Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ವಾಹಿನಿಯಿಂದಲೂ ಕಂಬಿ ಕಿತ್ತ ಬ್ರಹ್ಮಾಂಡ
ಈಗ ಅಲ್ಲಿಂದಲೂ ಏಕಾಏಕಿ ಕಾಣೆಯಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ವೀಕ್ಷಕರಿಂದ ತೀವ್ರ ಅಸಮಾಧಾನ ಹಾಗೂ ಆಕ್ರೋಶ ವ್ಯಕ್ತವಾಗಿದ್ದೇ ಶರ್ಮ ಅವರು ಕಂಬಿ ಕೀಳಲು ಕಾರಣ ಎನ್ನಲಾಗಿದೆ. ಸುವರ್ಣ ನ್ಯೂಸ್ ಆರಂಭಿಸಿರುವ ಹೊಸ ಕಾರ್ಯಕ್ರಮಕ್ಕೆ 'ಬ್ರಹ್ಮಾಂಡ' ಎಂದು ಹೆಸರಿಡಲಾಗಿದೆ.
ಈ ಹಿಂದೆ ನರೇಂದ್ರ ಬಾಬು ಶರ್ಮ ಅವರು ಕಸ್ತೂರಿ ವಾಹಿನಿಯಲ್ಲಿ ಬ್ರಹ್ಮಾಂಡ, ಸುವರ್ಣ ವಾಹಿನಿಯಲ್ಲಿ ಭವ್ಯ ಬ್ರಹ್ಮಾಂಡ ಹಾಗೂ ಜೀ ಕನ್ನಡದಲ್ಲಿ ಬೃಹತ್ ಬ್ರಹ್ಮಾಂಡ ಎಂಬ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು. ಸ್ವಲ್ಪ ವಿರಾಮದ ಬಳಿಕ ಅವರು ಸುವರ್ಣ ನ್ಯೂಸ್ ಚಾನಲ್ ಗೆ ಪಾದಾರ್ಪಣೆ ಮಾಡಿದ್ದರು.
"ಹೆಣ್ಣು ಮಕ್ಕಳು ನೈಟಿ ತೊಡಬಾರದು. ಸಲ್ವಾರ್ ಕಮೀಜ್ ಹಾಕಿದರೆ ಗರ್ಭಕೋಶದ ಕ್ಯಾನ್ಸರ್ ಬರುತ್ತೆ. ರಾತ್ರಿ ಗಂಡನ ಜತೆ ಮಲಗಿ ಬೆಳಿಗ್ಗೆ ಎದ್ದ ಕೂಡಲೇ ಅಡುಗೆ ಮನೆಗೆ ಹೋಗಬಾರದು. ಹೆಣ್ಣು ಮಕ್ಕಳು ಮನೆಯಲ್ಲಿ ಇದ್ದರೆ ಲಕ್ಷಣ. ಅಗಲವಾದ ಬಿಂದಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಬೂಬಮ್ಮಗಳ ಹಾಗೆ ಕಾಣುತ್ತೀರಿ. (ಬೂಬಮ್ಮ ಎಂದರೆ ಮುಸ್ಲಿಂ ಹೆಂಗಸು)...
ಇಡೀ ಜಗತ್ತು ಮುಳುಗಿ ಹೋಗುತ್ತದೆ, ಬೆಳಗಾವಿಯ ಒಂದು ಹಳ್ಳಿ ಮಾತ್ರ ಉಳಿದುಕೊಳ್ಳುತ್ತದೆ. ಪಾಪಿಗಳು ಮಾಡಿದ ತಪ್ಪಿಗಾಗಿ ಪಾಪಿಗಳಲ್ಲದವರೂ ನಾಶವಾಗುತ್ತಾರೆ. ಹಾವು ಎಂದರೆ ದೇವರು. ಜಪಾನ್ ದೇಶದವರು ಹಾವು ತಿನ್ನುತ್ತಾರೆ, ಅದಕ್ಕೆ ಸುನಾಮಿ ಬಂದಿದ್ದು.." .ಹಾಗೆ ಹೀಗೆ ಎಂದು ಹೇಳಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು ಶರ್ಮ.
ಈಗ ಸುವರ್ಣ ನ್ಯೂಸ್ ಚಾನಲ್ ನಿಂದಲೂ ಕಾಲ್ಕಿತ್ತಿರುವ ನರೇಂದ್ರ ಬಾಬು ಶರ್ಮ ಅವರು ಮತ್ತಿನ್ಯಾವ ಚಾನಲ್ ನಲ್ಲಿ ಪ್ರತ್ಯಕ್ಷರಾಗುತ್ತಾರೋ ಎಂದು ಜನರ ಊಹೆಗೂ ನಿಲುಕುತ್ತಿಲ್ಲ. ಅವರು ಯಾವುದೇ ಚಾನಲ್ ನಲ್ಲಿ ಯಾವುದೇ ರೂಪದಲ್ಲಿ ಪ್ರತ್ಯಕ್ಷರಾದರೂ 'ಬ್ರಹ್ಮಾಂಡ'ದಷ್ಟೇ ಬೃಹತ್ ಆದ ಅವರು ಜನರ ಕಣ್ಣಿಗೆ ಬಿದ್ದೇ ಬೀಳುತ್ತಾರೆ ಬಿಡಿ.