Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅರಮನೆ ಗಿಳಿ' ತಂಡದ ಜೊತೆಯಾದ ನಟಿ ಪದ್ಮಜಾ ರಾವ್
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಅರಮನೆ ಗಿಳಿ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರಧಾರಿಯೊಬ್ಬರು ಬದಲಾಗುತ್ತಿದ್ದಾರೆ. ನಟಿ ಪವಿತ್ರಾ ಲೋಕೇಶ್ ಅವರು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಮತ್ತೊಬ್ಬ ನಟಿ ಆಯ್ಕೆಯಾಗಿದ್ದಾರೆ.
'ಅರಮನೆ ಗಿಳಿ' ಧಾರಾವಾಹಿಯಲ್ಲಿ ಮೀನಾಕ್ಷಮ್ಮನ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ಇಷ್ಟು ದಿನ ಪವಿತ್ರಾ ಲೋಕೇಶ್ ಈ ಪಾತ್ರಕ್ಕೆ ಜೀವ ನೀಡಿದ್ದರು. ಇನ್ಮುಂದೆ ಪವಿತ್ರಾ ಅವರ ಬದಲು ಈ ಪಾತ್ರದಲ್ಲಿ ಪದ್ಮಜಾ ರಾವ್ ಅಭಿನಯಿಸಲಿದ್ದಾರೆ.
ಕನ್ನಡ ಕಿರುತೆರೆಯಲ್ಲಿ 'ಮೀನಾಕ್ಷಮ್ಮನಾಗಿ' ಪವಿತ್ರಾ ಲೋಕೇಶ್!
ದಿಢೀರ್ ಅಂತ ಈ ಬದಲಾವಣೆ ಯಾಕೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದ್ರೆ, ಪದ್ಮಜಾ ರಾವ್ ಕೂಡ ಉತ್ತಮ ಆಯ್ಕೆ ಎಂಬ ಅಭಿಪ್ರಾಯ ಪ್ರೇಕ್ಷಕರ ವಲಯದಲ್ಲಿದೆ.
ಆಗಸ್ಟ್ 19, ಸೋಮವಾರದಿಂದ ಧಾರಾವಾಹಿಯಲ್ಲಿ ಈ ಬದಲಾವಣೆಯಾಗಲಿದೆ. 'ಅರಮನೆ ಗಿಳಿ' ಧಾರಾವಾಹಿ ಸೋಮವಾರದಿಂದ ಶನಿವಾರದವೆರೆಗೆ ರಾತ್ರಿ 9ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.
ವರ್ಷಿಕಾ, ಯೋಗೇಶ್, ಸಿಂಧು ಕಲ್ಯಾಣ್, ಕಿರ್ಲೋಸ್ಕರ್ ಸತ್ಯ ಅವರು 'ಅರಮನೆ ಗಿಳಿ' ಧಾರಾವಾಹಿಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ನಾಗರಾಜ್ ಉಪ್ಪುಂದ ನಿರ್ದೇಶಿಸುತ್ತಿದ್ದಾರೆ.