Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಜೈ ಮಾರುತಿ ಯುವಕ ಮಂಡಲ (ರಿ)’ ತುಳು ಚಿತ್ರಕ್ಕೆ ಸಿಕ್ತು ಚಾಲನೆ
ಮಂಗಳೂರು : ರೀವನ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗುತ್ತಿರುವ ಚೊಚ್ಚಲ ತುಳು ಚಿತ್ರ 'ಜೈ ಮಾರುತಿ ಯುವಕ ಮಂಡಲ (ರಿ)' ಮುಹೂರ್ತ ಸಮಾರಂಭ ಇಂದು ಬೆಳಗ್ಗೆ 9ಕ್ಕೆ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ, ಬೋಳಾರ, ಮಂಗಳೂರಿನಲ್ಲಿ ನಡೆಯಿತು.
'ದೊಂಬರಾಟ'.. ತುಳು ಸಿನಿಮಾದ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ಕ್ಲಾಪ್ ಮಾಡುವ ಮೂಲಕ 'ಜೈ ಮಾರುತಿ ಯುವಕ ಮಂಡಲ (ರಿ)' ಚಿತ್ರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಚಿತ್ರದ ಯಶಸ್ಸಿಗೆ ಮತ್ತು ಚಿತ್ರ ತಂಡದ ಕಲಾವಿದರಿಗೆ ಶುಭ ಹಾರೈಸಿದರು.
ಡಿಸೆಂಬರ್ 15 ಕ್ಕೆ 'ಜೈ ಮಾರುತಿ ಯುವಕ ಮಂಡಲ (ರಿ)' ತುಳು ಸಿನಿಮಾ ಮುಹೂರ್ತ
'ಒಂದು ಮೊಟ್ಟೆಯ ಕಥೆ' ಸಿನಿಮಾದ ರಾಜ್ ಬಿ ಶೆಟ್ಟಿ, ಚಿತ್ರ ನಿರ್ದೇಶಕ ಸಾಯಿ ಕೃಷ್ಣ ಕುಡ್ಲ, ಪ್ರವೀಣ್ ಶೆಟ್ಟಿ, ಕನ್ನಡ ಸಿನೆಮಾ ನಿರ್ಮಾಪಕ ಹೇಮಂತ್ ಸುವರ್ಣ, ನಟ ಚೇತಕ್ ಪೂಜಾರಿ ಸೇರಿದಂತೆ ಹಲವರು 'ಜೈ ಮಾರುತಿ ಯುವಕ ಮಂಡಲ (ರಿ)' ಚಿತ್ರದ ಮುಹೂರ್ತಕ್ಕೆ ಸಾಕ್ಷಿ ಆದರು.
'ಕೋಳಿ ಕಳ್ರು' ಚಿತ್ರಕ್ಕೆ ನಿರ್ಮಾಪಕರಾಗಿದ್ದ ರಿಚರ್ಡ್ ಕಾರ್ಕಳ ಈ ಚಿತ್ರಕ್ಕೂ ಬಂಡವಾಳ ಹಾಕುತ್ತಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್ ಕುಮಾರ್ ಅತ್ತಾವರ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಚಿತ್ರಕ್ಕೆ ನಾಯಕ ನಟನಾಗಿ ಸ್ವರಾಜ್ ಶೆಟ್ಟಿ, ನಾಯಕಿಯಾಗಿ ಶಿಲ್ಪಾ ಶೆಟ್ಟಿ ಹಾಗೂ ಪ್ರಮುಖ ಹಾಸ್ಯ ಪಾತ್ರಗಳಲ್ಲಿ ಅರವಿಂದ ಬೋಳಾರ್, ದೀಪಕ್ ರೈ, ಉಮೇಶ್ ಮಿಜಾರ್, ಸುನಿಲ್ ನೆಲ್ಲಿಗುಡ್ಡೆ, ಜೆ.ಪಿ ತೂಮಿನಾಡ್, ಮನೋಜ್ ಕಾರ್ಕಳ, ಪ್ರಕಾಶ್ ತೂಮಿನಾಡ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ. ಇಂದು ಮುಹೂರ್ತ ಮುಗಿಸಿರುವ ಈ ಚಿತ್ರದ ಚಿತ್ರೀಕರಣ ಸಸಿಹಿತ್ಲು ಬಳಿ 25 ದಿನಗಳಲ್ಲಿ ಒಂದೇ ಹಂತದಲ್ಲಿ ನಡೆಯಲಿದೆ.