Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್ ವಿತ್ ರಮೇಶ್': ಮುಂದಿನ ಸಂಚಿಕೆಗಳಲ್ಲಿ ಯಾರ್ಯಾರು ಬರ್ತಾರೆ.?
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್' ಮೂರನೇ ಆವೃತ್ತಿ ಇನ್ನೇನು ಮುಗಿಯುವ ಹಂತ ತಲುಪಿದೆ. ಇನ್ನೆರಡು ವಾರಾಂತ್ಯಗಳಲ್ಲಿ 'ವೀಕೆಂಡ್ ವಿತ್ ರಮೇಶ್-3' ಮುಕ್ತಾಯವಾಗಲಿದೆ.
ಇಲ್ಲಿಯವರೆಗೂ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರೈ, ಜಗ್ಗೇಶ್, ರಕ್ಷಿತ್ ಶೆಟ್ಟಿ, ಪ್ರಾಣೇಶ್, ಪ್ರೊ.ಕೃಷ್ಣೇಗೌಡ, ನ್ಯಾ.ಸಂತೋಷ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು ಸಾಧಕರ ಸೀಟ್ ಮೇಲೆ ಕೂತಿದ್ದರು. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಾಗಾದ್ರೆ, ಇನ್ನುಳಿದ ಎರಡು ವಾರಾಂತ್ಯಗಳಲ್ಲಿ ಯಾವ ಸೆಲೆಬ್ರಿಟಿ ಭಾಗವಹಿಸಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲರಲ್ಲೂ ಇದೆ. ಆ ಕುತೂಹಲಕ್ಕೆ ನಾವು ಬ್ರೇಕ್ ಹಾಕುತ್ತಿದ್ದೇವೆ. ಮುಂದೆ ಓದಿರಿ...
ಸಾಧಕರ ಸೀಟ್ ಮೇಲೆ ಕೂರುತ್ತಾರಂತೆ ಗಣೇಶ್.!
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸುತ್ತಾರಂತೆ. ಇನ್ನೆರಡು ವಾರಾಂತ್ಯಗಳ ಸಂಚಿಕೆಗಳ ಪೈಕಿ, ಗಣೇಶ್ ಭಾಗವಹಿಸುವ ಸಂಚಿಕೆಯೂ ಪ್ರಸಾರ ಆಗಲಿದೆ ಎಂದು ಜೀ ಕನ್ನಡ ವಾಹಿನಿಯ ಮೂಲಗಳು ತಿಳಿಸಿವೆ.
ಮಾಲಾಶ್ರೀ ಮೇಡಂ ಬರ್ತಾರೆ.!
ಮೂಲಗಳ ಪ್ರಕಾರ, ಕನ್ನಡ ಚಿತ್ರರಂಗದ ಕನಸಿನ ರಾಣಿ... ಲೇಡಿ ರ್ಯಾಂಬೋ... ಮಾಲಾಶ್ರೀ ಕೂಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಿರೇಮಗಳೂರು ಕಣ್ಣನ್
ಹಿರೇಮಗಳೂರು ಕಣ್ಣನ್ ಕೂಡ ಸಾಧಕರ ಸೀಟ್ ಮೇಲೆ ಕೂರುವ ಸಾಧ್ಯತೆ ಇದೆ.
ನಟಿ ಶ್ರುತಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ನಟಿ ಶ್ರುತಿ ರವರ ಬಳಿ ಜೀ ಕನ್ನಡ ವಾಹಿನಿ ಮಾತುಕತೆ ನಡೆಸಿದೆ. ಶ್ರುತಿ ಗ್ರೀನ್ ಸಿಗ್ನಲ್ ಕೊಟ್ಟರೆ, ವಾರಾಂತ್ಯದಲ್ಲಿ ಶ್ರುತಿ ರವರ ಜೀವನ ಚರಿತ್ರೆ ಅನಾವರಣ ಆಗುವುದು ಖಚಿತ.