Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಬ್ಲಿಕ್ ಟಿವಿ ವಾಹಿನಿಯ ಪ್ರಸಾರ ಕಾರ್ಯಾರಂಭ
ಪಬ್ಲಿಕ್ ಟಿವಿಯ ಧ್ಯೇಯ, ಉದ್ದೇಶ ಹಾಗೂ ಗುರಿಗಳ ಬಗ್ಗೆ ಸಾರಥಿ ರಂಗನಾಥ್ ಮಾತುನೊಂದಿಗೆ ಬಿಡುಗಡೆಯಾದ ಈ ವಾಹಿನಿ, ರಾಜ್ಯದ ಮುಖ್ಯಮಂತ್ರಿ ಸದಾನಂದ ಗೌಡ 'ಸುದ್ದಿ' ಓದುವುದರೊಂದಿಗೆ ಮೊದಲ ಸುದ್ದಿ ಪ್ರಸಾರ ಮಾಡಿತು. ಬಜೆಟ್ ವಿಷಯವನ್ನು ಪ್ರಾರಂಭಿಸಿ ವಿವರಣೆ ನೀಡುವುದರೊಂದಿಗೆ ಸದಾನಂದ ಗೌಡ ಓದಿದ ಸುದ್ದಿ ಎಲ್ಲರ ಗಮನ ಸೆಳೆಯಿತು.
ಮುಖ್ಯಮಂತ್ರಿ ಓದಿದ ಸುದ್ದಿ ಪ್ರಸಾರದ ಮಧ್ಯೆ ಹಿನ್ನೆಲೆ ಧ್ವನಿಯ ಮೂಲಕ 6 ತಿಂಗಳಿನಿಂದ ರಾಜ್ಯದಲ್ಲಿ ನಡೆದು ಗಮನಸೆಳೆದ ವಿದ್ಯಮಾನಗಳ ಸುದ್ದಿಗಳು ಹಾಗೂ ವಿಶ್ಲೇಷಣೆಗಳು ಪ್ರಸಾರವಾದವು. ಸದಾನಂದ ಗೌಡರ ಸುದ್ದಿ ಪ್ರಸಾರದ ನಂತರ ಮತ್ತೆ ರಂಗನಾಥ್ ಅವರ ನುಡಿಮುತ್ತುಗಳ ಮೂಲಕ ಪಬ್ಲಿಕ್ ಟಿವಿ ಪ್ರಸಾರ ಮುಂದುವರಿದಿದೆ.
ವಿಶೇಷ ಅವಕಾಶ: ಇಂದು ಈ ಪಬ್ಲಿಕ್ ಟಿವಿಯಲ್ಲಿ ಮಧ್ಯಾನ್ಹ 12-30ಕ್ಕೆ ಎಚ್ ಆರ್ ರಂಗನಾಥ್ ನಡೆಸಿಕೊಡಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರೊಂದಿಗೆ, 23574045/4046 ದೂರವಾಣಿ ಸಂಖ್ಯೆಯ ಮೂಲಕ ನೇರವಾಗಿ ಮಾತನಾಡಲು ವಿಶೇಷ ಅವಕಾಶವಿದೆ.
ಸದ್ಯದಲ್ಲಿಯೇ ದೇಶದ ಮುಖ್ಯ 'ಉಪಗ್ರಹ ದೂರದರ್ಶನ' (Satellite TV) ಗಳಲ್ಲಿ ನಮ್ಮ ನಿಮ್ಮೆಲ್ಲರ ಪಬ್ಲಿಕ್ ಟಿವಿ ಪ್ರಸಾರ ಲಭ್ಯ. (ಒನ್ ಇಂಡಿಯಾ ಕನ್ನಡ)