Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಗ್ನಿಸಾಕ್ಷಿ' ಚಂದ್ರಿಕಾಳ ಮೌನ ಸನ್ನಿಧಿಗೆ ಭಯ ಹುಟ್ಟಿಸಿದೆ
Recommended Video
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿನಿತ್ಯ ಪ್ರಸಾರ ಆಗುವ ಅಗ್ನಿಸಾಕ್ಷಿ ಧಾರಾವಾಹಿಗೆ ಅಪಾರ ಅಭಿಮಾನಿ ಬಳಗವಿದೆ. ಕೇವಲ ಹೆಣ್ಣುಮಕ್ಕಳು ಮಾತ್ರವಲ್ಲದೆ ಯುವಕ ಯುವತಿಯರು ಕೂಡ ಈ ಧಾರಾವಾಹಿಯ ಹುಚ್ಚು ಹಿಡಿಸಿಕೊಂಡಿದ್ದಾರೆ. ಸಿನಿಮಾ ಸ್ಟೈಲ್ ನಲ್ಲೇ ಸಾಗುತ್ತಿರುವ ಅಗ್ನಿಸಾಕ್ಷಿ ಸೀರಿಯಲ್ ಕೆಲವರಿಗಂತು ಶತ್ರುವಿನಂತೆ.
ಯಾಕಂದ್ರೆ ಈ ಧಾರಾವಾಹಿ ಬಂದಾಗ ಚಾಲನ್ ಬದಲಾಗುವುದಿಲ್ಲ ಎನ್ನುವುದೊಂದೆ ದೂರು. ಅಷ್ಟರ ಮಟ್ಟಿಗೆ ಈ ಧಾರಾವಾಹಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಸದ್ಯ ಈಗ ಧಾರಾವಾಹಿಯಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಕಟ್ಟಿಕೊಡುವ ಪ್ರಯತ್ನ ನಾವು ಮಾಡುತ್ತಿದ್ದೇವೆ.
'ಧಾರಾವಾಹಿ ನಿಲ್ಲಿಸು' ಎಂದು ದೇವರಿಗೆ ಮನವಿ ಮಾಡುತ್ತಿರುವ ಪ್ರೇಕ್ಷಕ
ನಿನ್ನೆ ಅಂದರೆ ಏರ್ಪಿಲ್ 17ರಂದು ನಡೆದ ಅಗ್ನಿಸಾಕ್ಷಿ ಧಾರಾವಾಹಿಯ ಎಪಿಸೋಡ್ ಅನ್ನು ನೀವೇನಾದ್ರು ಮಿಸ್ ಮಾಡಿಕೊಂಡಿದ್ದೀರಾ? ಹಾಗಾದರೆ ನೀವು ಈ ಸ್ಟೋರಿಯನ್ನು ಓದಲೇ ಬೇಕು. ನಿನ್ನೆ ಅಂತದ್ದೇನಾಯ್ತು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ ಮುಂದೆ ಓದಿ
ಅಗ್ನಿಸಾಕ್ಷಿಯಲ್ಲಿ ಹೊಸ ತಿರುವು
ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಕಿಶೋರ್ ಕೊಲೆ ಆಗಿದೆ. ಇನ್ನು ಮುಂದೆ ಯಾವುದೇ ಸಮಸ್ಯೆ ಇಲ್ಲ ಎಂದು ಸಿದ್ಧಾರ್ಥ್ ಹಾಗೂ ಸನ್ನಿಧಿ ಎಂದುಕೊಳ್ಳುವಷ್ಟರಲ್ಲಿ ಹೊಸ ಸಮಸ್ಯೆಗಳು ಆರಂಭ ಆಗಿದೆ. ಧಾರಾವಾಹಿಯಲ್ಲಿ ಕಿಶೋರ್ ತಮ್ಮ ಕೌಶಿಕ್ ಆಟ ಶುರುವಾಗಿದ್ದು ಕೌಶಿಕ್ ಯಾರಿಗೂ ತಿಳಿಯದಂತೆ ಸಿದ್ದಾರ್ಥ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾನೆ.
ಚಂದ್ರಿಕಾ ಮೌನವೇ ಸಮಸ್ಯೆ
ವಾಸುದೇವ ಕುಟುಂಬಕ್ಕೆ ಶತ್ರುವಾಗಿರುವ ಚಂದ್ರಿಕಾ ಕಿಶೋರ್ ಮರಣ ಹೊಂದಿದ ನಂತರ ಮೌನ ತಾಳಿದ್ದಾಳೆ. ಮನೆಯವರಿಗೆ ತಿಳಿಯದಂತೆ ಕೌಶಿಕನನ್ನು ಮನೆಗೆ ಕರೆದುಕೊಂಡು ಬಂದಿರುವ ಚಂದ್ರಿಕಾ ಸೈಲೆಂಟ್ ಆಗಿದ್ದುಕೊಂಡು ಸಂಚು ರೂಪಿಸುತ್ತಿದ್ದಾಳೆ.
ಸನ್ನಿಧಿ ಮನಸ್ಸಿನಲ್ಲಿ ಹೊಸ ಭಯ
ಧಾರಾವಾಹಿಯ ನಾಯಕಿ ಸನ್ನಿಧಿಯ ಮನಸ್ಸಿನಲ್ಲಿ ಭಯ ಹುಟ್ಟಿಕೊಂಡಿದೆ. ಚಂದ್ರಿಕಾ ಮೌನವಾಗಿದ್ದು ಸಮಸ್ಯೆಗಳನ್ನ ಹೆಚ್ಚು ಮಾಡುತ್ತಿದ್ದಾಳೆ ಎನ್ನುವುದು ಸನ್ನಿಧಿ ಭಯಕ್ಕೆ ಮುಖ್ಯ ಕಾರಣ.
ಹೊಸ ಸಂಚು ರೂಪಿಸಿರುವ ಚಂದ್ರಿಕಾ
ಇನ್ನು ನಿನ್ನೆಯ ಸಂಚಿಕೆಯಲ್ಲಿ ಚಂದ್ರಿಕಾ ಹಾಗೂ ಕೌಶಿಕ್ ಮಧ್ಯೆ ಭಿನ್ನಾಭಿಪ್ರಾಯ ಶುರುವಾಗಿದೆ. ನೋಡುಗರಿಗೆ ಇವರ ಮಧ್ಯೆವೇ ಜಗಳ ಶುರುವಾಗುತ್ತೆ ಎನ್ನುವಷ್ಟರಲ್ಲಿ ಕಥೆಗೆ ಹೊಸ ಟ್ವಿಸ್ಟ್ ನೀಡಿ ಸಂಚಿಕೆಯನ್ನ ನಿಲ್ಲಿಸಿದ್ದಾರೆ. ಹೊಸ ಆಯಾವ ಯಾವುದು ಎನ್ನುವುದು ಮುಂದಿನ ಎಪಿಸೋಡ್ ನಲ್ಲಿ ತಿಳಿಯಲಿದೆ.
ತಾಳ್ಮೆ ಪರೀಕ್ಷಿಸುತ್ತಿರುವ 'ಅಗ್ನಿಸಾಕ್ಷಿ' ನೋಡಿ ನೋಡಿ ರೋಸಿ ಹೋದ ವೀಕ್ಷಕರು.!