (ಏಜೆನ್ಸೀಸ್)