Don't Miss!
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನುಡಿದಂತೆ ನಡೆದ ತೇಜಸ್: 'ಕನ್ನಡದ ಕೋಟ್ಯಧಿಪತಿ'ಯಲ್ಲಿ ಗೆದ್ದ ಹಣ ಸರ್ಕಾರಿ ಶಾಲೆಗೆ.!
ತಾವು ವಿದ್ಯೆ ಕಲಿತ ಶಾಲೆಯನ್ನು ಉಳಿಸಿ, ಬೆಳೆಸುವ ಮನಃಸ್ಥಿತಿ ಈಗಿನ ಕಾಲದಲ್ಲಿ ಯಾರಿಗಿದೆ ಹೇಳಿ.? ದುಡ್ಡೇ ದೊಡ್ಡಪ್ಪ ಎನ್ನುವ ಈ ಯುಗದಲ್ಲಿ ಶಾಲೆಗೆ ಒಳಿತು ಮಾಡುವ ಗುಣ ಹೊಂದಿರುವವರು ತೀರಾ ಅಪರೂಪ. ಅಂತಹ ಅಪರೂಪದ ಹುಡುಗ ಕಾಣಿಸಿಕೊಂಡಿದ್ದು 'ಕನ್ನಡದ ಕೋಟ್ಯಧಿಪತಿ' ವೇದಿಕೆಯಲ್ಲಿ.
ಹಾಟ್ ಸೀಟ್ ಮೇಲೆ ಕೂತು ಹೆಚ್ಚು ಹಣ ಗೆದ್ದರೆ, ತಾನು ಓದುತ್ತಿರುವ ಶಾಲೆಗೆ ಕಾಂಪೌಂಡ್ ಕಟ್ಟಿಸುವೆ ಎಂದು ಸಾಲಿಗ್ರಾಮದ ಕೆಡಗ ಹುಡುಗ ತೇಜಸ್ ಹೇಳಿದ್ದ. ಆಡಿದ ಮಾತಿನಂತೆ ತನಗೆ ಸಿಕ್ಕ ಬಹುಮಾನ ಹಣದಲ್ಲಿ ತನ್ನ ಶಾಲೆಗೆ ತೇಜಸ್ ಪಾಲು ನೀಡಿದ್ದಾನೆ.
ಪುನೀತ್ ರಾಜ್ ಕುಮಾರ್ ಮುಂದೆ ಕೂತು ಹೇಳಿದ ಮಾತನ್ನ ತೇಜಸ್ ನಿಜ ಮಾಡಿದ್ದಾನೆ. ತನ್ನ ಶಾಲೆಗೆ ಕಾಂಪೌಂಡ್ ಕಟ್ಟಿಸಲು ಹಣ ಸಹಾಯ ಮಾಡಿ ಎಲ್ಲರ ಮನಗೆದ್ದಿದ್ದಾನೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ, ನೋಡಿ...
ಯಾರು ಈ ತೇಜಸ್.?
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಸಾರವಾದ 'ಕನ್ನಡದ ಕೋಟ್ಯಧಿಪತಿ' ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿರುವ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಸರ್ಕಾರಿ ಪ್ರೌಢಶಾಲೆ, ಕಟ್ಟಾಯದಲ್ಲಿ ಓದುತ್ತಿರುವ ತೇಜಸ್ ಪಾಲ್ಗೊಂಡಿದ್ದ. ಹತ್ತನೇ ಕ್ಲಾಸ್ ಓದುತ್ತಿರುವ ತೇಜಸ್ ಎರಡನೇಯವನಾಗಿ ಹಾಟ್ ಸೀಟ್ ಮೇಲೆ ಕುಳಿತ.
ಅಕ್ಕನ ಮದುವೆ ಮಾಡಬೇಕೆನ್ನುವ ಈ ಪೋರನ ಆಸೆ ಕೋಟ್ಯಧಿಪತಿಯಿಂದಲೂ ಈಡೇರಲಿಲ್ಲ
ಡಾಕ್ಟರ್ ಆಗುವ ಕನಸು
ತೇಜಸ್ ಮೂಲತಃ ಸಾಲಿಗ್ರಾಮದ ಕೆಡಗ ಗ್ರಾಮದವನು. ಈತನ ತಂದೆ-ತಾಯಿ ಜಮೀನಿನಲ್ಲಿ ಕೂಲಿ ಮಾಡುತ್ತಾರೆ. ತಾಯಿಗೆ ಕಣ್ಣಿಲ್ಲ. ತಂದೆಗೆ ಬುದ್ಧಿ ಕಮ್ಮಿ. ಹೀಗಾಗಿ, ಹಾಸನದಲ್ಲಿ ಸಂಬಂಧಿಕರ ಮನೆಯಲ್ಲಿ ತೇಜಸ್ ಮತ್ತು ಆತನ ಅಕ್ಕ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂತಿಪ್ಪ ತೇಜಸ್ ಗೆ ಡಾಕ್ಟರ್ ಆಗಬೇಕೆನ್ನುವ ಕನಸಿದೆ. ಜೊತೆಗೆ ಜಮೀನು ಖರೀದಿ ಮಾಡಿ ಸ್ವಂತ ಬಿಸಿನೆಸ್ ಮಾಡುವ ಇಚ್ಛೆ ಇದೆ.
ಹುಟ್ಟಿದಾಗಿನಿಂದ ಜನರ ಪ್ರೀತಿ ನೋಡಿರುವ ನನಗೆ ವಿವಾದ ಯಾಕೆ ಬೇಕು: ಪುನೀತ್
ಗೆದ್ದ ಹಣದಲ್ಲಿ ಏನು ಮಾಡುತ್ತಾನೆ.?
'ಕನ್ನಡದ ಕೋಟ್ಯಧಿಪತಿ' ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಾಯಿಗೆ ಆಪರೇಶನ್ ಮಾಡಿಸುವ ಯೋಚನೆ ತೇಜಸ್ ಗಿತ್ತು. ಜೊತೆಗೆ ಸ್ಕೂಲ್ ಗೆ ಕಾಂಪೌಂಡ್ ಕಟ್ಟಿಸುವ ಆಸೆ ಇತ್ತು. ''ಸ್ಕೂಲ್ ಗೆ ಒಂದು ಸೈಡ್ ಕಾಂಪೌಂಡ್ ಇಲ್ಲ. ಪ್ರತಿ ವರ್ಷ ಪರಿಸರ ದಿನಾಚರಣೆ ಪ್ರಯುಕ್ತ 150ಕ್ಕೂ ಹೆಚ್ಚು ಗಿಡ-ಮರಗಳನ್ನು ನೆಡುತ್ತೇವೆ. ಆದರೂ ಒಂದೂ ಉಳಿಯಲ್ಲ. ದನ-ಕರುಗಳು ಗಿಡಗಳನ್ನು ತಿನ್ನುತ್ತವೆ. ಹೀಗಾಗಿ ಕಾಂಪೌಂಡ್ ಕಟ್ಟಿಸಬೇಕು. ಅಕ್ಕನನ್ನು ಚೆನ್ನಾಗಿ ಓದಿಸಿ, ಮದುವೆ ಮಾಡಬೇಕು. ಜಮೀನು ತೆಗೆದುಕೊಳ್ಳಬೇಕು, ಹಸು ಸಾಕಬೇಕು, ಊರಿಗೆ ಸಹಾಯ ಮಾಡಬೇಕು. ಹೀಗಾಗಿ 25 ಲಕ್ಷ ಗೆಲ್ಲಬೇಕು'' ಎಂದು ತೇಜಸ್ ಹೇಳಿದ್ದನು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 'ಇದನ್ನ' ಕಂಡ್ರೆ ಈಗಲೂ ಭಯ.!
640,000 ಗೆದ್ದ ತೇಜಸ್
ಜೋಪಾನವಾಗಿ
ಪ್ರಶ್ನೆಗಳಿಗೆ
ಉತ್ತರಿಸಿದ
ತೇಜಸ್,
ತನ್ನ
ಬಳಿ
ಇದ್ದ
ಎಲ್ಲಾ
ಲೈಫ್
ಲೈನ್
ಗಳನ್ನು
ಬಳಸಿಕೊಂಡು
640,000
ರೂಪಾಯಿಗಳನ್ನು
ಪಡೆದನು.
12,50,000
ರೂಪಾಯಿಯ
ಪ್ರಶ್ನೆಯನ್ನೂ
ತೇಜಸ್
ನೋಡಿದನು.
ಆದ್ರೆ,
ರಿಸ್ಕ್
ತೆಗೆದುಕೊಳ್ಳದ
ತೇಜಸ್
640,000
ರೂಪಾಯಿಗೆ
ತೃಪ್ತಿ
ಪಟ್ಟುಕೊಂಡನು.
ಇದೇ
ಹಣದಲ್ಲಿ
ತಾನು
ಓದುತ್ತಿರುವ
ಶಾಲೆಗೆ
ಕಾಂಪೌಂಡ್
ಕಟ್ಟಿಸಲು
ತೇಜಸ್
ಪಾಲು
ನೀಡಿದ್ದಾನೆ.
ನುಡಿದಂತೆ
ನಡೆದ
ತೇಜಸ್
ಇಡೀ
ಶಾಲೆಗೆ
ಮಾದರಿ
ಆಗಿದ್ದಾನೆ.
ಶಾಲೆಯ
ಹೆಮ್ಮೆ
ಹೆಚ್ಚಿಸಿದ
ತೇಜಸ್
ಗೆ
ಅಭಿನಂದನೆಯ
ಮಹಾಪೂರ
ಹರಿದುಬರುತ್ತಿದೆ.
ಚಿತ್ರಕೃಪೆ:
ಕಲರ್ಸ್
ಕನ್ನಡ/ವೂಟ್