Don't Miss!
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Sports RCB vs KKR: ಚಿನ್ನಸ್ವಾಮಿಯಲ್ಲಿ ಮತ್ತೊಂದು ರೋಚಕ ಪಂದ್ಯ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಪಿಲ್ ಶರ್ಮಾ ಶೋ ದಿಂದ ಔಟ್ ಆದ ಸಿಧು : ಕಾರಣವೇನು?
ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕಪಿಲ್ ಶರ್ಮಾ ಶೋದಿಂದ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ಹೊರಹಾಕಲಾಗಿದೆ. ಪುಲ್ವಾಮ ದಾಳಿ ಬಗ್ಗೆ ಸಿಧು ನೀಡಿದ ಹೇಳಿಕೆಯೇ ಇದಕ್ಕೆಲ್ಲ ಕಾರಣವಾಗಿದೆ.
ಪುಲ್ವಾಮ ದಾಳಿ ಬಗ್ಗೆ ಮಾತನಾಡಿದ್ದ ಸಿಧು ''ಭಯೋತ್ಪಾದಕರ ಹೀನ ಕೃತ್ಯಗಳಿಗೆ ದೇಶಗಳನ್ನು ಹೊಣೆಗಾರನನ್ನಾಗಿಸಲು ಸಾಧ್ಯವಿಲ್ಲ. ಉಗ್ರರಿಗೆ ಪಂಥ ಮತ್ತು ಧರ್ಮವಿಲ್ಲ. ಅವರು ಒಳ್ಳೆಯವರು, ಕೆಟ್ಟವರು ಮತ್ತು ಕುರೂಪಿಗಳು. ಪ್ರತಿ ಸಂಸ್ಥೆಯೂ ಅವರನ್ನು ಹೊಂದಿದೆ. ಪ್ರತಿ ದೇಶದಲ್ಲಿಯೂ ಅವರಿದ್ದಾರೆ. ಈ ಕುರೂಪಿತನವನ್ನು ಶಿಕ್ಷಿಸಬೇಕಾಗಿದೆ. ಆದರೆ, ಈ ಘೋರ ಕೃತ್ಯಕ್ಕೆ ವ್ಯಕ್ತಿಗತ ದೂಷಣೆ ಮಾಡುವುದು ಸರಿಯಲ್ಲ'' ಎಂದು ಸಿಧು ಹೇಳಿದ್ದರು.
ಪಾಕಿಸ್ತಾನ ಪರ ಹೇಳಿಕೆ ನೀಡಿದ್ದಕ್ಕೆ ಕಪಿಲ್ ಶರ್ಮಾ ಶೋದಿಂದ ಸಿಧು ಕಿಕ್ಔಟ್
ಸಿದ್ದು ಹೇಳಿಕೆಗೆ ದೊಡ್ಡ ವಿರೋಧ ವ್ಯಕ್ತವಾಗಿತ್ತು. ಬಾಯ್ಕಾಟ್ ಸಿಧು ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಕಷ್ಟು ಜನ ತಮ್ಮ ಅಸಮಾದಾನವನ್ನು ವ್ಯಕ್ತಪಡಿಸಿದ್ದರು. ಇದರಿಂದ ಹೆಚ್ಚೆತ್ತ ಸೋನಿ ಚಾನೆಲ್ ನಿರ್ಮಾಣ ಸಂಸ್ಥೆ ಸಿಧು ಅವರನ್ನು ಕಾರ್ಯಕ್ರಮದಿಂದ ಕಿತ್ತು ಹಾಕುವಂತೆ ಸೂಚನೆ ನೀಡಿದೆ.
ಕಪಿಲ್ ಶರ್ಮಾ ಶೋದಿಂದ ಹೊರ ಹೋಗುವಂತೆ ಸಿಧು ಅವರಿಗೆ ಕಾರ್ಯಕ್ರಮದ ಆಯೋಜಕರು ಹೇಳಿದ್ದು, ಅವರ ಜಾಗಕ್ಕೆ ಅರ್ಚನಾ ಪೂರಣ್ ಸಿಂಗ್ ಅವರನ್ನು ಕರೆತಂದಿದೆ. ಸೂಕ್ಷ ವಿಚಾರದಲ್ಲಿ ಪಾಕಿಸ್ತಾನದ ಪರ ಮಾತಾಡಿದ್ದ ಸಿಧು ಮಾತು ಅವರಿಗೆ ಮುಳುವಾಗಿದೆ.