Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹಾನಾಯಕ' ಧಾರಾವಾಹಿ ಪ್ರಸಾರದ ಸಮಯ ಬದಲಾವಣೆ
ಶನಿವಾರ ಹಾಗೂ ಭಾನುವಾರ ಪ್ರಸಾರವಾಗುತ್ತಿದ್ದ 'ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್' ಪ್ರಸಾರದ ಸಮಯ ಬದಲಾವಣೆಯಾಗಿದೆ. ಶನಿವಾರ ಹಾಗೂ ಭಾನುವಾರ ಮಾತ್ರ ಪ್ರಸಾರವಾಗುತ್ತಿದ್ದ ಈ ಜನಪ್ರಿಯ ಧಾರಾವಾಹಿ ವೀಕ್ಷಕರು ಪ್ರತಿನಿತ್ಯ ವೀಕ್ಷಿಸುವ ಒತ್ತಾಯ ಮಾಡಿದ್ದರಿಂದ ದೈನಂದಿನ ಧಾರಾವಾಹಿಯಾಗಿ ಪರಿವರ್ತಿಸಲಾಗಿದೆ.
ಇನ್ಮುಂದೆ ವಾರಾಂತ್ಯದ ಬದಲಿಗೆ ಪ್ರತಿನಿತ್ಯ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6:00 ಗಂಟೆಗೆ ಪ್ರಸಾರವಾಗಲಿದೆ.
'ಮಹಾನಾಯಕ' ಧಾರಾವಾಹಿ ಪ್ರಸಾರ ಮಾಡದಿರುವುದಕ್ಕೆ ಕಾರಣವೇನು?
ಜುಲೈ 04, 2020 ಕನ್ನಡ ಕಿರುತೆರೆ ಇತಿಹಾಸದಲ್ಲಿ ಒಂದು ಮೈಲಿಗಲ್ಲು 'ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್' ಧಾರಾವಾಹಿ ಪ್ರಾರಂಭವಾಗಿದ್ದನ್ನು ವೀಕ್ಷಕರು ಸಂಭ್ರಮದಿಂದ ಸ್ವಾಗತಿಸಿದರು. ಈ ಧಾರಾವಾಹಿಯನ್ನು ಜನರು ಒಟ್ಟಾಗಿ ಕೂತು ಎಲ್.ಇ.ಡಿ. ಸ್ಕ್ರೀನ್ ಗಳಲ್ಲಿ ವೀಕ್ಷಿಸಿದ್ದೇ ಅಲ್ಲದೆ ಈ ಧಾರಾವಾಹಿಯ ಶೀರ್ಷಿಕೆ ಗೀತೆ ಸೂಪರ್ ಹಿಟ್ ಆಯಿತು.
ಧಾರಾವಾಹಿ ವೀಕ್ಷಿಸಿ ಎಂಬ ಪೋಸ್ಟರ್ ಗಳನ್ನು ಪ್ರಮುಖ ವೃತ್ತಗಳಲ್ಲಿ ಅಂಟಿಸಿ, ಪುಟ್ಟ ಮಕ್ಕಳು ಟಿ.ವಿ.ಗೆ ಆರತಿ ಬೆಳಗಿದರು. ಧಾರಾವಾಹಿಯಲ್ಲಿ ಅಂಬೇಡ್ಕರ್ ಜನಿಸಿದ ಕ್ಷಣದಲ್ಲಿ ಈಡುಗಾಯಿ ಒಡೆದರು. ಧನ್ಯವಾದ ಸಲ್ಲಿಸಿ ಸಾವಿರಾರು ವಾಟ್ಸಾಪ್ ಸಂದೇಶಗಳನ್ನು ಕಳುಹಿಸಿದರು. ಫೇಸ್ ಬುಕ್ ಪೋಸ್ಟ್ಗಳನ್ನು ಲಕ್ಷಾಂತರ ಮಂದಿ ವೀಕ್ಷಿಸಿದರು. ಪುಟ್ಟ ಭೀಮರಾವ್ ಅಭಿನಯಕ್ಕೆ ವೀಕ್ಷಕರು ಮಾರು ಹೋಗಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಲ್ಲಿ ಈ ಧಾರಾವಾಹಿಯ ಬ್ಯಾನರ್ ಹಾಗೂ ಕಟೌಟ್ಗಳನ್ನು ನಿರ್ಮಿಸಿ ಉತ್ತೇಜಿಸಿದರು.
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಬಾಲ್ಯದಿಂದಲೇ ಅಸ್ಪೃಶ್ಯತೆಯ ಸಂಕಷ್ಟ ಎದುರಿಸಿದರೂ ಕಂಗೆಡದೆ ತಮ್ಮ ವಿದ್ಯಾಭ್ಯಾಸ ಪೂರೈಸಿ ಶೋಷಿತರ ಹಕ್ಕುಗಳನ್ನು ಪ್ರತಿಪಾದಿಸುವ, ಅವರ ಸ್ವಾತಂತ್ರ್ಯಕ್ಕಾಗಿ ಹೋರಾಡುವ ನಾಯಕನಾಗಿ ಬೆಳೆಯುತ್ತಾರೆ. ಸ್ವತಂತ್ರ ಭಾರತದಲ್ಲಿ ಕಾನೂನು ಸಚಿವರಾಗಿ, ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರ ಕೊಡುಗೆ ಅನುಪಮವಾದುದು. ಅವರ ಸೇವೆಯನ್ನು ಗುರುತಿಸಿ 1990ರಲ್ಲಿ ಮರಣೋತ್ತರವಾಗಿ ಅವರಿಗೆ 'ಭಾರತ ರತ್ನ' ನೀಡಿ ಪುರಸ್ಕರಿಸಲಾಗಿದೆ.
ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಧಾರಾವಾಹಿಯ ಶೀರ್ಷಿಕೆ ಗೀತೆಯ ಕಾಲರ್ ಟ್ಯೂನ್ ಅನ್ನು ಬಿಡುಗಡೆ ಮಾಡಲಾಗಿದೆ. ಧಾರಾವಾಹಿಯ ಪೋಸ್ಟರ್ ಗಳು ಮಾರುಕಟ್ಟೆಗೆ ಬಂದಿವೆ. ಡಾ.ಅಂಬೇಡ್ಕರ್ ಅವರ ಕುರಿತಾದ ಪತ್ರಿಕಾ ಲೇಖನಗಳನ್ನು ಹಂಚಿಕೊಳ್ಳುತ್ತಿದ್ದು ಹಿಂದೆಂದೂ ಕಾಣದಂಥ ಅಭೂತಪೂರ್ವ ಪ್ರತಿಕ್ರಿಯೆ ಪಡೆದಿದೆ.
ಅಂಬೇಡ್ಕರ್ ಧಾರಾವಾಹಿ ಪ್ರತಿ ಮನೆ ಮನವನ್ನೂ ಮುಟ್ಟಿದೆ ಮತ್ತು ಇದು ಜನರು ಬರೀ ವೀಕ್ಷಿಸುತ್ತಿರುವ ಧಾರಾವಾಹಿಯಲ್ಲ ಬದಲಾಗಿ ಸಂಭ್ರಮಿಸುತ್ತಿರುವ ಧಾರಾವಾಹಿಯಾಗಿದೆ. ಸಮಾಜದ ಎಲ್ಲ ವಯೋಮಾನದವರು ಹಾಗೂ ವರ್ಗದವರು ಒಟ್ಟಾಗಿ ಸಂಭ್ರಮಿಸಿದ ಧಾರಾವಾಹಿ ಮತ್ತೊಂದಿಲ್ಲ. ಸಾಮಾನ್ಯವಾಗಿ ಧಾರಾವಾಹಿಗಳು ಮಹಿಳೆಯರು ಹಾಗೂ ವೃದ್ಧರನ್ನು ಸೆಳೆಯುತ್ತವೆ. ಆದರೆ ವಯಸ್ಸಿನ ಮಿತಿಗಳಿಲ್ಲದೆ ಮಕ್ಕಳು, ಯುವಜನರು, ಗೃಹಿಣಿಯರು ಹಾಗೂ ನಿವೃತ್ತರನ್ನು ಒಂದೇ ಆಕರ್ಷಣೆ ಪಡೆದಿರುವ ಏಕೈಕ ಧಾರಾವಾಹಿ ಇದಾಗಿದೆ.