Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇವೇಗೌಡರ ಗೂಡು ಸೇರಿದ ಟಿವಿ ನಟ ರವಿಕಿರಣ್
ಆದರೆ ಅವರು ಜೆಡಿಎಸ್ ಪಕ್ಷಕ್ಕೆ ಇನ್ನೂ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಅವರು ದೇವೇಗೌಡರನ್ನು ಔಪಚಾರಿಕವಾಗಿ ಮಾತನಾಡಿಸಿಕೊಂಡು ಅವರ ಆಶೀರ್ವಾದ ಪಡೆದಿದ್ದಾರೆ ಅಷ್ಟೇ. ಇನ್ನೇನು ಆರು ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಅವರ ಇಂದಿನ ಭೇಟಿ ರಾಜಕೀಯ ಸೇರ್ಪಡೆಗೆ ಸೂಚನೆಯೇ?
ಮುಂಬರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೋ ಅಥವಾ ಜೆಡಿಎಸ್ ಪಕ್ಷದ ಕಾರ್ಯಕರ್ತರಾಗಿ ತಮ್ಮ ಕೈಲಾದ ಸಹಾಯ ಮಾಡುತ್ತಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರ ದಿಢೀರ್ ಭೇಟಿ ಕಿರುತೆರೆ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಅವರು ಕಿರುತೆರೆ ಕ್ಷೇತ್ರಕ್ಕೆ ತಮ್ಮದೇ ಆದಂತಹ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಸದಸ್ಯರನ್ನೊಳಗೊಂಡ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೂಲಕ ಜೆಡಿಎಸ್ ಗೆ ಅವರ ಅಳಿಲು ಸೇವೆ ಸಿಗುತ್ತಾ? ಕಾದುನೋಡೋಣ.
ರವಿಕಿರಣ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹಳೆಯ ಗೆಳೆಯ. ತೆಲುಗಿನ ಖ್ಯಾತ ನಟ ಎಸ್ ವಿ ರಂಗಾರಾವ್ ಅವರ ಮೊಮ್ಮಗ. ಕಿರುತೆರೆಯ ರವಿಚಂದ್ರನ್ ಎಂದೇ ಖ್ಯಾತರಾದವರು. ಕಿರುತೆರೆಯ ಕನಸುಗಾರ ಎಂದರೂ ತಪ್ಪಿಲ್ಲ. (ಒನ್ಇಂಡಿಯಾ ಕನ್ನಡ)