Don't Miss!
- News ಡಾ.ಮಂಜುನಾಥ್ ಅವರಿಗೆ ಕೇಂದ್ರ ಸಚಿವ ಸ್ಥಾನ: ಸುಳಿವು ಕೊಟ್ಟ ಹೆಚ್ ಡಿ ದೇವೇಗೌಡ
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಸ್ತೂರಿ ನಿವಾಸದಲ್ಲಿ ಸಪ್ತಪದಿ ಸಂಭ್ರಮ, ಕಾವ್ಯಾಂಜಲಿಯಲ್ಲಿ ಮಂಡ್ಯ ರಮೇಶ್
ಉದಯ ಟಿವಿಯಲ್ಲಿ ಸಂಜೆ 7ಕ್ಕೆ ಪ್ರಸಾರವಾಗುತ್ತಿರುವ 'ಕಸ್ತೂರಿ ನಿವಾಸ' ಇತ್ತಿಚಿಗಷ್ಟೆ 500ರ ಸಂಭ್ರಮ ಆಚರಿಸಿಕೊಂಡಿತು. ಇದೇ ಸಂತಸದಲ್ಲಿ ಈಗ ಮದುವೆ ಸಂಭ್ರಮದ ವಿಶೇಷ ಸಂಚಿಕೆಗಳನ್ನು ವೀಕ್ಷಕರಿಗಾಗಿ ಬಿತ್ತರಿಸುತ್ತಿದೆ. ರಾಘವ್ ಬದುಕಲ್ಲಿ ಪ್ರಾರಂಭವಾಗುತ್ತಿದೆ ಹೊಸ ಅಧ್ಯಾಯ.
ಖುಷಿಯ ಜೊತೆಗೆ ರಾಘವ್ ಸಪ್ತ ಹೆಜ್ಜೆಗಳಿಗೂ ಶುಭಗಳಿಗೆಗೆ ಸಜ್ಜಾಗುತ್ತಿದೆ ಕಸ್ತೂರಿ ನಿವಾಸ. ರಾಘವ ಖುಷಿಯ ವಿವಾಹ ಮಹೋತ್ಸವಕ್ಕೆ ಇಡಿ ಮನೆ ಕಳೆ ಕಟ್ಟುತ್ತಿದೆ. ಇದೇ ಸಂದರ್ಭದಲ್ಲಿ ಮೃದಲಾ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ. ಅಮೃತಾ ರಾಮಮೂರ್ತಿ ಈ ಸಂದರ್ಭದಲ್ಲಿ ಆಗಮಿಸಿದ್ದು ಏಕೆ ಎಂಬುದು ಕೂತಹಲವಿದೆ. ಮೃದಲಾ ಪಾತ್ರ ಈ ಸಮಯದಲ್ಲಿ ಏನನ್ನು ತಿರುವು ಕಾಣುತ್ತದೆ ಎಂಬುದನ್ನು ಸಂಚಿಕೆಯಲ್ಲಿ ನೋಡಬಹುದು. ಶಾಸ್ರ್ತೋಕ್ತವಾಗಿ ಮದುವೆ ಕಾರ್ಯಕ್ರಮನ್ನು ನಡಿಸಲಾಗಿದೆ. ಬಳೆ ಶಾಸ್ತ್ರ, ಅರಿಶಿನ ಶಾಸ್ತ್ರ, ಮೆಹೆಂದಿ ಹೀಗೆ ನೈಜ ರೀತಿಯಲ್ಲಿ ನೆರವೇರಿಸಿದ್ದಾರೆ.
ವರ್ಷದ ಬಳಿಕ ಭಾರತಕ್ಕೆ ಬಂದ ಸೋನಂ: ಅಪ್ಪನ್ನು ತಬ್ಬಿಕೊಂಡು ಕಣ್ಣೀರಿಟ್ಟ ನಟಿ
ಈ ಕಲ್ಯಾಣೋತ್ಸವದಲ್ಲಿ ಸಂಗೀತ ಮತ್ತು ನೃತ್ಯದ ರಂಗು ಎರಡು ಇದೆ. ವಿಶೇಷವೆಂದರೆ ಖಡಕ್ ರೆಟ್ರೊ ಲುಕ್ನಲ್ಲಿ ಇಡಿ ಫ್ಯಾಮಿಲಿ ನೃತ್ಯ ಮಾಡುತ್ತಾರೆ. ಕಸ್ತೂರಿ ನಿವಾಸದ ತಂಡ ಹಾಡು-ನೃತ್ಯದೊಂದಿಗೆ ಸಪ್ತಪದಿಯ ಕಂತುಗಳಿಗೆ ಸಾಕ್ಷಿಯಾಗಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ರಾಘವ್ ಖುಷಿ ಮದುವೆಗೆ ಜೊತೆಯಾಗ್ತಿದ್ದಾರೆ. ಯಾರಿವಳು ಧಾರಾವಾಹಿಯ ಮಾಯ ಮತ್ತು ನಿಖಿಲ್ ಹಾಗು ಕಾವ್ಯಾಂಜಲಿಯ ಎರಡು ಸೂಪರ್ ಹಿಟ್ ಜೋಡಿಗಳು. ಇದೆಲ್ಲದರ ನಡು ಕಥೆಯಲ್ಲಿ ವಿಶೇಷ ತಿರುವುಗಳು ಸೇರಿವೆ. ಅಡಚಣೆಗಳು ನಡುವೆ ಹೇಗೆ ನಡೆಯತ್ತೆ ಈ ಶುಭಕಾರ್ಯ ಅನ್ನುವುದೇ ಕಥಾ ಹಂದರ. ರಂಗೇರಿತ್ತಿರುವ ಈ ವಿವಾಹ ಸಂಭ್ರಮ ಸೋಮವಾರದಿಂದ ಶನಿವಾರದ ವರೆಗೆ ಸಂಜೆ 7ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಕಾವ್ಯಾಂಜಲಿ:
ಉದಯ ಟಿವಿಯ ಜನಪ್ರಿಯ ಧಾರಾವಾಹಿಯಾದ ಕಾವ್ಯಾಂಜಲಿ ತನ್ನ ವಿಶಿಷ್ಟ ಕಥಾಹಂದರದಿಂದ ಜನರ ಮನಸನ್ನು ಗೆದ್ದು 300 ಸಂಚಿಕೆಗಳನ್ನ ಪೂರೈಸಿದೆ. ಪ್ರಸ್ತುತ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಮೋಸ್ಟ್ ರೊಮ್ಯಾಂಟಿಕ್ 'ಲವ್ ಸ್ಟೋರಿ' ಅಂದ್ರೆ ಕಾವ್ಯಾಂಜಲಿ ಅನ್ನೋದು ಮನೆಮಾತಾಗಿದೆ. ಆದ್ರೆ ಕೇವಲ ಪ್ರೀತಿಯ ಪರಿಧಿಗಷ್ಟೇ ತನ್ನ ಕಥೆಯನ್ನ ಸೀಮಿತ ಮಾಡಿಕೊಳ್ಳದೆ, ಭಾವನಾತ್ಮಕವಾಗಿ ಸಹ ಸಂಬಂಧಗಳ ಸೂಕ್ಷ್ಮತೆಯನ್ನೂ ಎಳೆಎಳೆಯಾಗಿ ಬಿಚ್ಚಿಟ್ಟು ಪ್ರೇಕ್ಷಕರನ್ನು ಮನರಂಜಿಸುತ್ತಿದೆ. ಮೊದಲಿಂದಲೂ ಹೊಸ ಹೊಸ ಪ್ರಯತ್ನಗಳಿಗೆ ಹೆಸರಾಗಿರುವಂತ ತಂಡ ಗೋವಾ ನಂತರ ಮೊನ್ನೆ ಮೊನ್ನೆಯಷ್ಟೆ "ರೆಟ್ರೋ" ಸ್ಟೈಲ್ನಲ್ಲಿ ಸಣ್ಣ ಝಲಕ್ ಕೂಡಾ ನೀಡಿತ್ತು. ಇದಕ್ಕಾಗಿ ಪಾತ್ರಧಾರಿಗಳಾದ ದರ್ಶಕ್ ಗೌಡ ಮತ್ತು ವಿದ್ಯಶ್ರೀ ಜಯರಾಂ ವೈಯಕ್ತಿಕ ಆಸಕ್ತಿ ವಹಿಸಿ ಸಂಪೂರ್ಣ ತಯಾರಿಯೊಂದಿಗೆ ದೃಶ್ಯಕ್ಕೆ ಜೀವ ತುಂಬಿದ್ದರು. ಇದೀಗ ಮಡಿಕೇರಿಯ ನಿಸರ್ಗದ ಮಡಿಲಲ್ಲಿ ಚಳಿ ಗಾಳಿ ಮಳೆಯ ನಡುವೆಯೂ ಯಶಸ್ವಿಯಾಗಿ ಶೂಟಿಂಗ್ ಮುಗಿಸಿದೆ.
ವಿದೇಶಿ ರಿಯಾಲಿಟಿ ಶೋನಲ್ಲಿ 1.86 ಕೋಟಿ ಗೆದ್ದ ಭಾರತೀಯ
ಈಗ ಕಥೆಯ ಪ್ರಮುಖ ಪಾತ್ರವಾದ ಸುಶಾಂತ್ ಜನ್ಮರಹಸ್ಯವನ್ನ ಬೇಧಿಸೋಕೆ ನಾಯಕಿ ಅಂಜಲಿ ಪಣ ತೊಟ್ಟು ಗಂಡನ ಜೊತೆ ಮಡಿಕೇರಿಗೆ ಪಯಣ ಬೆಳೆಸಿದ್ದಾಳೆ. ಸ್ನೇಹಕ್ಕೆ ಕಟ್ಟು ಬಿದ್ದು ಸುಶಾಂತ್ ಕೈ ಹಿಡಿದ ಅಂಜಲಿ ಮುಂಗಾರಿನ ಚಳಿಯಲ್ಲಿ ಸುಶಾಂತ್ ಮೇಲೆ ಪ್ರೀತಿ ಮಳೆ ಸುರಿಸೋಕೆ ತಯಾರಾಗಿದ್ದಾಳೆ. ಕಾವ್ಯಾಂಜಲಿ "ಪ್ರೀತಿ ಮುಂಗಾರು" ಪ್ಯಾಕೇಜಲ್ಲಿ ಮತ್ತೊಂದು ಸರ್ಪ್ರೈಸ್ಇದೆ. ಅದು ಮಂಡ್ಯ ರಮೇಶ್. ವಿಭಿನ್ನ ಪಾತ್ರಗಳಿಗೆ ಜೀವ ತುಂಬಿರುವಂತಹ ನಟ ಮಂಡ್ಯ ರಮೇಶ್ಇಲ್ಲಿ ಜೋಡಿ ಜೀವಗಳ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದ್ದಾರೆ. ಹಿಂದೆಂದೂ ಮಾಡದಂತ ಪಾತ್ರವಿದು ಅಂತಾರೆ ಈ ಪ್ರಬುದ್ಧ ನಟ. ಮುಪ್ಪಿನ ಅಂಚಲ್ಲಿ ತನ್ನ ಕಡೆಯ ದಿನಗಳನ್ನ ಕಳೆಯುತ್ತಿರುವ ಕಾರ್ಯಪ್ಪ ವೃತ್ತಿಯಿಂದ ಒಬ್ಬ ಫೋಟೋಗ್ರಾಫರ್ಆಗಿರುತ್ತಾರೆ.
ಕಥೆಯಲ್ಲಿ ಅಂಜಲಿ ಹುಡುಕುತ್ತಿರುವ ಫೋಟೋವೊಂದರ ಹಿನ್ನೆಲೆಯನ್ನ ಪರಿಚಯಿಸೋದು ಇದೇ ಕಾರ್ಯಪ್ಪ. ಏನಿದು ನಂಟು? ಅಸಲಿಗೆ ಕಾರ್ಯಪ್ಪನಿಗೆ ತಿಳಿದಿರುವ ಸತ್ಯ ಅಂಜಲಿಗೆ ತಿಳಿಯುತ್ತಾ? ಸುಶಾಂತ್ ಜನ್ಮರಹಸ್ಯ ಅವನಿಗೆ ತಿಳಿಯುತ್ತಾ? ಎನ್ನುವ ಸಾಕಷ್ಟು ಕುತೂಹಲಕಾರಿ ಸಂಗತಿಗಳನ್ನ ಹೊತ್ತು ತರ್ತಿದೆ ಕಾವ್ಯಾಂಜಲಿ ಧಾರಾವಾಹಿ. ಮಂಡ್ಯ ರಮೇಶ್ ವಿಶೇಷ ಸಂಚಿಕೆಗಳು ಸೋಮವಾರದಿಂದ ಶನಿವಾರ ರಾತ್ರಿ 8.30ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.