For Daily Alerts
Don't Miss!
- Sports
ಗೆದ್ದ ಜಯ್ ಶಾ ಹಠ, ಪಾಕ್ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Technology
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ತೆಲುಗಿನ ಸೀರಿಯಲ್ ನಲ್ಲೂ ನಟ ಚಂದನ್ ಮಿಂಚಿಂಗ್.!
Tv
oi-Harshitha N
By Harshitha N
|
ಕನ್ನಡ ಕಿರುತೆರೆಯಲ್ಲಿ ನಟ ಚಂದನ್ ಚಿರಪರಿಚಿತ. 'ರಾಧಾ ಕಲ್ಯಾಣ' ಮತ್ತು 'ಲಕ್ಷ್ಮಿ ಬಾರಮ್ಮ' ಧಾರಾವಾಹಿಗಳ ಮೂಲಕ ಕರುನಾಡ ಮನೆ ಮನಗಳನ್ನು ತಲುಪಿದವರು ನಟ ಚಂದನ್. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ 'ಲಕ್ಷ್ಮಿ ಬಾರಮ್ಮ' ಧಾರಾವಾಹಿ ಚಂದನ್ ಗೆ ಖ್ಯಾತಿ ತಂದುಕೊಡ್ತು.
'ಲಕ್ಷ್ಮಿ ಬಾರಮ್ಮ' ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ, ಚಂದನ್ ಗೆ ಸಿನಿಮಾಗಳಲ್ಲಿ ನಟಿಸುವ ಅವಕಾಶ ಹುಡುಕೊಂಡು ಬಂದ್ವು. ಸಿನಿಮಾಗಾಗಿ 'ಲಕ್ಷ್ಮಿ ಬಾರಮ್ಮ' ಸೀರಿಯಲ್ ನಿಂದ ಚಂದನ್ ಹೊರಗುಳಿದರು. 'ಪರಿಣಯ', 'ಎರಡೊಂದ್ಲ ಮೂರು', 'ಲವ್ ಯೂ ಆಲಿಯಾ', 'ಪ್ರೇಮ ಬರಹ' ಮುಂತಾದ ಸಿನಿಮಾಗಳಲ್ಲಿ ಚಂದನ್ ನಟಿಸಿದರು.
ಸಿನಿಮಾಗಳಲ್ಲಿ ದೊಡ್ಡ ಬ್ರೇಕ್ ಸಿಗದ ಕಾರಣ ಚಂದನ್ ಯೂಟರ್ನ್ ಹೊಡೆದು ಸೀರಿಯಲ್ ಲೋಕಕ್ಕೆ ಮರಳಿದ್ದಾರೆ. ಸದ್ಯ ಚಂದನ್ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸರ್ವ ಮಂಗಳ ಮಾಂಗಲ್ಯೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇದೇ ಗ್ಯಾಪ್ ನಲ್ಲಿ ತೆಲುಗಿನ ಕಿರುತೆರೆಗೂ ಜಿಗಿದಿರುವ ಚಂದನ್, ಸ್ಟಾರ್ ಮಾ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸಾವಿತ್ರಮ್ಮಗಾರಿ ಅಬ್ಬಾಯಿ' ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ಮಿಂಚುತ್ತಿದ್ದಾರೆ. ಕಾಕತಾಳೀಯ ಅಂದ್ರೆ, 'ಸಾವಿತ್ರಮ್ಮಗಾರಿ ಅಬ್ಬಾಯಿ' ಸೀರಿಯಲ್ ನಲ್ಲೂ ''ಎರಡನೇ ಮದುವೆ'' ಕಾನ್ಸೆಪ್ಟ್ ಇದೆ. ಈ ಬಗ್ಗೆ ಚಂದನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ಒಟ್ನಲ್ಲಿ, ಕನ್ನಡ ಮತ್ತು ತೆಲುಗಿನ ಸೀರಿಯಲ್ ಗಳಲ್ಲಿ ಬಿಜಿಯಾಗಿರುವ ಚಂದನ್ ಸದ್ಯ ಯಾವುದೇ ಸಿನಿಮಾ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Actor Chandan is acting in Telugu serial Savitrammagari Abbayi.