Don't Miss!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರಂಜನ್ ದೇಶಪಾಂಡೆ ಪ್ರಕಾರ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
'ಲೂಸಿಯಾ', 'ಲವ್ ಇನ್ ಮಂಡ್ಯ', 'ರಾಕೆಟ್', 'ಬ್ಯೂಟಿಫುಲ್ ಮನಸ್ಸುಗಳು' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
ಹಾಗಂತ ಹೇಳಿರುವುದು 'ಬಿಗ್ ಬಾಸ್' ಮನೆಗೆ ಹೋಗಿ ಬಂದಿದ್ದ ನಟ, ಆರ್.ಜೆ ಹಾಗೂ ನಿರೂಪಕ ಆಗಿರುವ ನಿರಂಜನ್ ದೇಶಪಾಂಡೆ.
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಕುರಿ ಪ್ರತಾಪ್, ಶಾಲಿನಿ ಜೊತೆ ಅತಿಥಿಯಾಗಿ ಭಾಗವಹಿಸಿದ ನಿರಂಜನ್ ದೇಶಪಾಂಡೆ, ನೀನಾಸಂ ಸತೀಶ್ ರವರನ್ನ 'ಸ್ವಾರ್ಥಿ' ಅಂತ ಕರೆದರು.
'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದ 'ದಿಢೀರ್ ಬೆಂಕಿ' ಸುತ್ತಿನಲ್ಲಿ, ''ಈ ಮಾತುಗಳನ್ನು ಕೇಳಿದಾಗ ನಿಮಗೆ ಯಾರು ನೆನಪಾಗುತ್ತಾರೆ'' ಎನ್ನುತ್ತಾ 'ಸ್ವಾರ್ಥಿ' ಎಂಬ ಪದವನ್ನ ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮುಂದಿಟ್ಟರು.
ಆಗ ಹಿಂದು-ಮುಂದು ಯೋಚನೆ ಮಾಡದೆ 'ನೀನಾಸಂ ಸತೀಶ್' ಎಂದುಬಿಟ್ಟರು ನಿರಂಜನ್ ದೇಶಪಾಂಡೆ. ಅದು 'ದಿಢೀರ್ ಬೆಂಕಿ' ಸುತ್ತು ಆಗಿದ್ರಿಂದ, 'ಸ್ವಾರ್ಥಿ' ಎಂದು ಹೇಳಿದ್ಯಾಕೆ ಎಂಬುದಕ್ಕೆ ನಿರಂಜನ್ ವಿವರಣೆ ಕೊಡಲಿಲ್ಲ. ನಿರೂಪಕ ಅಕುಲ್ ಕೂಡ ವಿವರಣೆ ಕೇಳಲಿಲ್ಲ.