Don't Miss!
- News ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರಂಜನ್ ದೇಶಪಾಂಡೆ ಪ್ರಕಾರ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
'ಲೂಸಿಯಾ', 'ಲವ್ ಇನ್ ಮಂಡ್ಯ', 'ರಾಕೆಟ್', 'ಬ್ಯೂಟಿಫುಲ್ ಮನಸ್ಸುಗಳು' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
ಹಾಗಂತ ಹೇಳಿರುವುದು 'ಬಿಗ್ ಬಾಸ್' ಮನೆಗೆ ಹೋಗಿ ಬಂದಿದ್ದ ನಟ, ಆರ್.ಜೆ ಹಾಗೂ ನಿರೂಪಕ ಆಗಿರುವ ನಿರಂಜನ್ ದೇಶಪಾಂಡೆ.
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಕುರಿ ಪ್ರತಾಪ್, ಶಾಲಿನಿ ಜೊತೆ ಅತಿಥಿಯಾಗಿ ಭಾಗವಹಿಸಿದ ನಿರಂಜನ್ ದೇಶಪಾಂಡೆ, ನೀನಾಸಂ ಸತೀಶ್ ರವರನ್ನ 'ಸ್ವಾರ್ಥಿ' ಅಂತ ಕರೆದರು.
'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದ 'ದಿಢೀರ್ ಬೆಂಕಿ' ಸುತ್ತಿನಲ್ಲಿ, ''ಈ ಮಾತುಗಳನ್ನು ಕೇಳಿದಾಗ ನಿಮಗೆ ಯಾರು ನೆನಪಾಗುತ್ತಾರೆ'' ಎನ್ನುತ್ತಾ 'ಸ್ವಾರ್ಥಿ' ಎಂಬ ಪದವನ್ನ ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮುಂದಿಟ್ಟರು.
ಆಗ ಹಿಂದು-ಮುಂದು ಯೋಚನೆ ಮಾಡದೆ 'ನೀನಾಸಂ ಸತೀಶ್' ಎಂದುಬಿಟ್ಟರು ನಿರಂಜನ್ ದೇಶಪಾಂಡೆ. ಅದು 'ದಿಢೀರ್ ಬೆಂಕಿ' ಸುತ್ತು ಆಗಿದ್ರಿಂದ, 'ಸ್ವಾರ್ಥಿ' ಎಂದು ಹೇಳಿದ್ಯಾಕೆ ಎಂಬುದಕ್ಕೆ ನಿರಂಜನ್ ವಿವರಣೆ ಕೊಡಲಿಲ್ಲ. ನಿರೂಪಕ ಅಕುಲ್ ಕೂಡ ವಿವರಣೆ ಕೇಳಲಿಲ್ಲ.