Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಯ್ ಫ್ರೆಂಡ್ ಆತ್ಮಹತ್ಯೆ: ಆಘಾತಗೊಂಡ ಗಾಯಕಿ ರೇಣು ಸ್ಥಿತಿ ಗಂಭೀರ
ಕಿರುತೆರೆಯ ಖ್ಯಾತ ಗಾಯನ ಶೋಗಳಲ್ಲಿ ಒಂದಾಗಿರುವ 'ಇಂಡಿಯನ್ ಐಡಲ್ ಸೀಸನ್ 10'ನ ಸ್ಪರ್ಧಿ ರೇಣು ನಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬಾಯ್ ಫ್ರೆಂಡ್ ಆತ್ಮಹತ್ಯೆ ಮಾಡಿಕೊಂಡ ನಂತರ ರೇಣು ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ರಾಜಸ್ಥಾನ ಮೂಲದ ಗಾಯಕಿ ರೇಣು, ರವಿ ಶಂಕರ್ ಎನ್ನುವವರನ್ನು ಪ್ರೀತಿಸುತ್ತಿದ್ದರಂತೆ. ಇತ್ತೀಚಿಗೆ ರೇಣು ತನ್ನ ಬಾಯ್ ಫ್ರೆಂಡ್ ರವಿ ಶಂಕರ್ ಜೊತೆ ಮನೆ ಬಿಟ್ಟು ಓಡಿಹೋಗಿದ್ದರು. ಈ ಸಂಬಂಧ ರೇಣು ತಂದೆ, ಜುಲೈ 1ರಂದು ರವಿ ಶಂಕರ್ ವಿರುದ್ಧ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಿದ್ದರು. ಮಗಳನ್ನು ಮನವೊಲಿಸಿ ರವಿ ಕರೆದುಕೊಂಡು ಹೋಗಿದ್ದಾರೆ ಎಂದು ರೇಣು ತಂದೆ ಆರೋಪಿಸಿದ್ದರು. ಮುಂದೆ ಓದಿ...
ಮ್ಯೂಸಿಕ್ ಮಾಫಿಯಾ ವಿರುದ್ಧ ದಂಗೆ?: ಸೋನು ನಿಗಂ ಬೆಂಬಲಕ್ಕೆ ಅದ್ನಾನ್ ಸಮಿ, ಅಲಿಶಾ
ವಿಷ ಸೇವಿಸಿ ಬಾಯ್ ಫ್ರೆಂಡ್ ಆತ್ಮಹತ್ಯೆ
ಆಗಸ್ಟ್ 24ರಂದು ಇಬ್ಬರೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಇಬ್ಬರ ಬಳಿ ಹೇಳಿಕೆ ಪಡೆದು ಮನೆಯವರ ಕೈಗೆ ಇವರನ್ನು ಒಪ್ಪಿಸಿದ್ದರು. ಮನೆಗೆ ತೆರಳಿದ್ದ ರವಿ ಗುರುವಾರ ರಾತ್ರಿ ವಿಷ ಸೇವಿಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ರವಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ರೇಣು
ಬಾಯ್ ಫ್ರೆಂಡ್ ಸಾವಿನ ಸುದ್ದಿ ಕೇಳಿ ರೇಣು ಆಘಾತಗೊಂಡು ಮೂರ್ಛೆ ಹೋಗಿದ್ದಾರೆ. ನಂತರ ರೇಣು ಅವರನ್ನು ಮಿತ್ತಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರೇಣುಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ ಮೇಲೆ ಲೈಂಗಿಕ ಕಿರುಕುಳ ಆರೋಪ
ಬಾಯ್ ಫ್ರೆಂಡ್ ಗೆ ಮದುವೆಯಾಗಿ ಮಕ್ಕಳಿದ್ದಾರೆ
ರವಿಗೆ 27 ವರ್ಷ ವಯಸ್ಸಾಗಿದ್ದು, ಆಗಲೇ ಒಂದು ಮದುವೆಯಾಗಿದೆ. ಇಬ್ಬರು ಮಕ್ಕಳು ಸಹ ಇದ್ದಾರೆ. ರವಿ, ರೇಣು ಮನೆಯಲ್ಲಿ ತಬಲಾ ಕ್ಲಾಸ್ ತೆಗೆದುಕೊಳ್ಳುತ್ತಿದ್ದರಂತೆ. ಈ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಶುರುವಾಗಿದೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ಗೆ ಕೊರೊನಾ ಸೋಂಕು ತಗುಲಿದ್ದು ಯಾರಿಂದ?
ಇಂಡಿಯನ್ ಐಡಲ್ ಶೋ ಬಗ್ಗೆ...
ಸೋನಿ ಟಿವಿಯಲ್ಲಿ ಪ್ರಸಾರವಾಗುವ ಇಂಡಿಯನ್ ಐಡಲ್ ಜನಪ್ರಿಯ ಗಾಯನ ಶೋಗಳಲ್ಲಿ ಒಂದಾಗಿದೆ. ಈ ಕಾರ್ಯಕ್ರಮದ ಜಡ್ಜ್ ಆಗಿ ಖ್ಯಾತ ಗಾಯಕಿ ನೇಹಾ ಕಕ್ಕರ್, ಅನು ಮಲ್ಲಿಕ್ ಮತ್ತು ವಿಶಾಲ್ ದದ್ಲಾನಿ ಇದ್ದಾರೆ. ಈ ಶೋ ದೇಶದಾದ್ಯಂತ ಅತ್ಯುತ್ತಮ ಗಾಯನ ಪ್ರತಿಭೆಗಳನ್ನು ಆಯ್ಕೆ ಮಾಡಿ ಅವರಿಗೆ ವೇದಿಕೆ ಕಲ್ಪಿಸಿ ಕೊಡುತ್ತಿದೆ. ಇಂಡಿಯನ್ ಐಡಲ್ ಸೀಸನ್ 10ರಲ್ಲಿ ರೇಣು ನಗರ್ ಸ್ಪರ್ಧಿಯಾಗಿದ್ದರು. ವಿನ್ನರ್ ಪಟ್ಟ ಸಿಗದಿದ್ದರೂ ಅದ್ಭುತ ಗಾಯನದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು.