Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ನಟರ ಸಮ್ಮಿಲನ
ದಶಕಗಳ ಕಾಲ ಕನ್ನಡ ಕಲಾಭಿಮಾನಿಗಳನ್ನ ರಂಜಿಸಿದ್ದ ದಿಗ್ಗಜ ಹಾಸ್ಯ ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಅಂತಹ ಯುವ ಕಲಾವಿದರ ಮುಂದೆ ಹಿರಿಯ ಹಾಸ್ಯನಟರು ಸ್ವಲ್ಪ ಹಿಂದಕ್ಕೆ ಸರಿದಿದ್ದಾರೆ. ಅಂತಹ ಕಲಾವಿದರು ಈಗ ನಿಮ್ಮ ಮನೆಗೆ ಬರ್ತಿದ್ದಾರೆ.
ಬ್ಯಾಂಕ್ ಜರ್ನಾಧನ್, ಉಮೇಶಣ್ಣ, ಲಕ್ಷ್ಮಿ ದೇವಿ, ಹೊನ್ನವಳ್ಳಿ ಕೃಷ್ಣ, ಬಿರಾದರ್ ಈ ಎಲ್ಲರೂ ಈ ವಾರಾಂತ್ಯಕ್ಕೆ ನಿಮ್ಮನ್ನು ಮನರಂಜಿಸಲು ಸಿದ್ದವಾಗಿದ್ದಾರೆ.
ಅರೇ, ವೀಕೆಂಡ್, ಮನರಂಜನೆ ಏನು ಅಂತ ಕನ್ ಫ್ಯೂಸ್ ಮಾಡ್ಕೋಬೇಡಿ. ಈ ಎಲ್ಲ ಕಾಲವಿದರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಕಾರ್ಯಕ್ರಮ 'ಭರ್ಜರಿ ಕಾಮಿಡಿ'ಗೆ ಅತಿಥಿಗಳಾಗಿ ಬಂದಿದ್ದಾರೆ.
ಈ ಮೂಲಕ 'ಭರ್ಜರಿ ಕಾಮಿಡಿ'ಯಲ್ಲಿ ಈ ವಾರ ಮಸ್ತ್ ಮನರಂಜನೆ ಸಿಗೋದಂತೂ ಗ್ಯಾರೆಂಟಿ. ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ನಟಿ ರಾಗಿಣಿ, ಹಿರಿಯ ನಟ ದೊಡ್ಡಣ್ಣ, ನಿರ್ದೇಶಕ ಗುರುಪ್ರಸಾದ್ ಈ ಕಾರ್ಯಕ್ರಮದ ತಿರ್ಪುಗಾರರಾಗಿದ್ದು, 'ಅಗ್ನಿಸಾಕ್ಷಿ'ಯ ಖ್ಯಾತಿಯ ವೈಷ್ಣವಿ ನಿರೂಪಣೆ ಮಾಡುತ್ತಿದ್ದಾರೆ.