Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕ್ಷಕರ ಒತ್ತಾಯದ ಮೇರೆಗೆ ಮತ್ತೆ ಬರ್ತಿದೆ 'ಮಹಾಭಾರತ' ಧಾರಾವಾಹಿ
2013ರಲ್ಲಿ ಹಿಂದಿ ಕಿರುತೆರೆಯಲ್ಲಿ ಪ್ರಸಾರವಾಗಿದ್ದ ಅದ್ದೂರಿ ಮಹಾಭಾರತ ಧಾರಾವಾಹಿಯನ್ನು ಅದೆಷ್ಟು ಮಂದಿ ಕಣ್ತುಂಬಿಕೊಂಡಿದ್ದಾರೊ ಇಲ್ವೋ ಗೊತ್ತಿಲ್ಲ. ಆದರೆ ಕಳೆದ ವರ್ಷ ಅದೇ ಧಾರಾವಾಹಿ ಕನ್ನಡಕ್ಕೆ ಬಡ್ ಆಗಿ ಪ್ರಸಾರ ಪ್ರಾರಿಭಿಸಿದ್ದಾಗ ಬಹುತೇಕ ಕನ್ನಡ ವೀಕ್ಷಕರು ಮಹಾಭಾರತ ನೋಡಿ ಆನಂದಿಸಿದ್ದರು.
ಕನ್ನಡದಲ್ಲೂ ಇಂಥ ಧಾರಾವಾಹಿಗಳು ಬರಬೇಕೆನ್ನುವ ಬಯಕೆಯನ್ನು ಕನ್ನಡ ಪ್ರೇಕ್ಷರಿಟ್ಟಿದ್ದರು. ಕಳೆದ ವರ್ಷ ಲಾಕ್ ಡೌನ್ ಆದ ಬಳಿಕ ಸಾಕಷ್ಟು ಹಿಂದಿ ಧಾರಾವಾಹಿಗಳು ಕನ್ನಡಕ್ಕೆ ಬಡ್ ಆಗಿ ಪ್ರಸಾರ ಆರಂಭಿಸಿದ್ದವು. ಅವುಗಳಲ್ಲಿ ಕನ್ನಡಿಗರ ಮನಗೆದ್ದ ಧಾರಾವಾಹಿ ಎಂದರೆ ಮಹಾಭಾರತ.
ಜೀ ಕನ್ನಡದಲ್ಲಿ ಹೊಸ ಧಾರಾವಾಹಿ 'ಕೃಷ್ಣ ಸುಂದರಿ' ಪ್ರಾರಂಭ
ವಿಶೇಷ ಎಂದರೆ 'ಮಹಾಭಾರತ' ಈಗ ಮತ್ತೆ ಬರ್ತಿದೆ. ಈ ವರ್ಷದ ಲಾಕ್ ಡೌನ್ ನಲ್ಲೂ ಧಾರಾವಾಹಿಯನ್ನು ಮರು ಪ್ರಸಾರ ಮಾಡಲು ವಾಹಿನಿ ನಿರ್ಧರಿಸಿದೆ. ವೀಕ್ಷಕರ ಒತ್ತಾಯದ ಮೇರೆಗೆ ಮಹಾಭಾರತ ಮತ್ತೆ ಕನ್ನಡ ಕಿರುತೆರೆಯಲ್ಲಿ ಪ್ರಸಾರ ಪ್ರಾರಂಭಿಸಲಿದೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನ ಮಾತ್ರ ಮಹಾಭಾರತ ಧಾರಾವಾಹಿ ಪ್ರಸಾರವಾಗಲಿದೆ. ಸಂಜೆ 6 ಗಂಟೆಯಿಂದ 8.30 ರವರೆಗೆ ಮಹಾಭಾರತ ಪ್ರಸಾರವಾಗುತ್ತಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಹಾಭಾರತದ ಪ್ರತಿಯೊಂದು ದೃಶ್ಯಗಳು ಕಣ್ಣಿಗೆ ಕಟ್ಟಿದಂತಿದೆ.
ತಿವಾರಿ ಕುಟುಂಬ ನಿರ್ಮಿಸಿದ ಈ ಧಾರಾವಾಹಿಯಲ್ಲಿ ಅದ್ಧೂರಿ ಸೆಟ್, ಸಿನಿಮಾ ಶೈಲಿಯ ನಿರೂಪಣೆ, ಅದ್ಭುತವಾದ ವಿ ಎಫ್ ಎಕ್ಸ್ ಗಳು, ಗ್ರಾಫಿಕ್ಸ್ಗಳು, ಹಿನ್ನೆಲೆ ಸಂಗೀತ, ಹಲವು ಹೊಸ ಅದ್ಧೂರಿ ಲೊಕೇಶನ್ಗಳು, ಧಾರಾವಾಹಿಯ ಪ್ರತಿಯೊಂದು ಪಾತ್ರಗಳು ಸಹ ಪ್ರೇಕ್ಷಕರ ಮನಗೆದ್ದಿವೆ. ಪ್ರತಿಯೊಬ್ಬರ ಅಭಿನಯ ಮನೋಜ್ಞವಾಗಿದೆ. ಸೌರಭ್ ಜೈನ್, ಅಹಂ ಶರ್ಮಾ, ಶಹೀರ್ ಶೇಖ್, ಸೌರಬ್ ಗುರ್ಜರ್, ಪೂಜಾ ಶರ್ಮಾ, ರಿಯಾ ದೀಪ್ಸಿ, ಅನೂಪ್ ಸಿಂಗ್ ಸೇರಿದಂತೆ ಅನೇಕ ಕಲಾವಿದರು ಬಣ್ಣಹಚ್ಚಿದ್ದರು.