Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರಂಜನ್ ದೇಶಪಾಂಡೆ ಪ್ರಕಾರ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
'ಲೂಸಿಯಾ', 'ಲವ್ ಇನ್ ಮಂಡ್ಯ', 'ರಾಕೆಟ್', 'ಬ್ಯೂಟಿಫುಲ್ ಮನಸ್ಸುಗಳು' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ನಟ ನೀನಾಸಂ ಸತೀಶ್ 'ಸ್ವಾರ್ಥಿ'ಯಂತೆ.!
ಹಾಗಂತ ಹೇಳಿರುವುದು 'ಬಿಗ್ ಬಾಸ್' ಮನೆಗೆ ಹೋಗಿ ಬಂದಿದ್ದ ನಟ, ಆರ್.ಜೆ ಹಾಗೂ ನಿರೂಪಕ ಆಗಿರುವ ನಿರಂಜನ್ ದೇಶಪಾಂಡೆ.
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಕುರಿ ಪ್ರತಾಪ್, ಶಾಲಿನಿ ಜೊತೆ ಅತಿಥಿಯಾಗಿ ಭಾಗವಹಿಸಿದ ನಿರಂಜನ್ ದೇಶಪಾಂಡೆ, ನೀನಾಸಂ ಸತೀಶ್ ರವರನ್ನ 'ಸ್ವಾರ್ಥಿ' ಅಂತ ಕರೆದರು.
'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದ 'ದಿಢೀರ್ ಬೆಂಕಿ' ಸುತ್ತಿನಲ್ಲಿ, ''ಈ ಮಾತುಗಳನ್ನು ಕೇಳಿದಾಗ ನಿಮಗೆ ಯಾರು ನೆನಪಾಗುತ್ತಾರೆ'' ಎನ್ನುತ್ತಾ 'ಸ್ವಾರ್ಥಿ' ಎಂಬ ಪದವನ್ನ ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮುಂದಿಟ್ಟರು.
ಆಗ ಹಿಂದು-ಮುಂದು ಯೋಚನೆ ಮಾಡದೆ 'ನೀನಾಸಂ ಸತೀಶ್' ಎಂದುಬಿಟ್ಟರು ನಿರಂಜನ್ ದೇಶಪಾಂಡೆ. ಅದು 'ದಿಢೀರ್ ಬೆಂಕಿ' ಸುತ್ತು ಆಗಿದ್ರಿಂದ, 'ಸ್ವಾರ್ಥಿ' ಎಂದು ಹೇಳಿದ್ಯಾಕೆ ಎಂಬುದಕ್ಕೆ ನಿರಂಜನ್ ವಿವರಣೆ ಕೊಡಲಿಲ್ಲ. ನಿರೂಪಕ ಅಕುಲ್ ಕೂಡ ವಿವರಣೆ ಕೇಳಲಿಲ್ಲ.