Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಚಂದನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಕಿರುತೆರೆ ನಟ ದೀಪಕ್
ಕನ್ನಡ ಕಿರುತೆರೆಯ ಖ್ಯಾತ ನಟ ದೀಪಕ್ ಮಹದೇವ್ ಮತ್ತು ನಟಿ ಚಂದನಾ ಹೊಸ ಬಾಳಿನ ಹೊಸಿಲಲಿ ನಿಂತಿದ್ದಾರೆ. ಇತ್ತೀಚಿಗೆ ಚಂದನಾ ಮತ್ತು ದೀಪಕ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಸದ್ಯದಲ್ಲೇ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ನಟ ದೀಪಕ್ ಮಹಾದೇವ್ 'ನಾ ನಿನ್ನ ಬಿಡಲಾರೆ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನಗೆದಿದ್ದರು. ಇನ್ನು ನಟಿ ಚಂದನಾ 'ಸೀತಾ ವಲ್ಲಭ' ಧಾರಾವಾಹಿಯಲ್ಲಿ ಅಂಕಿತಾ ಪಾತ್ರದಲ್ಲಿ ಮಿಂಚಿದ್ರು. ವಿಲನ್ ಶೇಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅಂಕಿತಾ ಕನ್ನಡ ಪ್ರೇಕ್ಷಕರ ಮನೆಮಾತಾಗಿದ್ದರು. ಈ ಧಾರಾವಾಹಿ ಬಳಿಕ ಚಂದನಾ ಕನ್ನಡದ ಕಿರುತೆರೆಯಿಂದ ಮಾಯವಾಗಿದ್ದರು.
ಇದೀಗ ದೀಪಕ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸರಳ ನಿಶ್ಚಿತಾರ್ಥ ಸಮಾರಂಭದಲ್ಲಿ ದೀಪಕ್ ಮತ್ತು ಚಂದನಾ ಉಂಗುರ ಬದಲಾಯಿಸಿಕೊಂಡರು. ಕೊರೊನಾ ಕಾರಣದಿಂದ ಹೆಚ್ಚು ಜನರಿಗೆ ಆಹ್ವಾನ ನೀಡದೆ, ಕೇವಲ ಕುಟುಂಬದ ಕೆಲವು ಸದಸ್ಯರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು.
ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ದೀಪಕ್ ಮತ್ತು ಚಂದನಾ ಈಗ ಪತಿ-ಪತ್ನಿಯರಾಗುತ್ತಿದ್ದಾರೆ. ನಿಶ್ಚಿತಾರ್ಥದಲ್ಲಿ ಚಂದನಾ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ರೆ, ದೀಪಕ್ ಗೋಲ್ಡ್ ಬಣ್ಣದ ಶೇರ್ವಾನಿಯಲ್ಲಿ ಮಿಂಚಿದ್ರು. ಇಬ್ಬರ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಚಂದನಾ ಜೊತೆ ಎಂಗೇಜ್ ಆಗಿರುವ ಸಂತಸದಸ ಸುದ್ದಿಯನ್ನು ದೀಪಕ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು. "1/07/2021 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ. ಸದ್ಯದಲ್ಲೇ ಮದುವೆ" ಎಂದು ಹೇಳಿದ್ದರು. ಕೊರೊನಾ ಕಾರಣದಿಂದ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಎಂದಿದ್ದರು. ಜೊತೆಗೆ ಚಂದನಾ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದರು.
ದೀಪಕ್ ಮತ್ತು ಚಂದನಾ ಜೋಡಿಗೆ ಅಭಿಮಾನಿಗಳು, ಕಿರುತೆರೆ ಸ್ನೇಹಿತರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಂದಹಾಗೆ ದೀಪಕ್ 'ನಾ ನಿನ್ನ ಬಿಡಲಾರೆ' ಬಳಿಕ ನಾಯಕಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಚಂದನಾ ಸದ್ಯ ಕನ್ನಡ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಪರಭಾಷಾ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಕನ್ನಡ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲಿ ಎನ್ನುವುದು ಅಭಿಮಾನಿಗಳ ಆಶಯ.