Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಜಾಭಾರತ'ಕ್ಕೆ ಬಂದ್ರು ಹೊಸ ಆಂಕರ್, ನಿಮಗೆಲ್ಲಾ ಪರಿಚಯದವರೇ.!
ಕಲರ್ಸ್ ಸೂಪರ್ ವಾಹಿನಿಯಲ್ಲಿ ಮೂಡಿ ಬರ್ತಿದ್ದ ಜನಪ್ರಿಯ ಕಾರ್ಯಕ್ರಮ 'ಮಜಾಭಾರತ' ಶೋ ಮತ್ತೆ ಬರ್ತಿದೆ. ಈಗಾಗಲೇ ಎರಡು ಆವೃತ್ತಿ ಮುಗಿಸಿರುವ ಕಾಮಿಡಿ ಕಾರ್ಯಕ್ರಮ ಈಗ ಮೂರನೇ ಆವೃತ್ತಿ ಆರಂಭಿಸಿದೆ.
ಹೊಸ ಆವೃತ್ತಿಯಲ್ಲಿ ಹೊಸ ಸರ್ಪ್ರೈಸ್ ಗಳನ್ನ ಹೊತ್ತು ತರುತ್ತಿದೆ ಮಜಾಭಾರತ. ಹೌದು, ಮೊದಲನೇ ಸರ್ಪ್ರೈಸ್ ಎಂಬಂತೆ ಕಾರ್ಯಕ್ರಮದ ನಿರೂಪಕರೇ ಬದಲಾಗಿದ್ದಾರೆ.
ಮೊದಲೆರಡು ಆವೃತ್ತಿಯನ್ನ ನಿರೂಪಣೆ ಮಾಡಿದ್ದ ನಿರಂಜನ್ ದೇಶಪಾಂಡೆ ಈ ಶೋನಿಂದ ಹೊರಗುಳಿದಿದ್ದಾರೆ. ಅವರ ಜಾಗಕ್ಕೆ ಬಿಗ್ ಬಾಸ್ ಖ್ಯಾತಿಯ ಅನುಪಮಾ ಗೌಡ ಎಂಟ್ರಿಯಾಗಿದ್ದಾರೆ. ಕನ್ನಡ ಕೋಗಿಲೆ ಶೋ ಮೂಲಕ ಸ್ಟಾರ್ ಅಂಕರ್ ಆದ ಅನುಪಮಾ ಗೌಡ ಈಗ ಮಜಾಭಾರತದ ಸಾರಥಿಯಾಗಿದ್ದಾರೆ.
ಹೊಸ ರಿಯಾಲಿಟಿ ಶೋಗೆ ಆಂಕರ್ ಆದ 'ಬಿಗ್ ಬಾಸ್' ಅನುಪಮಾ
ಇನ್ನು ಎರಡನೇ ಸೀಸನ್ ನಲ್ಲಿ ತೀರ್ಪುಗಾರರಾಗಿದ್ದ ರಚಿತಾ ರಾಮ್ ಮತ್ತು ಗುರುಕಿರಣ್ ಮೂರನೇ ಆವೃತ್ತಿಯಲ್ಲೂ ಮುಂದುವರಿದಿದ್ದಾರೆ.
ನಟಿ ಅನುಪಮಾ ಗೌಡ ಮದುವೆ ಆಗಲ್ವಂತೆ.! ಸಿಂಗಲ್ ಆಗಿ ಇರ್ತಾರಂತೆ.!
ಅದಕ್ಕೂ ಮೊದಲು, ಒಂದನೇ ಆವೃತ್ತಿಲ್ಲಿ ಶೀತಲ್ ಶೆಟ್ಟಿ ಮತ್ತು ನಿರಂಜನ್ ದೇಶಪಾಂಡೆ ಮಜಾಭಾರತ ನಿರೂಪಣೆ ಮಾಡಿದ್ದರು. ಹಿರಿಯ ನಟಿ ಶ್ರುತಿ, ನಿರ್ದೇಶಕ ಎಸ್ ನಾರಾಯಣ್ ತೀರ್ಪುಗಾರರಾಗಿದ್ದರು.
ಇನ್ನುಳಿದಂತೆ ವಾರದಲ್ಲಿ ಐದು ದಿನ ಮಜಾಭಾರತ ಪ್ರಸಾರವಾಗುತ್ತಿದ್ದು, ಹೊಸ ಹೊಸ ಸ್ಪರ್ಧಿಗಳೊಂದಿಗೆ ವಾಪಸ್ ಆಗಿದೆ. ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 8 ಗಂಟೆಗೆ ಮಜಾಭಾರತ ಟೆಲಿಕಾಸ್ಟ್ ಆಗಲಿದೆ.