Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೊತೆ ಜೊತೆಯಲಿ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಆಸ್ಪತ್ರೆಗೆ ದಾಖಲು
ಜನಪ್ರಿಯ ಧಾರಾವಾಹಿ 'ಜೊತೆ ಜೊತೆಯಲಿ' ನಿರ್ದೇಶಕ ಆರೂರು ಜಗದೀಶ್ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗದೀಶ್ ಅವರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದ್ದು ಸುಮಾರು ಒಂದು ವಾರದಿಂದ ಅವರು ಮಣಿಪಾಲದ ಕಸ್ತೂರ ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended Video
ಜಗದೀಶ್ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಸಂಗತಿಯನ್ನು ಅವರ ಪತ್ನಿ ಹಾಗೂ ಜೆಎಸ್ ಪ್ರೊಡಕ್ಷನ್ನ ಮಾಲೀಕರಾದ ನಿರ್ಮಾಪಕಿ ಸ್ಮಿತಾ ಜಗದೀಶ್ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ರಿಯಾಲಿಟಿ ಶೋ: ಖಾಸಗಿ ಬದುಕು ಮನರಂಜನೆಯ ಸರಕು ಆಗಿದ್ದು ಇಲ್ಲಿಂದ...
ಆರೂರು ಜಗದೀಶ್ ಅವರ ಫೇಸ್ಬುಕ್ ಪುಟದಲ್ಲಿ ಈ ವಿಷಯ ಹಂಚಿಕೊಂಡಿರುವ ಸ್ಮಿತಾ, ಕೆಲವು ಒಳಾಂಗ ಸಮಸ್ಯೆಗಳಿಂದಾಗಿ ಜಗದೀಶ್ ಅವರನ್ನು ಒಂದು ವಾರದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಮ್ಮ ಸಂದೇಶಗಳಿಗೆ ಪ್ರಸ್ತುತ ಸ್ಪಂದಿಸುವ ಸ್ಥಿತಿಯಲ್ಲಿ ಅವರು ಇಲ್ಲ. ಹೀಗಾಗಿ ನಿಮ್ಮ ಎಲ್ಲರ ಜನ್ಮದಿನದ ಶುಭ ಹಾರೈಕೆಗಳಿಗೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದು ಸ್ಮಿತಾ ಹೇಳಿದ್ದಾರೆ.
ತಂದೆಯಾಗುತ್ತಿರುವ ಸಂಭ್ರಮದಲ್ಲಿ 'ರಾಧಾ ರಮಣ' ಖ್ಯಾತಿಯ ನಟ ಸ್ಕಂದ
ಉಡುಪಿ ಜಿಲ್ಲೆಯ ಬ್ರಹ್ಮಾವರದವರಾದ ಆರೂರು ಜಗದೀಶ್ ಅವರು ಭಾನುವಾರ ಜನ್ಮದಿನ ಆಚರಿಸಿಕೊಳ್ಳಬೇಕಿತ್ತು. ಆದರೆ ಆಸ್ಪತ್ರೆಯಲ್ಲಿರುವ ಕಾರಣದಿಂದ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿಲ್ಲ. ಲಾಕ್ ಡೌನ್ ಬಳಿಕ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಧಾರಾವಾಹಿ ಚಿತ್ರೀಕರಣ ಪ್ರಾರಂಭವಾಗಿತ್ತು. ಈಗ ಲಾಕ್ ಡೌನ್ ಇರುವ ಕಾರಣದಿಂದ ಮತ್ತೆ ಚಿತ್ರೀಕರಣ ನಿಲ್ಲಿಸಲಾಗಿದೆ ಎನ್ನಲಾಗಿದೆ.