Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದೇಶದಲ್ಲಿ ಕುಣಿಯಲು ನಿತ್ಯಾನಂದನಿಗೆ ಕೋರ್ಟ್ ವೀಸಾ
ರಾಸಲೀಲೆ ಪ್ರಕರಣದಲ್ಲಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದು ಮಾಡಿ ಎಂದು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆಎನ್ ಕೇಶವನಾರಾಯಣ ಮಾನ್ಯ ಮಾಡಿಲ್ಲ.
ಹೀಗೆ, ನಿತ್ಯಾನಂದ ಸ್ವಾಮಿಗಳು ಇನ್ನು ಮುಕ್ತ ಮುಕ್ತ ಮುಕ್ತ ಎಂದು ಕೋರ್ಟ್ ಮೂರು ಬಾರಿ ಆರ್ಡರ್ ಮಾಡಿದೆ. ಅತ್ತ, ಅಮ್ಮ ಜಯಲಲಿತಾ 'ನನ್ನ ಪರಮ ವೈರಿ ಸನ್ ಟಿವಿಯ ವಿರುದ್ಧ ಎಷ್ಟು ಕೇಸಾದರೂ ಜಡಿ ಅದನ್ನೆಲ್ಲ ನಾನು ನೋಡ್ಕೋತೀನಿ' ಎಂದು ಅಭಯ ನೀಡಿದ್ದಾರೆ. ಇದು ಕೋತಿಗೆ ಕಳ್ಳು ಕುಡಿಸಿದಂತಾಗಿ ಅವಯ್ಯ ನಿತ್ಯಾನಂದ ಇನ್ಯಾವ ಕುಂಡಿ ಕುಣಿತಕ್ಕೆ ಥಕದಮಿ ಎನ್ನುತ್ತಾನೋ ಆ ಈಶ್ವರನೇ ಬಲ್ಲ.
ಜತೆಗೆ, ನಿತ್ಯಾನಂದ ಸ್ವಾಮಿಗಳು ವಿದೇಶಕ್ಕೆ ಹೋಗಲು ತಮ್ಮದೇನೂ ಅಭ್ಯಂತರವಿಲ್ಲ ಎಂದೂ ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದ ಮಹಾಸ್ವಾಮಿಗಳು ಈ ಬಾರಿ ಕುಂಡಲಿನೀ ಕುಣಿತವನ್ನು ಯಾವುದಾದರೂ ವಿದೇಶದಲ್ಲಿ ಆಯೋಜಿಸುವ ಅಪಾಯಗಳು ಹೆಚ್ಚಾಗಿವೆ. ಇಷ್ಟಕ್ಕೂ, ನಿತ್ಯಾನಂದ ಸ್ವಾಮಿ ಈಶ್ವರನ ಆರಾಧಕನೋ ಅಥವಾ ಕೃಷ್ಣನ ಅಪರಾವತಾರವೋ ತಿಳಿಯದಾಗಿದೆ ಎಂದು ಬಿಡದಿ ಜನ ತಲೆ ಚಚ್ಚಿಕೊಳ್ಳುತ್ತಿದ್ದಾರೆ.