Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಕ್ಷ್ಮೀ ಬಾರಮ್ಮ ಧಾರಾವಾಹಿ ಗೊಂಬೆ ಕಿಡ್ನಪ್ ನ ಅಸಲಿ ಕಥೆ
Recommended Video
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿ ನಿತ್ಯ ಪ್ರಸಾರ ಆಗುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಸಾಕಷ್ಟು ಮಹಿಳಾಮಣಿಯರ ಮನಸ್ಸು ಗೆದ್ದಿರುವ ಸೀರಿಯಲ್ ಗಳಲ್ಲಿ ಟಾಪ್ ಲಿಸ್ಟ್ ನಲ್ಲಿದೆ. ಈ ಧಾರಾವಾಹಿ ಆರಂಭ ಆಯ್ತು ಅಂದರೆ ಸಾಕು ಹೆಣ್ಣು ಮಕ್ಕಳು ಇರೋ ಕೆಲಸನ್ನ ಬಿಟ್ಟು ಟಿವಿ ಮುಂದೆ ಹಾಜರ್ ಹಾಕುತ್ತಾರೆ. ಆದರೆ ಕೆಲವು ದಿನಗಳ ಹಿಂದಿನಿಂದ ಲಕ್ಷ್ಮೀ ಬಾರಮ್ಮ ಧಾರಾಹಿಯಲ್ಲಿ ಗೊಂಬೆ ಪಾತ್ರ ನಿರ್ವಹಿಸುತ್ತಿದ್ದ ನಟ ನೇಹಾ ಗೌಡ ಕಿಡ್ನಪ್ ಆಗಿದ್ದಾರೆ.
ಧಾರಾವಾಹಿ ಪ್ರಿಯರಿಗಂತು ಅಯ್ಯೋ ಗೊಂಬೆ ಕಿಡ್ನಾಪ್ ಮಾಡಿದವರು ಯಾರು ಎನ್ನುವುದೇ ಆತಂಕ? ಯಾರು ಮಾಡಿರುತ್ತಾರೆ ? ಗೊಂಬೆ ಚಿಕ್ಕಮ್ಮ ಕುಮುದಾ ಮಾಡಿಸಿರುತ್ತಾರಾ? ಅಥವಾ ಹೊಸ ವಿಲನ್ ಎಂಟ್ರಿ ಆಗುತ್ತಾ ಅಂತೆಲ್ಲಾ ಯೋಚನೆ ಮಾಡಿದ್ದೇ ಮಾಡಿದ್ದು. ಆದರೆ ಧಾರಾವಾಹಿಯಲ್ಲಿ ಮಾತ್ರ ಗೊಂಬೆ ಇನ್ನು ಸಿಕ್ಕಿಲ್ಲ. ವಾರಗಟ್ಟಲೆಯಿಂದ ಗೊಂಬೆ ಹುಡುಕಾಟ ನಡೆಯುತ್ತಲೇ ಇದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ನಟಿ ನೇಹಾ ಗೌಡ
ಆದರೆ ಗೊಂಬೆ ಕಿಡ್ನಪ್ ನ ಅಸಲಿ ಕಥೆಯೇ ಬೇರೆ ಇದೆ. ಕಳೆದ ತಿಂಗಳಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗೊಂಬೆ ಕೆಲಸದಿಂದ ಸಣ್ಣದೊಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಹಾಗಂತ ಧಾರಾವಾಹಿಯಲ್ಲಿ ಅಭಿನಯಿಸುವುದನ್ನು ಬಿಟ್ಟಿಲ್ಲ. ತನ್ನ ಪತಿ ಚಂದನ್ ಜೊತೆ ಹನಿಮೂನ್ ಹೋಗಿದ್ದಾರೆ.
ಹಾಂಗ್ ಕಾಂಗ್ ಪ್ರವಾಸಿ ಸ್ಥಳಗಳಿಗೆ ನೇಹಾ ಗೌಡ ಹಾಗೂ ಚಂದನ್ ಭೇಟಿ ನೀಡಿದ್ದು ನವದಂಪತಿಗಳು ಜೊತೆಯಲ್ಲಿ ತೆಗೆಸಿಕೊಂಡು ಫೋಟೋಗಳನ್ನ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಆದರೆ ಟಿವಿ ಮುಂದೆ ಕುಳಿತ ಹೆಣ್ಣು ಮಕ್ಕಳು ಮಾತ್ರ ಅಯ್ಯೋ ಗೊಂಬೆ ಸಿಗಲಿಲ್ಲ ಅಂತ ತಲೆ ಕೆಡಿಸಿಕೊಳ್ಳುತ್ತಿದ್ದಾರೆ.
ಕಿರುತೆರೆ ಗೊಂಬೆಯ ಕಲರ್ ಫುಲ್ ಫೋಟೋ ಶೂಟ್