Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಗುವಿನ ಅರಸನ ನೋವಿನ ಕಥೆ ಈ ವೀಕೆಂಡ್ ನಲ್ಲಿ ಅನಾವರಣ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಸಾಧಕರ ಸೀಟ್ ನಲ್ಲಿ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರು ಶೀಘ್ರದಲ್ಲೇ ವಿರಾಜಮಾನರಾಗುತ್ತಾರೆ ಎಂದು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ಅಲ್ವಾ?.
ಇನ್ನು ಈ ವಾರ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಸಾಧಕರ ಸೀಟ್ ನಲ್ಲಿ ಯಾರು ಕೂರುತ್ತಾರೆ ಎಂಬ ಕುತೂಹಲ ನಿಮಗಿತ್ತಲ್ವಾ, ಇದೀಗ ಆ ಕುತೂಹಲಕ್ಕೂ ತೆರೆ ಬಿದ್ದಿದೆ.[ರವಿ ಬೆಳಗೆರೆ ಮಾತಿನ ವೈಖರಿಗೆ ವೀಕ್ ಆದ ಮೈಕ್ ಬ್ಯಾಟರಿ]
ಹೌದು ಈ ವಾರ ವೀಕೆಂಡ್ ನಲ್ಲಿ ತಮ್ಮ ಸಾಧನೆಯನ್ನು ಮತ್ತು ನೆನಪುಗಳನ್ನು ಮೆಲುಕು ಹಾಕಲು ಬರುತ್ತಿರುವವರು ಬೇರಾರು ಅಲ್ಲ. ನಮ್ಮ ಕನ್ನಡದ ಖ್ಯಾತ ಕಾಮಿಡಿ ಕಿಂಗ್ ಸಾಧು ಮಹಾರಾಜ್ ಅವರು.
ಎಷ್ಟೋ ಮಂದಿ ಅತ್ತಾಗ ತಮ್ಮ ಕಾಮಿಡಿ ಮೂಲಕ ಅವರ ಕಣ್ಣೀರು ಒರೆಸುವ ಕೆಲಸ ಮಾಡಿರುವ ಸ್ಯಾಂಡಲ್ ವುಡ್ ನ ಕಾಮಿಡಿ ನಟ-ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರು ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಕಾಮಿಡಿ ಮಾಡುವ ಮೂಲಕ ಜನಮನ ಗೆದ್ದ ಈ ನಟ ತಾವು ಮಾಡಿದ ಸಾಧನೆಗೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಕಾಮಿಡಿ ಮಾಡಿ ಅನೇಕ ಜನರನ್ನು ಬಾಯ್ತುಂಬಾ ನಗಿಸಿ ನೋವಿನ ಕಣ್ಣೀರನ್ನು ತೊಡೆದು ಹಾಕಿದ ನಟ ಸಾಧು ಅವರ ಆ ನಗುವಿನ ಹಿಂದೆ ಅದೆಷ್ಟು ನೋವಿನ ಕಥೆ ಇರಬಹುದು ಎಂಬುದು ಯಾರಿಗೂ ಗೊತ್ತಿಲ್ಲ.
ಅದೆಲ್ಲವೂ ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ವೇದಿಕೆಯಲ್ಲಿ ಅನಾವರಣಗೊಳ್ಳಲಿದೆ. ಸಾಧು ಅವರ ಜೊತೆ ಅವರ ಪತ್ನಿ ಗೆಳೆಯರು ಹಾಗೂ ಚಿತ್ರರಂಗದ ಕೆಲವು ಕಲಾವಿದರು ಕೂಡ ಆಗಮಿಸಿದ್ದು, ಸಾಧು ಅವರ ಜೀವನದ ಕಥೆಗೆ ಸಾಥ್ ನೀಡಿದ್ದಾರೆ.
ಅಂತೂ ಈ ವೀಕೆಂಡ್ ನಲ್ಲಿ ಸಾಧು ಮಹಾರಾಜ್ ಅವರು ಬದುಕೆಂಬ ಪುಸ್ತಕದ ಪುಟಗಳನ್ನು ತಿರುವಿ ಹಾಕುವ ಮೂಲಕ ಮತ್ತೊಮ್ಮೆ ತಮ್ಮ ಹಳೇ ನೆನಪುಗಳತ್ತ ಜಾರಿ ಹೋಗಲಿದ್ದಾರೆ.