Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಶ್ರೀ ಅಕ್ಕ ರೂಪಶ್ರೀ ಮನದಾಳದ ಮಾತುಗಳು
ಹೇಮಶ್ರೀ ಸಾವಿಗೆ ಸಂಬಂಧಿಸಿದಂತೆ ಇನ್ನೂ ತನಿಖೆ ನಡೆಯುತ್ತಿದೆ. ಆದರೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ವರದಿಗಳು ದಿಕ್ಕುತಪ್ಪಿಸುತ್ತಿವೆ. ಹಾಗಾಗಿ ತಾವು ಪತ್ರಿಕಾಗೋಷ್ಠಿಯನ್ನು ಕರೆದಿದ್ದೇವೆ. ಸಂಪೂರ್ಣ ತನಿಖೆ ನಡೆಯುವವರೆಗೂ ಮಾಧ್ಯಮಗಳು ತಾಳ್ಮೆ ವಹಿಸಬೇಕು. ಸತ್ಯಾಸತ್ಯತೆಗಳು ಏನು ಎಂದು ಗೊತ್ತಾದ ಬಳಿಕವಷ್ಟೇ ವರದಿ ಮಾಡಬೇಕು ಎಂದರು.
ಹೇಮಶ್ರೀ ಅವರ ಅಕಾಲಿಕ ಸಾವು ನಮ್ಮ ಕುಟುಂಬಕ್ಕೆ ಶಾಕ್ ನೀಡಿದೆ. ಗುರು ಹಿರಿಯರ ಒಪ್ಪಿಗೆ ಮೇರೆಗೆ ಸುರೇಂದ್ರ ಬಾಬು ಜೊತೆ ಹೇಮಶ್ರೀ ಮದುವೆಯಾಗಿತ್ತು. ಅವರಿಬ್ಬರದ್ದೂ ಅರೇಂಜ್ಡ್ ಮ್ಯಾರೇಜ್. ಸುರೇಂದ್ರ ಬಾಬು ಕೂಡ ಅಷ್ಟೇ ಒಳ್ಳೆಯವರು. ಹೇಮಶ್ರೀಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು.
ಮಾಧ್ಯಮಗಳಲ್ಲಿ ಬಂದಂತೆ ಹೇಮಶ್ರೀಗೆ ಬಾಯ್ ಫ್ರೆಂಡ್ ಇದ್ದಾನೆ ಎಂಬುದು ಸುಳ್ಳು. ಆಕೆಯ ಮದುವೆಯಾಗಿ ಯಾರೂ ಬಲವಂತ ಮಾಡಲಿಲ್ಲ. ಆಕೆಯ ಮದುವೆಯಿಂದ ನಮ್ಮ ಕುಟುಂಬಕ್ಕೆ ಯಾವುದೇ ಲಾಭವಾಗಿಲ್ಲ. ನಮ್ಮ ಕುಟುಂಬಕ್ಕೆ ಯಾವುದೇ ಹಣಕಾಸಿನ ತೊಂದರೆಯೂ ಇರಲಿಲ್ಲ ಎಂದು ಅವರು ಸಮಾಧಾನಚಿತ್ತದಿಂದ ಹೇಳಿದರು.
ಈಗ ನಮ್ಮ ಪೋಷಕರು ಹೇಮಶ್ರೀ ಅಂತಿಮ ಸಂಸ್ಕಾರಕ್ಕಾಗಿ ವಾರಣಾಸಿಗೆ ಹೋಗಿದ್ದಾರೆ. ಈಗ ಅವರು ಮಾಧ್ಯಮಗಳ ಮುಂದೆ ಬಂದು ಉತ್ತರಿಸುವ ಸ್ಥಿತಿಯಲ್ಲಿಲ್ಲ. ಹೇಮಶ್ರೀ ಸಾವಿನ ಶಾಕ್ ನಿಂದ ಅವರು ಇನ್ನೂ ಹೊರಬಂದಿಲ್ಲ. ಈ ನೋವಿನಿಂದ ಅವರು ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಬರುತ್ತಾರೆ ಎಂದು ತಿಳಿಸಿದರು. ಮುಂದೆ ಓದಿ ನಮ್ಮ ಕುಟುಂಬದ ನೆಮ್ಮದಿ ಹಾಳುಮಾಡಿದ್ದೇ ಅವನು