Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ಬಾಸ್ ಮನೆಗೆ ಹೋಗಲು ತಯಾರಿದ್ದೇನೆ ಎಂದ ಮಾಜಿ ಸಚಿವ
'ಬಿಗ್ಬಾಸ್ ಮನೆಗೆ ಒಬ್ಬ ರಾಜಕಾರಣಿ ಬರುತ್ತಾರೆ' ಎಂದು ಬಿಗ್ಬಾಸ್ ಆಯೋಜಕ ಪರಮೇಶ್ವರ್ ಗುಂಡ್ಕಲ್ ಹೇಳಿದ್ದರು. ಆದರೆ ನಿನ್ನೆ ಮನೆಗೆ ಬಂದ ಸದಸ್ಯರಲ್ಲಿ ಪೂರ್ಣ ಪ್ರಮಾಣದ ರಾಜಕಾರಣಿ ಯಾರೂ ಇರಲಿಲ್ಲ.
ಆದರೆ ಈಗ ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರು, 'ನಾನು ಬಿಗ್ಬಾಸ್ಗೆ ಹೋಗಲು ಆಸಕ್ತಿ ಹೊಂದಿದ್ದೇನೆ' ಎಂದು ಹೇಳಿ ಆಶ್ಚರ್ಯ ಮೂಡಿಸಿದ್ದಾರೆ.
ಇವರೇ ನೋಡಿ ಬಿಗ್ಬಾಸ್ನ ಸುಂದರ ಮನೆ ವಿನ್ಯಾಸ ಮಾಡಿದವರು
ಮಾಜಿ ಸಚಿವ, ಹಾಲಿ ವಿಧಾನಪರಿಷತ್ ಸದಸ್ಯ 'ಹಳ್ಳಿ ಹಕ್ಕಿ' ಎಚ್.ವಿಶ್ವನಾಥ್ ಅವರು 'ನಾನು ಬಿಗ್ಬಾಸ್ ಮನೆಗೆ ಹೋಗಲು ಆಸಕ್ತನಾಗಿದ್ದೇನೆ. ಒಂದು ವೇಳೆ ಅವರು ಕರೆದರೆ ನಾನು ಖಂಡಿತವಾಗಿಯೂ ಬಿಗ್ಬಾಸ್ ಮನೆಗೆ ಹೋಗುತ್ತೇನೆ' ಎಂದಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, 'ಈ ಹಿಂದೆ ಆಯೋಜಕರು ನನ್ನನ್ನು ಬಿಗ್ಬಾಸ್ ಮನೆಗೆ ಆಹ್ವಾನಿಸಿದ್ದರು. ಆದರೆ ಆಗ ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಬಿಗ್ಬಾಸ್ ಗೆ ಹೋಗಿರಲಿಲ್ಲ. ಆದರೆ ಈಗ ನಾನು ತಯಾರಿದ್ದೇನೆ' ಎಂದಿದ್ದಾರೆ ಎಚ್.ವಿಶ್ವನಾಥ್.
'ಬಿಗ್ಬಾಸ್ ಮನೆಗೆ ಹೋಗಿ ಪ್ರಸ್ತುತ ರಾಜಕಾರಣದಲ್ಲಿ ಕಿಚ್ಚು ಹತ್ತುವಂತೆ ಮಾಡುತ್ತೇನೆ ಎಂದಿರುವ ಎಚ್.ವಿಶ್ವನಾಥ್. ಅಲ್ಲಿನ ಸ್ಪರ್ಧಿಗಳಿಗೆ ರಾಜಕಾರಣದ ಪಾಠ ಮಾಡುತ್ತೇನೆ. ಬಿಗ್ಬಾಸ್ ವೇದಿಕೆಯನ್ನು ಕ್ರಿಯಾಶೀಲವಾಗಿ ಬಳಿಸಿಕೊಳ್ಳುವ ಇರಾದೆಯೂ ನನಗೆ ಇದೆ. ನನ್ನ ಆಪ್ತರು ಸಹ ಬಿಗ್ಬಾಸ್ ಗೆ ಹೋಗುವಂತೆ ನನಗೆ ಸಲಹೆ ನೀಡಿದ್ದಾರೆ' ಎಂದಿದ್ದಾರೆ ವಿಶ್ವನಾಥ್.
'ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪ ಬರುತ್ತಿವೆ, ಹೀಗಾಗಿ ಹೆಚ್ಚು ದಿನ ಬಿಗ್ಬಾಸ್ ಮನೆಯಲ್ಲಿ ಇರಲು ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಚುನಾವಣೆ ಪ್ರಚಾರ ಕಾರ್ಯಗಳಲ್ಲಿ ಸಹ ಪಾಲ್ಗೊಳ್ಳಬೇಕಿದೆ' ಎಂದಿದ್ದಾರೆ ಎಚ್.ವಿಶ್ವನಾಥ್.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಕುಸಿಯುವಲ್ಲಿ ಎಚ್.ವಿಶ್ವನಾಥ್ ಅವರೂ ಸಹ ಪ್ರಮುಖ ಪಾತ್ರ ವಹಿಸಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ನಡೆದ ಉಪಚುನಾವಣೆಯಲ್ಲಿ ಸೋತ ವಿಶ್ವನಾಥ್ ಅವರನ್ನು ಈಗ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲಾಗಿದೆ. ತಮ್ಮನ್ನು ಸಚಿವರನ್ನಾಗಿ ಮಾಡದ ಕಾರಣ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಿದ್ದಾರೆ ವಿಶ್ವನಾಥ್.