Don't Miss!
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋಲ್ಡನ್ ಸ್ಟಾರ್' ಗಣೇಶ್ ಬಗ್ಗೆ ದುನಿಯಾ ವಿಜಯ್ ಏನಂದರು.?
2006-07.... ನಟ ಗಣೇಶ್ ಹಾಗೂ ದುನಿಯಾ ವಿಜಯ್ ರವರ ನಸೀಬು ಬದಲಿಸಿದ ವರ್ಷಗಳು.
2006ರಲ್ಲಿ ಬಿಡುಗಡೆ ಆದ 'ಮುಂಗಾರು ಮಳೆ' ಸಿನಿಮಾ ಗಣೇಶ್ ಗೆ ಲಕ್ ತಂದುಕೊಟ್ಟರೆ, 2007ರಲ್ಲಿ ರಿಲೀಸ್ ಆದ 'ದುನಿಯಾ' ಸಿನಿಮಾದಿಂದಾಗಿ ವಿಜಿ ಬದುಕಿನ ಭಾಗ್ಯದ ಬಾಗಿಲು ತೆರೆಯಿತು.
ಅಸಲಿಗೆ, ಸಿನಿಮಾಗಳಲ್ಲಿ 'ಹೀರೋ' ಆಗಿ ಗುರುತಿಸಿಕೊಳ್ಳುವುದಕ್ಕೂ ಮುಂಚಿನಿಂದಲೂ ಗಣೇಶ್ ಹಾಗೂ ದುನಿಯಾ ವಿಜಯ್ ಪಕ್ಕಾ ದೋಸ್ತಿಗಳು. ಇವತ್ತು ಇಬ್ಬರೂ 'ಸ್ಟಾರ್' ನಟರು. ಆದರೂ, ಇಬ್ಬರ ದೋಸ್ತಿಯಲ್ಲಿ ಕೊಂಚ ಕೂಡ ವ್ಯತ್ಯಾಸ ಆಗಿಲ್ಲ. ಅದಕ್ಕೆ ಸಾಕ್ಷಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಆಡಿದ ಮಾತುಗಳು.
ಗಣೇಶ್ ಜೊತೆ ನಟಿಸಲು ಒಲ್ಲೆ ಎಂದಿದ್ದರು ಕನ್ನಡ ಚಿತ್ರರಂಗದ ನಾಯಕಿಯರು.!
ಗಣೇಶ್ ಮಾಡಿರುವ ಸಾಧನೆ ಕುರಿತು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ''ಹ್ಯಾಟ್ ಆಫ್'' ಹೇಳಿದರು.
'ಕಾಮಿಡಿ ಟೈಮ್' ಗಣೇಶ್ ನ ಹೀರೋ ಮಾಡ್ತಿದ್ದೀರಾ.. ತಲೆ ಕೆಟ್ಟಿದ್ಯಾ ನಿಮಗೆ.?
''ತಾಳ್ಮೆ ತುಂಬಾ ಇಟ್ಟುಕೊಂಡಿದ್ದರೆ, ದೊಡ್ಡ ಮಟ್ಟಕ್ಕೆ ಹೋಗಬಹುದು ಎನ್ನುವುದಕ್ಕೆ ಉದಾಹರಣೆಯೇ ನಮ್ಮ ಗಣೇಶ್. ನಿನ್ನ ಸಾಧನೆಗೆ ನಿಜವಾಗಲೂ ಹ್ಯಾಟ್ಸ್ ಆಫ್. ಅವತ್ತು ಬಾಡಿಗೆ ಕಟ್ಟಲು ಗಣೇಶ್ ಒದ್ದಾಡುತ್ತಿದ್ದ. ಈಗ ಅರಮನೆಯಲ್ಲಿ ಇದ್ದಾನೆ. ನನಗೆ ಅದು ತುಂಬಾ ಖುಷಿ'' ಎಂದರು ನಟ ದುನಿಯಾ ವಿಜಯ್.