Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗಳಿಂದ ತಂದೆಯ ಅಂತ್ಯಸಂಸ್ಕಾರ: 'ಕನ್ನಡತಿ' ಧಾರವಾಹಿ ಪ್ರೇರಣೆ
ಕನ್ನಡದ ಜನಪ್ರಿಯ ಧಾರವಾಹಿ 'ಕನ್ನಡತಿ' ಇಂದ ಪ್ರೇರಣೆ ಪಡೆದು ಕುಟುಂಬವೊಂದು ಸಂಪ್ರದಾಯವನ್ನು ಮುರಿದು ಹೊಸ ಸಂಪ್ರದಾಯವನ್ನು ಕಟ್ಟಿದ ಘಟನೆ ನಡೆದಿದೆ.
ಗಂಡು ಮಕ್ಕಳಷ್ಟೆ ಅಂತಿಮ ಸಂಸ್ಕಾರ ಮಾಡುವ ಪದ್ಧತಿ ಬಹು ಹಳೆಯ ಕಾಲದಿಂದಲೂ ಚಾಲ್ತಿಯಲ್ಲಿದೆ. ಹೆಣ್ಣು ಮಕ್ಕಳು ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಆದರೆ ಕನ್ನಡತಿ ಧಾರವಾಹಿಯಲ್ಲಿ ನಾಯಕಿ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡುವ ದೃಶ್ಯವಿದೆ. ಬಹು ಚರ್ಚೆ-ವಿಚಾರ ವಿಮರ್ಶೆಗಳ ಬಳಿಕ ಧಾರವಾಹಿ ನಾಯಕಿ ತಂದೆಯ ಅಂತ್ಯ ಸಂಸ್ಕಾರ ಮಾಡುತ್ತಾರೆ.
ಇದೇ ದೃಶ್ಯವನ್ನು ಪ್ರೇರಣೆಯಾಗಿ ಪಡೆದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀತದ ಊರೊಂದರಲ್ಲಿ ಮಹಿಳೆಯಿಂದ ಆಕೆಯ ತಂದೆಗೆ ಅಂತ್ಯ ಸಂಸ್ಕಾರ ಮಾಡಿಸಲಾಗಿದೆ. ಅಲ್ಲಿನ ಜನರೂ ಸಹ ಈ ಪ್ರಗತಿಪರ ನಡೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಕಾರವಾರ ಬಳಿಕ ಕುರ್ನಿಪೇಟೆಯಲ್ಲಿ ಚಂದ್ರಕಾಂತ್ ಬುದೊ ಎಂಬುವರು ಶುಕ್ರವಾರ ನಿಧನರಾದರು. ಅವರಿಗೆ ಒಂಬತ್ತು ಮಂದಿ ಹೆಣ್ಣು ಮಕ್ಕಳು. ಮೂವರು ಹೆಣ್ಣು ಮಕ್ಕಳಿಗೆ ಮದುವೆಯಾಗಿದೆ. ಆದರೆ ಅವರ ಅಳಿಯಂದಿರು ಅಂತಿಮ ಶಾಸ್ತ್ರ ಮಾಡಲಿಲ್ಲ.
ಆಗ ಊರಿನವರೇ ಸೇರಿ ಹೆಣ್ಣು ಮಗಳ ಕೈಯಲ್ಲಿಯೇ ಚಂದ್ರಕಾಂತ್ ಬುದೊ ಅವರಿಗೆ ಅಂತಿಮ ಸಂಸ್ಕಾರ ಮಾಡಿಸಿದರು. ಗಂಡು ಮಕ್ಕಳೇ ಅಂತಿಮ ಸಂಸ್ಕಾರ ಮಾಡಬೇಕೆಂಬ ಅಕಾರ ಸಂಪ್ರದಾಯವನ್ನು ಮುರಿದು ಹೊಸದಕ್ಕೆ ನಾಂದಿ ಹಾಡಲಾಯಿತು. ಈ ಘಟನೆಗೆ ಪ್ರೇರಣೆ ಒದಗಿಸಿದ್ದು ಕನ್ನಡತಿ ಧಾರವಾಹಿ.