ಪ್ರಪ್ರಥಮ ಬಾರಿಗೆ ಸುವರ್ಣದಲ್ಲಿ ಸಂಗೊಳ್ಳಿ ರಾಯಣ್ಣ
ಸ್ಟಾರ್ ನೆಟ್ ವರ್ಕ್ ನ ಸುವರ್ಣ ವಾಹಿನಿಯು ತನ್ನ ವೀಕ್ಷಕರಿಗೆ ಸದಾ ವಿನೂತನ ಕಾರ್ಯಕ್ರಮಗಳನ್ನೇ ಉಣಬಡಿಸುತ್ತಾ ಬರುತ್ತಿದ್ದು ಈಗ ಪ್ರಪ್ರಥಮ ಬಾರಿಗೆ ಕಳೆದ ವರ್ಷದ ಅತ್ಯುತ್ತಮ ಕನ್ನಡ ಚಲನಚಿತ್ರ ಎಂದೇ ಖ್ಯಾತಿ ಆದ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಲನಚಿತ್ರವನ್ನು ಇದೇ ಸೆಪ್ಟೆಂಬರ್ 8 ರ ಭಾನುವಾರದಂದು ಸಂಜೆ 5.30ಕ್ಕೆ ಪ್ರಸಾರ ಮಾಡುತ್ತಿದೆ.
2012ರಲ್ಲಿ ತೆರೆಕಂಡ ಐತಿಹಾಸಿಕ ಬ್ಲಾಕ್ ಬಸ್ಟರ್ ಚಿತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಇದನ್ನು ನಾಗಣ್ಣ ಅವರು ನಿರ್ದೇಶನ ಮಾಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಜಯಪ್ರದಾ ಮತ್ತು ನಿಖಿತಾ ತುಕ್ರಾಲ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. [ಚಿತ್ರ ವಿಮರ್ಶೆ ಓದಿ]
ಕನ್ನಡ ಚಿತ್ರರಂಗದಲ್ಲೇ ಇಲ್ಲಿಯವರೆಗೆ ಅತ್ಯಂತ ಅದ್ಧೂರಿಯಾಗಿ ತೆಗೆದ, ಬೃಹತ್ ಮೊತ್ತವನ್ನು ಹೂಡಿಕೆ ಮಾಡಿ ಚಿತ್ರೀಕರಿಸಿದ ಏಕೈಕ ಐತಿಹಾಸಿಕ ಚಿತ್ರ ಇದಾಗಿದೆ. 'ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ'ನ ಪಾತ್ರವನ್ನು ದರ್ಶನ್ ಅಭಿನಯಿಸಿದ್ದಾರೆ. ಪಾತ್ರಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದು ನಾಯಕ ನಟನನ್ನು ಕೊಂಡಾಡಲಾಗುತ್ತಿದೆ.ಒಟ್ಟಿನಲ್ಲಿ ಕುಟುಂಬ ಸಮೇತರಾಗಿ ಒಟ್ಟಾಗಿ ಕುಳಿತು ನೋಡುವಂತಹ ಜೊತೆಗೆ ಕ್ರಾಂತಿವೀರನ ಹೋರಾಟ, ದೇಶಪ್ರೇಮ, ಗೌರವ , ಅಭಿಮಾನ ಮುಂತಾದವುಗಳನ್ನು ಮೆರೆಯುವಂತಹ ಚಲನಚಿತ್ರ ಇದಾಗಿದೆ.
ಕನ್ನಡ ಚಲನಚಿತ್ರರಂಗದಲ್ಲೇ ಅತ್ಯಂತ ಅದ್ಧೂರಿ ಚಿತ್ರವನ್ನು ನಿರ್ದೆಶಿಸಿದ ನಾಗಣ್ಣ ಮತ್ತು ನಿರ್ಮಿಸಿದ ಆನಂದ ಬಿ ಅಪ್ಪುಗೋಳ ಅವರದು ಚಾಲೆಂಜಿಂಗ್ ಪ್ರಯತ್ನ ವಾಗಿದೆ. ಇಂತಹ ಅದ್ಭುತ ಸಿನೆಮಾ ಹಕ್ಕುಗಳನ್ನು ಸುವರ್ಣವಾಹಿನಿಯು ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಐತಿಹಾಸಿಕ ಚಿತ್ರವನ್ನು ಮರೆಯದೇ ನೋಡಿ ಇದೇ ಭಾನುವಾರ ಸಂಜೆ 5-30ಕ್ಕೆ ನಿಮ್ಮ ನೆಚ್ಚಿನ ಸುವರ್ಣ ವಾಹಿನಿಯಲ್ಲಿ. (ಒನ್ಇಂಡಿಯಾ ಕನ್ನಡ)


Click it and Unblock the Notifications












