Don't Miss!
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
50 ದಿನಗಳನ್ನು ಪೂರೈಸಿರುವ ಸಂಭ್ರಮದಲ್ಲಿ ಇರುವ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ ಈಗ ಕಿರುತೆರೆಗೆ ಬಂದಿದೆ. ಜೀ ಕನ್ನಡ ವಾಹಿನಿ ಸಿನಿಮಾವನ್ನು ಪ್ರಸಾರ ಮಾಡುತ್ತಿದೆ.
ಫೇಸ್ ಬುಕ್ ನಲ್ಲಿ ಸಿನಿಮಾದ ಪ್ರೋಮೋವನ್ನು ಹಂಚಿಕೊಂಡಿರುವ ಜೀ ವಾಹಿನಿ ಸಿನಿಮಾವನ್ನು ಪ್ರಸಾರ ಮಾಡುವ ಬಗ್ಗೆ ತಿಳಿಸಿದೆ. ಸದ್ಯಕ್ಕೆ ಚಿತ್ರದ ಪ್ರಸಾರದ ದಿನಾಂಕ ಇನ್ನು ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲೇ ಸಿನಿಮಾ ಪ್ರಸಾರ ಆಗುತ್ತಿದೆ.
Kurukshetra Movie Review : ಮಹಾ ಕಾವ್ಯದ ಮಹಾ 'ದರ್ಶನ'
ಈಗಲೂ 'ಕುರುಕ್ಷೇತ್ರ' ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಆಗಲೇ ಟಿವಿಯಲ್ಲಿಯೂ ಪ್ರಸಾರ ಮಾಡಲಾಗುತ್ತದೆ. ಕನ್ನಡದ ಈ ಮಹಾ ಸಿನಿಮಾದ ಪ್ರಸಾರದ ಹಕ್ಕನ್ನು ಜೀ ಕನ್ನಡ ವಾಹಿನಿ ಖರೀದಿ ಮಾಡಿದೆ.
'ಕುರುಕ್ಷೇತ್ರ' ದರ್ಶನ್ ಅಭಿನಯನದ ಐವತ್ತನೇ ಸಿನಿಮಾ. ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದು. ಕನ್ನಡದ ಜೊತೆಗೆ ಸಿನಿಮಾ ತಮಿಳು, ಮಲೆಯಾಳಂ, ತೆಲುಗಿನಲ್ಲಿಯೂ ಬಿಡುಗಡೆ ಆಗಿತ್ತು.
ಅಂಬರೀಶ್, ದರ್ಶನ್, ರವಿಚಂದ್ರನ್, ಅರ್ಜುನ್ ಸರ್ಜಾ, ಶ್ರೀನಾಥ್, ರವಿಶಂಕರ್, ಶ್ರೀನಿವಾಸ್ ಮೂರ್ತಿ, ಸೋನು ಸೂದ್, ನಿಖಿಲ್ ಕುಮಾರ್, ಶಶಿಕುಮಾರ್, ಮೇಘನಾ ರಾಜ್, ಭಾರತಿ ವಿಷ್ಣುವರ್ಧನ್, ಹರಿಪ್ರಿಯಾ ಸೇರಿದಂತೆ ಸಾಕಷ್ಟು ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
ದಿನ ಪತ್ರಿಕೆಗಳಲ್ಲಿ 'ಕುರುಕ್ಷೇತ್ರ' ಗುಣಗಾನ: ಯಾರು ಎಷ್ಟು ಸ್ಟಾರ್ ಕೊಟ್ಟಿದ್ದಾರೆ?
ಮುನಿರತ್ನ ಸಿನಿಮಾದ ನಿರ್ಮಾಣ ಮಾಡಿದ್ದು, ನಾಗಣ್ಣ ನಿರ್ದೇಶನ ಮಾಡಿದ್ದರು. ಆಗಸ್ಟ್ 9 ರಂದು ಸಿನಿಮಾ ಬಿಡುಗಡೆ ಆಗಿತ್ತು.