Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರಭಾಷೆಯ ಕಿರುತೆರೆಯಲ್ಲಿ ಮೋಡಿ ಮಾಡುತ್ತಿರುವ 'ಪದ್ಮಾವತಿ'ಯ ತುಳಸಿ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಪದ್ಮಾವತಿ' ಧಾರಾವಾಹಿಯಲ್ಲಿ ನಾಯಕಿ ತುಳಸಿಯಾಗಿ ನಟಿಸಿ ಸೈ ಎನಿಸಿಕೊಂಡಿರುವ ಚೆಂದುಳ್ಳಿ ಚೆಲುವೆಯ ಹೆಸರು ದೀಪ್ತಿ ಮನ್ನೆ.
ಬೆಳ್ಳಿತೆರೆಯ ಮೂಲಕ ನಟನಾ ಜಗತ್ತಿಗೆ ಕಾಲಿಟ್ಟು 'ಪದ್ಮಾವತಿ' ಧಾರಾವಾಹಿಯ ಮೂಲಕ ಕಿರುತೆರೆಗೆ ಜಿಗಿದ ಈಕೆ ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ಮೋಡಿ ಮಾಡಿದ ಬೆಡಗಿ. ಸದ್ಯ ತೆಲುಗಿನ 'ರಾಧಮ್ಮ ಕುತುರು' ಧಾರಾವಾಹಿಯಲ್ಲಿ ನಾಯಕಿ ಅಕ್ಷರಾ ಆಗಿ ಅಭಿನಯಿಸುತ್ತಿರುವ ದಾವಣಗೆರೆಯ ಬೆಡಗಿ ಕಲಿತದ್ದು ಫ್ಯಾಷನ್ ಡಿಸೈನ್.
ಬಹುಕಾಲದ ಗೆಳೆಯನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಿಯಾಂಕಾ ಕಾಮತ್
ಫ್ಯಾಷನ್ ಡಿಸೈನಿಂಗ್ನಲ್ಲಿ ಪದವಿ
ಬೆಂಗಳೂರಿನ ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸೇರಿದ ದೀಪ್ತಿ ಮನ್ನೆ ಫ್ಯಾಷನ್ ಡಿಸೈನಿಂಗ್ನಲ್ಲಿ ಪದವಿಯನ್ನು ಪಡೆದುಕೊಂಡರು. ಪದವಿಯ ಸಮಯದಲ್ಲಿ ದೀಪ್ತಿಯನ್ನು ನೋಡುತ್ತಿದ್ದ ಅನೇಕ ಸ್ನೇಹಿತರು ನೀನು ಯಾಕೆ ನಟಿಸಬಾರದು? ಯಾಕೆ ಬಣ್ಣದ ಲೋಕಕ್ಕೆ ಕಾಲಿಡಬಾರದು ಎಂದು ಪ್ರಶ್ನಿಸುತ್ತಿದ್ದಾರೆ. ಆ ಒಂದು ಪ್ರಶ್ನೆ ತನ್ನ ಜೀವನದ ದಿಕ್ಕನ್ನೇ ಬದಲಿಸುತ್ತದೆ ಎಂದು ಸ್ವತಃ ದೀಪ್ತಿ ಮನ್ನೆ ಅವರೇ ಅಂದಕೊಂಡಿರಲಿಲ್ಲ.
ಪದವಿಯ ಬಳಿಕ ನಟನೆಯಲ್ಲಿ ಒಲವು
ಸ್ನೇಹಿತರ ಪ್ರಶ್ನೆಯನ್ನು ಗಂಭೀರವಾಗಿ ಸ್ವೀಕರಿಸಿದ ದೀಪ್ತಿ ಮನ್ನೆ ಪದವಿಯ ನಂತರ ನಟನಾ ಕ್ಷೇತ್ರಕ್ಕೆ ಕಾಲಿಡುವ ನಿರ್ಧಾರ ತೆಗೆದುಕೊಂಡರು. ನಟಿಯಾಗಬೇಕು ಅಂದುಕೊಂಡಿದ್ದೇ ತಡ, ಇದ್ದ ಆಡಿಶನ್ಗಳನ್ನೆಲ್ಲಾ ಕೊಡಲು ಆರಂಭಿಸಿದ್ದರು.
ತಮಿಳಿನಲ್ಲಿ ಮೊದಲ ಸಿನಿಮಾ
ಒಂದಷ್ಟು ಆಡಿಶನ್ ಗಳಿಗೆ ಹೋದ ಮತ್ತೆ 'ಎವನ್' ಎನ್ನುವ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದುಕೊಂಡರು ದೀಪ್ತಿ ಮನ್ನೆ. ನಂತರ ತಮಿಳು ಮಾತ್ರವಲ್ಲದೇ ತೆಲುಗು, ಕನ್ನಡ ಸಿನಿಮಾಗಳಿಂದ ಅವಕಾಶಗಳನ್ನು ಪಡೆದರು. 'ನಮ್ಮೂರ ಹೈಕ್ಳು' ಕನ್ನಡ ಸಿನಿಮಾದ ಜೊತೆಗೆ ತೆಲುಗಿನ 'ಇಕ್ ಸೇ ಲವ್ ' ಹಾಗೂ ತಮಿಳಿನ 'ದೇವದಾಸ್ ಬ್ರದರ್ಸ್' ಸಿನಿಮಾದಲ್ಲಿ ಅಭಿನಯಿಸಿದರು.
ಪರಭಾಷೆ ಕಿರುತೆರೆಯಲ್ಲಿ ನಟನೆ
ಮನೋಜ್ಞ ನಟನೆಯ ಮೂಲಕ ಹಿರಿತೆರೆಯಲ್ಲಿ ಮಿಂಚಿದ ದೀಪ್ತಿ ಮನ್ನೆ ನಂತರ ಕಾಲಿಟಿದ್ದು ಕಿರುತೆರೆಗೆ. 'ಪದ್ಮಾವತಿ' ಧಾರಾವಾಹಿಯ ತುಳಸಿಯಾಗಿ ಬದಲಾದ ದೀಪ್ತಿ ನಟಿಸಿದ್ದು ಒಂದೇ ಧಾರಾವಾಹಿ ಆದರೂ ಈಗಲೂ ಆ ಪಾತ್ರದ ಮೂಲಕ ಕನ್ನಡ ಕಿರುತೆರೆಯಲ್ಲಿ ಮನೆ ಮಾತಾಗಿದ್ದಾರೆ. ಇಂದಿಗೂ ಪದ್ಮಾವತಿಯ ತುಳಸಿ ಆಗಿಯೇ ಕನ್ನಡ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ದೀಪ್ತಿ ಇದೀಗ 'ರಾಧಮ್ಮ ಕುತುರ'ವಿನ ಅಕ್ಷರಾ ಆಗಿ ಪರಭಾಷೆಯ ವೀಕ್ಷಕರನ್ನು ರಂಜಿಸುತ್ತಿದ್ದಾರೆ.