Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶಸ್ಸಿನ ಅಮಲು ಗಣೇಶ್ ನೆತ್ತಿಗೇರಿರಲಿಲ್ಲ: ಬಂದ ದಾರಿ ಮರೆಯಲಿಲ್ಲ.!
ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಆಗಬೇಕು ಎಂದು ಕನಸು ಕಾಣುತ್ತಿದ್ದ ಗಣೇಶ್ ಗೆ ಅದೃಷ್ಟ ಖುಲಾಯಿಸಿದ ಸಿನಿಮಾ 'ಮುಂಗಾರು ಮಳೆ'.
ಎಲ್ಲರಿಗೂ ಗೊತ್ತಿರುವ ಹಾಗೆ, 'ಮುಂಗಾರು ಮಳೆ' ಬ್ಲಾಕ್ ಬಸ್ಟರ್ ಸಿನಿಮಾ. ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮಟ್ಟದ ಕಲೆಕ್ಷನ್ ಮಾಡಿದ 'ಮುಂಗಾರು ಮಳೆ' ಸಿನಿಮಾದ ಬಳಿಕ ಗಣೇಶ್ ರವರ ಬೇಡಿಕೆ ಗಾಂಧಿನಗರದಲ್ಲಿ ಹೆಚ್ಚಾಯ್ತು.
ಗಣೇಶ್ ಜೊತೆ ನಟಿಸಲು ಒಲ್ಲೆ ಎಂದಿದ್ದರು ಕನ್ನಡ ಚಿತ್ರರಂಗದ ನಾಯಕಿಯರು.!
'ಮಳೆ ಹುಡುಗ' ಗಣೇಶ್ ಗೆ ಕೋಟಿಗಟ್ಟಲೆ ಸಂಭಾವನೆ ಕೊಡಲು ನಿರ್ಮಾಪಕರು ಮುಂದೆ ಬಂದರು. ಆದ್ರೆ, ಯಶಸ್ಸಿನ ಅಮಲನ್ನ ನೆತ್ತಿಗೇರಿಸಿಕೊಳ್ಳದೇ... ನಿರ್ಮಾಪಕರಿಗೆ ಮಾತು ಕೊಟ್ಟ ಹಾಗೆ ಗಣೇಶ್ ನಡೆದುಕೊಂಡರು. ಅದಕ್ಕೆ ಸಾಕ್ಷಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ನಿರ್ಮಾಪಕ ರಮೇಶ್ ಯಾದವ್ ಆಡಿದ ಮಾತುಗಳು.
'ಕಾಮಿಡಿ ಟೈಮ್' ಗಣೇಶ್ ನ ಹೀರೋ ಮಾಡ್ತಿದ್ದೀರಾ.. ತಲೆ ಕೆಟ್ಟಿದ್ಯಾ ನಿಮಗೆ.?
ಗಣೇಶ್ ಅಭಿನಯದ 'ಕೃಷ್ಣ' ಚಿತ್ರಕ್ಕೆ ರಮೇಶ್ ಯಾದವ್ ಬಂಡವಾಳ ಹೂಡಿದ್ದರು. ''ಚಿಕ್ಕ ಯಶಸ್ಸಿಗೆ ಚೇಂಜಸ್ ಕಾಣುವ ಈ ಪ್ರಪಂಚದಲ್ಲಿ, ಗಣೇಶ್ ಜೊತೆ ನಾನು ಮಾತನಾಡಿದ ಅಮೌಂಟ್ ಆಗ ಹದಿನೈದು ಲಕ್ಷ. 'ಮುಂಗಾರು ಮಳೆ' ಸಕ್ಸಸ್ ಆದ್ಮೇಲೆ, ಗಣೇಶ್ ಗೆ ಕೋಟಿ ಕೋಟಿ ಕೊಡಲು ಎಷ್ಟೋ ಜನ ರೆಡಿ ಇದ್ದರು. ಆದ್ರೆ, ಒಂದು ಪದ ಕೂಡ ಮಾತನಾಡದೆ, ನಾನು ಎಷ್ಟು ಮಾತನಾಡಿದ್ದೆನೋ... ಅದರಲ್ಲಿಯೇ ಸಿನಿಮಾ ಮಾಡಿಕೊಟ್ಟರು'' ಎಂದು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ರಮೇಶ್ ಯಾದವ್ ಹೇಳಿದರು.
ಕಷ್ಟದಲ್ಲಿಯೇ ಬೆಳೆದು ಬಂದ ಗಣೇಶ್ ಗೆ ಅದೃಷ್ಟ ಖುಲಾಯಿಸಿದರೂ, ಅವರು ಮಾತ್ರ ಬಂದ ದಾರಿಯನ್ನು ಮರೆತಿರಲಿಲ್ಲ ಎಂಬುದು ಈ ಮಾತುಗಳಲ್ಲಿಯೇ ಸ್ಪಷ್ಟ.