Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹಾನಾಯಕ' ಧಾರಾವಾಹಿ ಪ್ರಸಾರ ಮಾಡದಿರುವುದಕ್ಕೆ ಕಾರಣವೇನು?
ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜೀವನಗಾಥೆಯ 'ಮಹಾನಾಯಕ' ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಆದರೆ ನಿನ್ನೆ ಭಾನುವಾರ ಧಾರಾವಾಹಿ ಪ್ರಸಾರವಾಗಿಲ್ಲ. ಹಾಗಾಗಿ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರತೀ ಶನಿವಾರ ಮತ್ತು ಭಾನುವಾರ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರವಾಗುತ್ತದೆ. ಆದರೆ ಭಾನುವಾರ ಧಾರಾವಾಹಿ ಪ್ರಸಾರವಾಗದಿರುವ ಕಾರಣ ಸ್ಥಗಿತಗೊಳಿಸಲಾಗಿದೆಯೇ ಎನ್ನುವ ಅನುಮಾನ ಪ್ರೇಕ್ಷಕರನ್ನು ಕಾಡಿದೆ. ತುಂಬಾ ಇಷ್ಟಪಟ್ಟು ನೋಡುತ್ತಿದ್ದ ಧಾರಾವಾಹಿಯನ್ನು ದಿಢೀರ್ ನಿಲ್ಲಿಸಲಾಗಿದೆ ಎಂದು ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕುತ್ತಿದ್ದಾರೆ. ಆದರೆ ಧಾರಾವಾಹಿ ಪ್ರಸಾರವಾಗದಿರುವುದಕ್ಕೆ ನಿಜವಾದ ಕಾರಣವೇನು? ಮುಂದೆ ಓದಿ...
ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ ಕರೆಗಳು
ವೀಕ್ಷಕರ ಅನುಮಾನಕ್ಕೆ ಕಾರಣವಾಗಿದ್ದು, ಈ ಹಿಂದೆ ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ ಕರೆಗಳು, ಸಂದೇಶಗಳು ಬರುತ್ತಿವೆ ಎಂದು ಜೀ ವಾಹಿನಿಯ ಬ್ಯುಜಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹೇಳಿದ್ದರು. ಹಾಗಾಗಿ ಮಹಾನಾಯಕ ಧಾರಾವಾಹಿ ಪ್ರಸಾರವನ್ನು ನಿಲ್ಲಿಸಿ ಬಿಟ್ಟರಾ ಎನ್ನುವ ಅನುಮಾನ ಕಾಡಿದೆ.
ಪ್ರಸಾರ ಮಾಡದಿರಲು ಕಾರಣವೇನು?
ಭಾನುವಾರ 'ಪಾಪ್ ಕಾರ್ನ್ ಮಂಕಿ ಟೈಗಲ್' ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರವಾಗಿದೆ. ಈ ಧಾರಾವಾಹಿ ಪ್ರಸಾರವಾಗುತ್ತಿದ್ದ ಸಮಯದಲ್ಲೇ 'ಪಾಕ್ ಕಾರ್ನ್ ಮಂಕಿ ಟೈಗರ್' ಸಿನಿಮಾಗೆ ಅವಧಿಯನ್ನು ಮೀಸಲಿಡಲಾಗಿತ್ತು. ಹಾಗಾಗಿ ಧಾರಾವಾಹಿ ಪ್ರಸಾರವಾಗಿರಲಿಲ್ಲ. ಆದರೆ ಎಂದಿನಂತೆ ಪ್ರಸಾರವಾಗಲಿದೆ ಎಂದು ಜೀ ಕನ್ನಡ ವಾಹಿನಿ ತಿಳಿಸಿದೆ.
ಪ್ರಸಾರವಾಗದಿರುವುದಕ್ಕೆ ವಿಷಾಧಿಸುತ್ತೇವೆ
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜೀ ಕನ್ನಡ ವಾಹಿನಿ "ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಧಾರಾವಾಹಿ ಪ್ರಸಾರವಾಗದಿರುವುದಕ್ಕೆ ವಿಷಾಧಿಸುತ್ತೇವೆ. ಎಂದಿನಂತೆ ಮುಂದಿನ ವಾರದಿಂದ ಶನಿವಾರ ಹಾಗೂ ಭಾನುವಾರ ಸಂಜೆ 6:30ಕ್ಕೆ 'ಮಹಾನಾಯಕ' ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ." ಎಂದು ಹೇಳಿದ್ದಾರೆ.
Recommended Video
ಧಾರಾವಾಹಿ ನಮ್ಮ ಹೆಮ್ಮೆ
'ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಮಧ್ಯರಾತ್ರಿಯಿಂದ ಕರೆಗಳು, ಬೆದರಿಕೆ ಸಂದೇಶಗಳು ಬರುತ್ತಿವೆ. ಆದರೆ ಇವನ್ನೆಲ್ಲಾ ನಾವು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಧಾರಾವಾಹಿಯು ಎಂದಿನಂತೆ ಮುಂದುವರೆಯಲಿದೆ. ಧಾರಾವಾಹಿ ನಮ್ಮ ಹೆಮ್ಮೆ ಮತ್ತು ನನಗೆ ವೈಯಕ್ತಿಕವಾಗಿ ಇಷ್ಟವಾದ ಧಾರಾವಾಹಿ. ಯಾರಿಗೆ ಈ ಧಾರಾವಾಹಿ ಸಮಾಜಕ್ಕೆ ಒಳಿತಲ್ಲ ಎನಿಸುತ್ತದೆಯೋ ಅವರೇ ನಿಜವಾಗಿಯೂ ಸಮಾಜಕ್ಕೆ ಒಳಿತಲ್ಲ, ಜೈ ಭೀಮ್' ಎಂದ ರಾಘವೇಂದ್ರ ಹುಣಸೂರು ಹೇಳಿದ್ದರು.