Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗಳಿಗೆ ಸೆಡ್ಡು ಹೊಡೆದು ನಿಂತಿವೆ ಕಿರುತೆರೆಯ ಧಾರಾವಾಹಿಗಳು!
ಒಂದು ಕಾಲಕ್ಕೆ ಧಾರಾವಾಹಿ ಅಂದರೆ ಅದು ಹೆಣ್ಣುಮಕ್ಕಳಿಗೆ ಮಾತ್ರ ಎನ್ನುವ ಭಾವನೆ ಇತ್ತು. ಧಾರಾವಾಹಿಯಲ್ಲಿ ಬರುವ ಅತ್ತೆ ಸೊಸೆ ಜಗಳ, ಅಲ್ಲಿ ಬರುವ ಘಟನೆಗಳು ಮನೆಯನ್ನು ಹಾಳು ಮಾಡುತ್ತದೆ ಎನ್ನುವ ಮಾತು ಕೂಡ ಹೆಚ್ಚಾಗಿತ್ತು.
ಆದರೆ ಈಗೀಗ ಸೀರಿಯಲ್ ಗಳ ಟ್ರೆಂಡ್ ಬದಲಾಗುತ್ತಿದೆ. ಕನ್ನಡದಲ್ಲಿ ಈಗ ಸಿನಿಮಾಗೆ ಪೈಪೋಟಿ ನೀಡುವಂತಹ ಧಾರಾವಾಹಿಗಳು ಬರುತ್ತಿವೆ. ಕೋಟಿ ಕೋಟಿ ವೆಚ್ಚದಲ್ಲಿ ಹೊಸತನದಿಂದ ತಯಾರಾದ ಈ ಧಾರಾವಾಹಿಗಳು ವೀಕ್ಷಕರಿಂದ ದೊಡ್ಡ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ.
'ಶನಿ'
ಸದ್ಯ ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಕ್ರೇಜ್ ಹುಟ್ಟಿಸಿರುವ ಧಾರಾವಾಹಿ ಶನಿ. ಈ ಧಾರಾವಾಹಿಯ ಮೇಕಿಂಗ್, ಪಾತ್ರಗಳು ಸೀರಿಯಲ್ ನೋಡದವರನ್ನು ಸಹ ಟಿವಿ ಮುಂದೆ ಕೂರಿಸಿದೆ. ಸಾಮಾಜಿಕ ಜಾಲತಾಣದಲ್ಲಿ 'ಶನಿ' ಬಗ್ಗೆ ತುಂಬ ಒಳ್ಳೆಯ ಅಭಿಪ್ರಾಯ ಕೇಳಿ ಬರುತ್ತಿದೆ.
'ಜಗ್ಗು ದಾದಾ' ನಿರ್ದೇಶಕ
'ಶನಿ' ಧಾರಾವಾಹಿಯನ್ನು 'ಜಗ್ಗು ದಾದಾ' ಚಿತ್ರದ ನಿರ್ದೇಶಕ ರಾಘವೇಂದ್ರ ಹೆಗಡೆ ನಿರ್ದೇಶನ ಮಾಡಿದ್ದಾರೆ. 'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಸೋಮವಾರ ದಿಂದ ಶುಕ್ರವಾರದವರೆಗೆ ರಾತ್ರಿ 8.30ಕ್ಕೆ ಈ ಧಾರಾವಾಹಿ ಪ್ರಸಾರ ಆಗುತ್ತಿದೆ.
'ನಾಗ ಕನ್ನಿಕೆ'
'ಕಲರ್ಸ್ ಸೂಪರ್' ವಾಹಿನಿಯಲ್ಲಿ ಪ್ರಸಾರ ಆಗುವ 'ನಾಗ ಕನ್ನಿಕೆ' ಧಾರಾವಾಹಿ ಕೂಡ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ದೊಡ್ಡ ದೊಡ್ಡ ಸೆಟ್ ಹಾಕಿ ಧಾರಾವಾಹಿಯನ್ನು ಚಿತ್ರೀಕರಣ ಮಾಡಿದ್ದು, 'ನಾಗ ಕನ್ನಿಕೆ' ಆಗಿ ನಟಿ ಅಧಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.
'ಅಗ್ನಿಸಾಕ್ಷಿ'ಯಲ್ಲಿ ರೋಚಕ ಟ್ವಿಸ್ಟ್: ತಾಯಿಯ ಕೈ ಸೇರಿದ ಆಯುಷಿ.!
'ಹರ ಹರ ಮಹದೇವ'
ಶಿವನ ಕಥೆಯನ್ನು ಮನೆ ಮನೆಗೆ ಹೇಳುವ ಧಾರಾವಾಹಿ 'ಹರ ಹರ ಮಹದೇವ'. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಈ ಸೀರಿಯಲ್ ಕನ್ನಡದ ದುಬಾರಿ ಸೀರಿಯಲ್ ಗಳಲ್ಲಿ ಒಂದಾಗಿದೆ. ಸೋಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 7.30ಕ್ಕೆ ಈ ಧಾರಾವಾಹಿ ಪ್ರಸಾರ ಆಗುತ್ತಿದೆ.
ಸೀರಿಯಲ್ ದ್ವೇಷಿಗಳು ಮೆಚ್ಚಿದ ಧಾರಾವಾಹಿ 'ಶನಿ', ಸಾಕ್ಷಿ ಇಲ್ಲಿದೆ!
'ನಾಗಿಣಿ'
'ನಾಗಿಣಿ' ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು. ಈ ಧಾರಾವಾಹಿ ಕೂಡ ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗಿದೆ. ಧಾರಾವಾಹಿಯಲ್ಲಿ ಬರುವ ಗ್ರಾಫಿಕ್ಸ್ ನಿಂದಾಗಿ ಹೆಚ್ಚು ಹಣ ಬೇಕಾಗುತ್ತದೆಯಂತೆ.
'ಅಗ್ನಿಸಾಕ್ಷಿ'ಯಲ್ಲಿ ಹೆಬ್ಬುಲಿ : ಲವರ್ ಬಾಯ್ ಸಿದ್ಧಾರ್ಥ್ ಈಗ ಆಕ್ಷನ್ ಹೀರೋ !
'ನಂದಿನಿ'
ಉದಯ ಟಿವಿಯ 'ನಂದಿನಿ' ಸೀರಿಯಲ್ ಕೂಡ ತುಂಬ ಶ್ರೀಮಂತಿಕೆಯಿಂದ ಕೂಡಿದೆ. ಇಲ್ಲಿ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜೊತೆಗೆ ದಕ್ಷಿಣ ಭಾರತದ ಜನಪ್ರಿಯ ನಟಿ ಖುಷ್ಬು ಕೂಡ ಧಾರಾವಾಹಿಯ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.