Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್ ವಿತ್ ರಮೇಶ್': ಮುಂದಿನ ಸಂಚಿಕೆಗಳಲ್ಲಿ ಯಾರ್ಯಾರು ಬರ್ತಾರೆ.?
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್' ಮೂರನೇ ಆವೃತ್ತಿ ಇನ್ನೇನು ಮುಗಿಯುವ ಹಂತ ತಲುಪಿದೆ. ಇನ್ನೆರಡು ವಾರಾಂತ್ಯಗಳಲ್ಲಿ 'ವೀಕೆಂಡ್ ವಿತ್ ರಮೇಶ್-3' ಮುಕ್ತಾಯವಾಗಲಿದೆ.
ಇಲ್ಲಿಯವರೆಗೂ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರೈ, ಜಗ್ಗೇಶ್, ರಕ್ಷಿತ್ ಶೆಟ್ಟಿ, ಪ್ರಾಣೇಶ್, ಪ್ರೊ.ಕೃಷ್ಣೇಗೌಡ, ನ್ಯಾ.ಸಂತೋಷ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು ಸಾಧಕರ ಸೀಟ್ ಮೇಲೆ ಕೂತಿದ್ದರು. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಾಗಾದ್ರೆ, ಇನ್ನುಳಿದ ಎರಡು ವಾರಾಂತ್ಯಗಳಲ್ಲಿ ಯಾವ ಸೆಲೆಬ್ರಿಟಿ ಭಾಗವಹಿಸಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲರಲ್ಲೂ ಇದೆ. ಆ ಕುತೂಹಲಕ್ಕೆ ನಾವು ಬ್ರೇಕ್ ಹಾಕುತ್ತಿದ್ದೇವೆ. ಮುಂದೆ ಓದಿರಿ...
ಸಾಧಕರ ಸೀಟ್ ಮೇಲೆ ಕೂರುತ್ತಾರಂತೆ ಗಣೇಶ್.!
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸುತ್ತಾರಂತೆ. ಇನ್ನೆರಡು ವಾರಾಂತ್ಯಗಳ ಸಂಚಿಕೆಗಳ ಪೈಕಿ, ಗಣೇಶ್ ಭಾಗವಹಿಸುವ ಸಂಚಿಕೆಯೂ ಪ್ರಸಾರ ಆಗಲಿದೆ ಎಂದು ಜೀ ಕನ್ನಡ ವಾಹಿನಿಯ ಮೂಲಗಳು ತಿಳಿಸಿವೆ.
ಮಾಲಾಶ್ರೀ ಮೇಡಂ ಬರ್ತಾರೆ.!
ಮೂಲಗಳ ಪ್ರಕಾರ, ಕನ್ನಡ ಚಿತ್ರರಂಗದ ಕನಸಿನ ರಾಣಿ... ಲೇಡಿ ರ್ಯಾಂಬೋ... ಮಾಲಾಶ್ರೀ ಕೂಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಿರೇಮಗಳೂರು ಕಣ್ಣನ್
ಹಿರೇಮಗಳೂರು ಕಣ್ಣನ್ ಕೂಡ ಸಾಧಕರ ಸೀಟ್ ಮೇಲೆ ಕೂರುವ ಸಾಧ್ಯತೆ ಇದೆ.
ನಟಿ ಶ್ರುತಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ನಟಿ ಶ್ರುತಿ ರವರ ಬಳಿ ಜೀ ಕನ್ನಡ ವಾಹಿನಿ ಮಾತುಕತೆ ನಡೆಸಿದೆ. ಶ್ರುತಿ ಗ್ರೀನ್ ಸಿಗ್ನಲ್ ಕೊಟ್ಟರೆ, ವಾರಾಂತ್ಯದಲ್ಲಿ ಶ್ರುತಿ ರವರ ಜೀವನ ಚರಿತ್ರೆ ಅನಾವರಣ ಆಗುವುದು ಖಚಿತ.