ಪಬ್ಲಿಕ್ ಟಿವಿ ವಾಹಿನಿಯ ಪ್ರಸಾರ ಕಾರ್ಯಾರಂಭ

ಪಬ್ಲಿಕ್ ಟಿವಿಯ ಧ್ಯೇಯ, ಉದ್ದೇಶ ಹಾಗೂ ಗುರಿಗಳ ಬಗ್ಗೆ ಸಾರಥಿ ರಂಗನಾಥ್ ಮಾತುನೊಂದಿಗೆ ಬಿಡುಗಡೆಯಾದ ಈ ವಾಹಿನಿ, ರಾಜ್ಯದ ಮುಖ್ಯಮಂತ್ರಿ ಸದಾನಂದ ಗೌಡ 'ಸುದ್ದಿ' ಓದುವುದರೊಂದಿಗೆ ಮೊದಲ ಸುದ್ದಿ ಪ್ರಸಾರ ಮಾಡಿತು. ಬಜೆಟ್ ವಿಷಯವನ್ನು ಪ್ರಾರಂಭಿಸಿ ವಿವರಣೆ ನೀಡುವುದರೊಂದಿಗೆ ಸದಾನಂದ ಗೌಡ ಓದಿದ ಸುದ್ದಿ ಎಲ್ಲರ ಗಮನ ಸೆಳೆಯಿತು.
ಮುಖ್ಯಮಂತ್ರಿ ಓದಿದ ಸುದ್ದಿ ಪ್ರಸಾರದ ಮಧ್ಯೆ ಹಿನ್ನೆಲೆ ಧ್ವನಿಯ ಮೂಲಕ 6 ತಿಂಗಳಿನಿಂದ ರಾಜ್ಯದಲ್ಲಿ ನಡೆದು ಗಮನಸೆಳೆದ ವಿದ್ಯಮಾನಗಳ ಸುದ್ದಿಗಳು ಹಾಗೂ ವಿಶ್ಲೇಷಣೆಗಳು ಪ್ರಸಾರವಾದವು. ಸದಾನಂದ ಗೌಡರ ಸುದ್ದಿ ಪ್ರಸಾರದ ನಂತರ ಮತ್ತೆ ರಂಗನಾಥ್ ಅವರ ನುಡಿಮುತ್ತುಗಳ ಮೂಲಕ ಪಬ್ಲಿಕ್ ಟಿವಿ ಪ್ರಸಾರ ಮುಂದುವರಿದಿದೆ.
ವಿಶೇಷ ಅವಕಾಶ: ಇಂದು ಈ ಪಬ್ಲಿಕ್ ಟಿವಿಯಲ್ಲಿ ಮಧ್ಯಾನ್ಹ 12-30ಕ್ಕೆ ಎಚ್ ಆರ್ ರಂಗನಾಥ್ ನಡೆಸಿಕೊಡಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರೊಂದಿಗೆ, 23574045/4046 ದೂರವಾಣಿ ಸಂಖ್ಯೆಯ ಮೂಲಕ ನೇರವಾಗಿ ಮಾತನಾಡಲು ವಿಶೇಷ ಅವಕಾಶವಿದೆ.
ಸದ್ಯದಲ್ಲಿಯೇ ದೇಶದ ಮುಖ್ಯ 'ಉಪಗ್ರಹ ದೂರದರ್ಶನ' (Satellite TV) ಗಳಲ್ಲಿ ನಮ್ಮ ನಿಮ್ಮೆಲ್ಲರ ಪಬ್ಲಿಕ್ ಟಿವಿ ಪ್ರಸಾರ ಲಭ್ಯ. (ಒನ್ ಇಂಡಿಯಾ ಕನ್ನಡ)


Click it and Unblock the Notifications











