Don't Miss!
- News Namma Metro: ಈ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ-ಎಲ್ಲೆಲ್ಲಿ? ಮಾಹಿತಿ ತಿಳಿಯಿರಿ
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾ ಗುರು ಹಂಸಲೇಖ ಬಳಿ ಕೆಲಸ ಮಾಡಿದ್ದರು ಎ ಆರ್ ರೆಹಮಾನ್
ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಗೀತ ನಿರ್ದೇಶಕ. ಸಾವಿರಾರು ಸೂಪರ್ ಹಿಟ್ ಹಾಡುಗಳು, ನೂರಾರೂ ದೊಡ್ಡ ದೊಡ್ಡ ಪ್ರಶಸ್ತಿ ಎಲ್ಲವನ್ನು ಅವರು ಪಡೆದಿದ್ದಾರೆ. ವಿಶೇಷ ಅಂದರೆ, ರೆಹಮಾನ್ ನಾದಬ್ರಹ್ಮ ಹಂಸಲೇಖ ಅವರ ಜೊತೆಗೆ ಕೆಲ ಕಾಲ ಕೆಲಸ ಮಾಡಿದ್ದರಂತೆ.
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಹಂಸಲೇಖ ಅವರೇ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದ ಒಂದು ಸಂದರ್ಭದಲ್ಲಿ ಮಾತನಾಡುವ ವೇಳೆ ಹಂಸಲೇಖ ರೆಹಮಾನ್ ಬಗ್ಗೆ ಯಾರಿಗೂ ತಿಳಿಯದ ವಿಷಯವನ್ನು ಹೇಳಿಕೊಂಡಿದ್ದಾರೆ.
'ಬ್ರೇಕಿಂಗ್ ನ್ಯೂಸ್' ವಿರುದ್ಧ ಹಂಸಲೇಖ ಬೇಸರ: 'ವಾಹಿನಿ ಅಂದರೆ ಮೋಹಿನಿ' ಎಂದ ಮನೋಹರ್!
''6-8 ತಾಳಕ್ಕೆ ತಮಿಳು ನಾಡಿನ ನಟರು ಕೊಡುವ ಬಾಡಿ ಗ್ರೇಸ್ ಬೇರೆ ಯಾರು ಕೊಡಲು ಆಗುವುದಿಲ್ಲ ಎಂಬ ದೊಡ್ಡ ಮಾತು ಇದೆ. ರೆಹಮಾನ್ ಇಪ್ಪತೈದು ವರ್ಷಗಳ ಹಿಂದೆ ನನ್ನ ಆರ್ಕೆಸ್ಟ್ರಾದಲ್ಲಿ ಕೆಲವು ಕಾಲ ನೂಡಿಸಿದ್ದ. ಆತ ತುಂಬ ಚುರುಕಾಗಿ ನುಡಿಸುತ್ತಿದ್ದನ್ನು ನೋಡಿ ನಾನು ಅವನ ಜೊತೆಗೆ ಮಾತನಾಡುತ್ತಿದೆ. ಒಮ್ಮೆ 'ಪ್ರೀತಿಯಲ್ಲಿ ಇರೋ ಸುಖ ಗೊತ್ತೆ ಇರಲಿಲ್ಲ..' ಹಾಡನ್ನು ಡಿಫರೆಂಟ್ ಆಗಿ ಪ್ರೊಗ್ರಾಮ್ ಮಾಡಿದ್ದ. ಆಗ ನಾನು ನಿನಗೆ ಇಷ್ಟೊಂದು ಟ್ಯಾಲೆಂಟ್ ಇದೆ. ನೀನು ಮ್ಯೂಸಿಕ್ ಡೈರೆಕ್ಟರ್ ಆದ್ರೆ ಏನ್ ಮಾಡ್ತಿಯಾ ? ಅಂತ ಕೇಳಿದೆ. ಆಗ ಅವನು ಸರ್ ನಾನು 6-8 ತಾಳದಲ್ಲಿ ಮಾತ್ರ ಸಾಂಗ್ ಮಾಡಲ್ಲ ಅಂದಿದ್ದ. ಇದುವರೆಗೆ ರೆಹಮಾನ್ 6-8 ತಾಳದಲ್ಲಿ ಹಾಡು ಮಾಡಿಲ್ಲ.'' ಎಂದು ಹಳೆಯ ನೆನಪನ್ನು ಹಂಸಲೇಖ ಹಂಚಿಕೊಂಡರು.
''ರೆಹಮಾನ್ ಚಿಕ್ಕ ವಯಸ್ಸಿನಲ್ಲಿಯೇ ಗುರಿ ಇಟ್ಟುಕೊಂಡಿದ್ದ ಮ್ಯೂಸಿಕ್ ಡೈರೆಕ್ಟರ್.'' ಎಂದು ಹೇಳಿದ ಹಂಸಲೇಖ ರೆಹಮಾನ್ ಪ್ರತಿಭೆಯನ್ನು ಹೊಗಳಿದರು.