Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಶ್ರೀ ವಾಹಿನಿಯಲ್ಲಿ ಶಂಕರನಾಗ್ ಮಾಲ್ಗುಡಿ ಡೇಸ್
ಹೆಮ್ಮೆಯ ಕನ್ನಡಿಗ, ಆಟೋರಾಜ ಶಂಕರನಾಗ್ ಅವರಿಗೆ ರಾಷ್ಟ್ರಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ಧಾರವಾಹಿ ಇದು. ಆರ್ ಕೆ ನಾರಾಯಣ್ ಅವರ ಕಥೆಯನ್ನು ಆಧರಿಸಿ ಶಂಕರನಾಗ್ ಈ ಧಾರವಾಹಿಯನ್ನು ನಿರ್ದೇಶನ ಮಾಡಿದ್ದರು. 1990ರಲ್ಲಿ ಅನಾರೋಗ್ಯದ ಕಾರಣ ಚೆನ್ನೈಗೆ ಸ್ಥಳಾಂತರಗೊಳ್ಳುವ ಮೊದಲು ಆರ್ ಕೆ ನಾರಾಯಣ್ ಅವರು ಮೈಸೂರಿನ ಯಾದವಗಿರಿ ಬಡಾವಣೆಯ ಮನೆಯಲ್ಲಿ ಎರಡು ದಶಕಗಳ ಕಾಲ ಜೀವಿಸಿದ್ದರು.
1986 ರಲ್ಲಿ ಇದು ದೂರದರ್ಶನದಲ್ಲಿ ಇದು ಮೊದಲಬಾರಿಗೆ ಪ್ರಸಾರವಾಗಿತ್ತು. ಕರ್ನಾಟಕದ ಆಗುಂಬೆಯಲ್ಲಿ ಈ ಧಾರವಾಹಿಯನ್ನು ಚಿತ್ರೀಕರಣ ಮಾಡಲಾಗಿತ್ತು. ಅನಂತನಾಗ್, ಲೋಕನಾಥ್, ರಮೇಶ್ ಭಟ್, ವೈಶಾಲಿ ಕಾಸರವಳ್ಳಿ, ಮನದೀಪ್ ರಾಯ್, ಮಾಸ್ಟರ್ ಮಂಜುನಾಥ್, ಗಿರೀಶ್ ಕಾರ್ನಾಡ್ ಮುಂತಾದವರು ಈ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಜನಶ್ರೀ ಕನ್ನಡ ವಾಹಿನಿ ತನ್ನ ವಿಶಿಷ್ಟ ಕಾರ್ಯಕ್ರಮಗಳ ಮೂಲಾಕ ಈಗಾಗಲೇ ಅಪಾರ ಸಂಖ್ಯೆಯ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷವಾಗಿ ಕಾರ್ಯಕ್ರಮ ವಿಭಾಗದಲ್ಲಿ ಅನೇಕ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದು ಅವುಗಳಲ್ಲಿ ಧಾರಾವಾಹಿಯ ಪ್ರಸಾರ ಕೂಡಾ ಒಂದು.
ಸದಾ ಕ್ರಿಯಾಶೀಲರಾಗಿದ್ದ ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕಲ್ಪಿಸಿದವರು. ಕಿರುತೆರೆಯಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಶಂಕರಣ್ಣ ಮುಖ್ಯವಾಗಿ ಯುವ ನಿರ್ದೇಶಕರು, ಕಲಾವಿದರಿಗೆ ಸ್ಫೂರ್ತಿಯಾಗಿದ್ದರು.
ಗುಡ್ಡದ ಭೂತ ಧಾರವಾಹಿಯನ್ನು ಪ್ರಸಾರ ಮಾಡುವ ಮೂಲಕ ದೇಶ ನ್ಯೂಸ್ ಚಾನಲ್ ಗಳ ಇತಿಹಾಸದಲ್ಲೇ ಹೊಸ ಭಾಷ್ಯ ಬರೆದಿರುವ ಜನಶ್ರೀ ವಾಹಿನಿಗೆ ಧಾರಾವಾಹಿ ಪ್ರಸಾರಕ್ಕೆ ನೋಡುಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.