ವಿದೇಶದಲ್ಲಿ ಕುಣಿಯಲು ನಿತ್ಯಾನಂದನಿಗೆ ಕೋರ್ಟ್ ವೀಸಾ

ರಾಸಲೀಲೆ ಪ್ರಕರಣದಲ್ಲಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದು ಮಾಡಿ ಎಂದು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆಎನ್ ಕೇಶವನಾರಾಯಣ ಮಾನ್ಯ ಮಾಡಿಲ್ಲ.
ಹೀಗೆ, ನಿತ್ಯಾನಂದ ಸ್ವಾಮಿಗಳು ಇನ್ನು ಮುಕ್ತ ಮುಕ್ತ ಮುಕ್ತ ಎಂದು ಕೋರ್ಟ್ ಮೂರು ಬಾರಿ ಆರ್ಡರ್ ಮಾಡಿದೆ. ಅತ್ತ, ಅಮ್ಮ ಜಯಲಲಿತಾ 'ನನ್ನ ಪರಮ ವೈರಿ ಸನ್ ಟಿವಿಯ ವಿರುದ್ಧ ಎಷ್ಟು ಕೇಸಾದರೂ ಜಡಿ ಅದನ್ನೆಲ್ಲ ನಾನು ನೋಡ್ಕೋತೀನಿ' ಎಂದು ಅಭಯ ನೀಡಿದ್ದಾರೆ. ಇದು ಕೋತಿಗೆ ಕಳ್ಳು ಕುಡಿಸಿದಂತಾಗಿ ಅವಯ್ಯ ನಿತ್ಯಾನಂದ ಇನ್ಯಾವ ಕುಂಡಿ ಕುಣಿತಕ್ಕೆ ಥಕದಮಿ ಎನ್ನುತ್ತಾನೋ ಆ ಈಶ್ವರನೇ ಬಲ್ಲ.
ಜತೆಗೆ, ನಿತ್ಯಾನಂದ ಸ್ವಾಮಿಗಳು ವಿದೇಶಕ್ಕೆ ಹೋಗಲು ತಮ್ಮದೇನೂ ಅಭ್ಯಂತರವಿಲ್ಲ ಎಂದೂ ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದ ಮಹಾಸ್ವಾಮಿಗಳು ಈ ಬಾರಿ ಕುಂಡಲಿನೀ ಕುಣಿತವನ್ನು ಯಾವುದಾದರೂ ವಿದೇಶದಲ್ಲಿ ಆಯೋಜಿಸುವ ಅಪಾಯಗಳು ಹೆಚ್ಚಾಗಿವೆ. ಇಷ್ಟಕ್ಕೂ, ನಿತ್ಯಾನಂದ ಸ್ವಾಮಿ ಈಶ್ವರನ ಆರಾಧಕನೋ ಅಥವಾ ಕೃಷ್ಣನ ಅಪರಾವತಾರವೋ ತಿಳಿಯದಾಗಿದೆ ಎಂದು ಬಿಡದಿ ಜನ ತಲೆ ಚಚ್ಚಿಕೊಳ್ಳುತ್ತಿದ್ದಾರೆ.


Click it and Unblock the Notifications











