Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರಿಗಮಪ 14 : ಎರಡನೇ ಸ್ಥಾನವನ್ನು ಹಂಚಿಕೊಂಡ ಕೀರ್ತನ, ಜ್ಞಾನೇಶ್
Recommended Video
ಈ ಬಾರಿಯ ಸರಿಗಮಪ ಕಾರ್ಯಕ್ರಮ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಒಬ್ಬರಿಗಿಂತ ಒಬ್ಬರು ಪೈಪೋಟಿ ನೀಡುವಂತೆ ಹಾಡುತ್ತಿದ್ದ ಮಕ್ಕಳಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಇತ್ತು. ಇನ್ನು ನಿನ್ನೆ ಆ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ವಿಶ್ವ ಪ್ರಸಾದ್ ಕಾರ್ಯಕ್ರಮದ ವಿನ್ನರ್ ಆಗಿದ್ದಾರೆ.
ವಿಶೇಷ ಅಂದರೆ, ಸರಿಗಮಪ ಸೀಸನ್ 14 ಕಾರ್ಯಕ್ರಮದಲ್ಲಿ ಇಬ್ಬರು ಸ್ಪರ್ಧಿಗಳು ಎರಡನೇ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಹುಡುಗಿ ಕೀರ್ತನ ಹಾಗೂ ಉತ್ತರ ಕರ್ನಾಟಕದ ಹುಡುಗ ಜ್ಞಾನೇಶ್ವರ್ ರನ್ನರ್ ಅಪ್ ಆಗಿದ್ದಾರೆ. ಮೂರನೇ ಸ್ಥಾನವನ್ನು ರದ್ದು ಮಾಡಿ ಎರಡನೇ ಸ್ಥಾನವನ್ನು ಈ ಇಬ್ಬರು ಮಕ್ಕಳಿಗೆ ನೀಡಲಾಗಿದೆ.
'ಸರಿಗಮಪ 14' ಗ್ರಾಂಡ್ ಫಿನಾಲೆಯ ವಿನ್ನರ್ ಆದ ಬೆಳಗಾವಿಯ ವಿಶ್ವ ಪ್ರಸಾದ್
ಕೀರ್ತನ ಫೈನಲ್ ಗೆ ಆಯ್ಕೆ ಆದ ಏಕೈಕ ಹುಡುಗಿ ಆಗಿದ್ದರು. ಫೈನಲ್ ನಲ್ಲಿನ ಎರಡು ಸುತ್ತಿಗಳಲ್ಲಿ ಕಷ್ಟದ ಹಾಡನ್ನು ಆಯ್ಕೆ ಮಾಡಿ ಸುಂದರವಾಗಿ ಹಾಡಿ ತೀರ್ಪುಗಾರರ ಮೆಚ್ಚುಗೆ ಗಳಿಸಿದರು. ಜ್ಞಾನೇಶ್ ಸಹ ಗ್ರಾಂಡ್ ಫಿನಾಲೆಗೆ ತಕ್ಕಂತೆ ಹಾಡಿ ಗೋಲ್ಡನ್ ಬಜಾರ್ ಪಡೆದರು. ಈ ಇಬ್ಬರ ಪ್ರತಿಭೆಯನ್ನು ಪರಿಗಣಿಸಿ ಇಬ್ಬರನ್ನು ರನ್ನರ್ ಆಪ್ ಮಾಡಲಾಗಿದೆ.
ರನ್ನರ್ ಅಪ್ ಆಗಿರುವ ಕೀರ್ತನ ಹಾಗೂ ಜ್ಞಾನೇಶ್ ಟ್ರೋಫಿಯ ಜೊತೆಗೆ ತಲ ಎರಡು ಲಕ್ಷ ರೂಪಾಯಿಯನ್ನು ಬಹುಮಾನವಾಗಿ ಪಡೆದಿದ್ದಾರೆ.