Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀವದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿ ನಟ
Recommended Video
ಕನ್ನಡ ಕಿರುತೆರೆಯ ಮತ್ತೊಬ್ಬ ನಟ ನಿಶ್ಚಿತಾರ್ಥ ಮಾಡಿಕೊಂಡಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿಯ ನಟ ಭವಾನಿ ಸಿಂಗ್ ಎಂಗೇಜ್ ಆಗಿದ್ದಾರೆ.
ಕಿರುತೆರೆಗೆ 'ಮಾಸ್ಟರ್ ಪೀಸ್' ಎಂಟ್ರಿ: ಖ್ಯಾತ ಧಾರಾವಾಹಿಯಲ್ಲಿ ಶಾನ್ವಿ ನಟನೆ
ಪಂಕಜಾ ಶಿವಣ್ಣ ಎಂಬುವವರ ಜೊತೆಗೆ ಭವಾನಿ ಸಿಂಗ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭವಾನಿ ಸಿಂಗ್ ಮತ್ತು ಪಂಕಜಾ ಇಬ್ಬರು 2 ವರ್ಷಗಳಿಂದ ಸ್ನೇಹ ಹೊಂದಿದ್ದಾರೆ. ಬರೀ ಖುಷಿಯಲ್ಲಿ ಮಾತ್ರಲ್ಲದೆ, ಭವಾನಿ ಸಿಂಗ್ ಕಷ್ಟದ ದಿನದಲ್ಲಿಯೂ ಪಂಕಜಾ ಅವರ ಜೊತೆಗೆ ನಿಂತಿದ್ದರು. ಹೀಗಾಗಿ ಈಕೆಯೇ ನನಗೆ ಸರಿಯಾದ ಜೋಡಿ ಎಂದು ಭವಾನಿ ನಿರ್ಧಾರ ಮಾಡಿದ್ದಾರೆ.
ಪಂಕಜಾರನ್ನು ಪ್ರೀತಿಸಿದ ಭವಾನಿ ಸಿಂಗ್ ಪ್ರಮೋಸ್ ಮಾಡಿದರು. ಇಬ್ಬರೂ ಒಬ್ಬರನ್ನೊಬ್ಬರೂ ಪ್ರೀತಿಸಿ, ಈಗ ಮದುವೆ ಆಗುತ್ತಿದ್ದಾರೆ. ನಿಶ್ಚಿತಾರ್ಥ ಆಗಿರುವ ಸಂತಸವನ್ನು ಭವಾನಿ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಭವಾನಿ ಸಿಂಗ್ 'ಚರಣದಾಸಿ' ಹಾಗೂ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹೊಸದಾಗಿ ಶುರು ಆಗಿರುವ ಕಲರ್ಸ್ ಕನ್ನಡದ 'ರಕ್ಷಾ ಬಂಧನ' ಸೀರಿಯಲ್ ನಲ್ಲಿಯೂ ನಾಯಕನಾಗಿದ್ದಾರೆ.