Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಶ್ರೀ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿ ಬಂಧನ
ಹೇಮಶ್ರೀ ಅನುಮಾನಾಸ್ಪದ ಸಾವಿನ ಪ್ರಕರಣ ಬಯಲಾಗುತ್ತಿದ್ದಂತೆ (ಅ.9, 2012) ಸತೀಶ್ ನಾಪತ್ತೆಯಾಗಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಆದರೂ ಈತ ತಲೆಮರೆಸಿಕೊಂಡು ಪೊಲೀಸರ ಕೈಗೆ ಸಿಕ್ಕಿರಲಿಲ್ಲ.
ಈತ ಇಷ್ಟು ದಿನಗಳ ಕಾಲ ಎಲ್ಲಿ ತಲೆಮರೆಸಿಕೊಂಡಿದ್ದ, ಏಕೆ ನಾಪತ್ತೆಯಾಗಿದ್ದ? ಹೇಮಶ್ರೀ ಕೊಲೆ ಪ್ರಕರಣಕ್ಕೂ ಈತನಿಗೂ ಏನು ಸಂಬಂಧ? ಈ ಪ್ರಕರಣದಲ್ಲಿ ಈತನ ಪಾತ್ರವೇನು? ಎಂಬುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಸದ್ಯಕ್ಕೆ ಈತನನ್ನು ಬಂಧಿಸಿರುವ ಹೆಬ್ಬಾಳ ಪೊಲೀಸರು ಈತನಿಂದ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ.
ಹೇಮಶ್ರೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಕೇವಲ ಸಾಕ್ಷಿಯೇ? ಅಥವಾ ಈ ಅನುಮಾನಾಸ್ಪದ ಸಾವಿನ ಹಿಂದೆ ಈತನ ಕೈವಾಡವೂ ಇದೆಯೇ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಲಿದೆ.
ಕಳೆದ ಎರಡು ವರ್ಷಗಳಿಂದ ಈತ ಹೇಮಶ್ರೀ ಪತಿ ಸುರೇಂದ್ರ ಬಾಬು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಕಾಲ ಕೆಲಸ ಬಿಟ್ಟಿದ್ದ ಈತ ಪುನಃ ಕೆಲಸಕ್ಕೆ ಸೇರಿದ್ದ ಎನ್ನುತ್ತವೆ ಮೂಲಗಳು. ಹೇಮಶ್ರೀ ಸಾವಪ್ಪಿದ ದಿನವೇ ಈತ ಪುನಃ ಕೆಲಸಕ್ಕೆ ಸೇರಿಕೊಂಡಿದ್ದನೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. (ಏಜೆನ್ಸೀಸ್)