Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಪ್ರೇಮ್ ಈ ಚಿತ್ರವನ್ನ ಮಾಡಲೇಬಾರದಾಗಿತ್ತಂತೆ.!
Recommended Video
'ಕರಿಯ', 'ಎಕ್ಸ್ ಕ್ಯೂಸ್ ಮಿ' ಮತ್ತು 'ಜೋಗಿ' ಚಿತ್ರಗಳನ್ನು ನಿರ್ದೇಶಿಸಿ, ಯಶಸ್ವಿಯಾಗಿ, 'ಹ್ಯಾಟ್ರಿಕ್ ಡೈರೆಕ್ಟರ್' ಎಂಬ ಹಣೆಪಟ್ಟಿ ಪಡೆದ ಪ್ರೇಮ್ ಬಳಿಕ 'ಪ್ರೀತಿ ಏಕೆ ಭೂಮಿ ಮೇಲಿದೆ?' ಎಂದು ಪ್ರಶ್ನಿಸುವ ಮೂಲಕ ನಾಯಕ ನಟರಾದರು.
ಗಾಂಧಿನಗರದಲ್ಲಿ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡಿದ್ದ 'ಪ್ರೀತಿ ಏಕೆ ಭೂಮಿ ಮೇಲಿದೆ.?' ಸಿನಿಮಾ ಬಿಡುಗಡೆ ಆದ್ಮೇಲೆ ಮಕಾಡೆ ಮಲಗಿತು. ಸ್ಯಾಂಡಲ್ ವುಡ್ ನಲ್ಲಿ ಮೂರು ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿದ್ದ ಪ್ರೇಮ್, ನಾಯಕನಾದ್ಮೇಲೆ ಮೊದಲ ಸೋಲು ಕಂಡರು.
ಹೀಗಾಗಿ, 'ಪ್ರೀತಿ ಏಕೆ ಭೂಮಿ ಮೇಲಿದೆ.?' ಸಿನಿಮಾ ಮಾಡಲೇಬಾರದಿತ್ತು ಎಂಬ ವಿಷಾದ ಈಗಲೂ ನಿರ್ದೇಶಕ ಪ್ರೇಮ್ ರನ್ನ ಕಾಡುತ್ತಿದೆ. ಅದನ್ನೇ 'ನಂ.1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಪ್ರೇಮ್ ಹೊರಹಾಕಿದರು.
ಪ್ರೀತಿ ಹುಡುಕುತ್ತಿರುವ ಪ್ರೇಮ್ ಗೆ ಐದೇ ಐದು ಪ್ರಶ್ನೆಗಳು!
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ 'ನಂ.1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ಭಾಗವಹಿಸಿದ್ದರು.
ಕಾರ್ಯಕ್ರಮದ ಮೊದಲ ಸೆಗ್ನೆಂಟ್ (ಸತ್ಯನಾ... ಧೈರ್ಯನಾ...) ಸತ್ಯ ಹೇಳಲು ಪ್ರೇಮ್ ರೆಡಿ ಆದರು. ಅಗ, ಪ್ರೇಮ್ ಗೆ ಎದುರಾದ ಮೊದಲ ಪ್ರಶ್ನೆ - ''ನೀವು ಡೈರೆಕ್ಷನ್ ಮಾಡಿರುವ ಚಿತ್ರಗಳ ಪೈಕಿ ಯಾವುದು ಮಾಡಬಾರದಿತ್ತು ಅಂತ ನಿಮಗೆ ಅನಿಸಿತ್ತು''. ಶಿವಣ್ಣ ಕೇಳಿದ ಈ ಪ್ರಶ್ನೆಗೆ ಪ್ರೇಮ್ ಕೊಟ್ಟ ಉತ್ತರ - ''ಪ್ರೀತಿ ಏಕೆ ಭೂಮಿ ಮೇಲಿದೆ''.