Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಮುರಳಿಗೆ ಹೊಡೆಯೋಕೆ ಸ್ಕೆಚ್ ಹಾಕಿದ್ರಂತೆ ಆ ಡೈರೆಕ್ಟರ್
Recommended Video
ರೋರಿಂಗ್ ಸ್ಟಾರ್ ಶ್ರೀಮುರಳಿ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಸ್ಟಾರ್ ನಟ. ಚಂದ್ರಚಕೋರಿ, ಕಂಠಿ, ಉಗ್ರಂ, ಮಫ್ತಿ, ರಥಾವರ ಅಂತಹ ಸೂಪರ್ ಹಿಟ್ ಚಿತ್ರಗಳನ್ನ ನೀಡಿದ್ದಾರೆ. ಇಂತಹ ನಟನಿಗೆ ಆ ಡೈರೆಕ್ಟರ್ ಹೊಡೆಯೋದಕ್ಕೆ ಸ್ಕೆಚ್ ಹಾಕಿದ್ರಂತೆ.
ಹೌದು, ಉಗ್ರಂ ಹಾಗೂ ಕೆಜಿಎಫ್ ಸಿನಿಮಾ ಮಾಡಿರುವ ನಿರ್ದೇಶಕ ಪ್ರಶಾಂತ್ ನೀಲ್ ನಟ ಶ್ರೀಮುರಳಿಗೆ ಹೊಡೆಯಲು ಪ್ಲಾನ್ ಮಾಡಿದ್ದರಂತೆ. ಶೇಷಾದ್ರಿಪುರಂ ಕಾಲೇಜಿನಲ್ಲಿ ಓದುತ್ತಿದ್ದಾಗ ಪ್ರಶಾಂತ್ ಅವರ ತಂಗಿಗೆ ಶ್ರೀಮುರಳಿ ಲೈನ್ ಹಾಕ್ತಿದ್ರಂತೆ. ಈ ವಿಷ್ಯ ತಿಳಿದ ನಂತರ ಪ್ರಶಾಂತ್ ಹುಡುಗರಿಗೆ ಹೇಳಿ ಹುಡುಕಿದ್ದರಂತೆ. ಆದ್ರೆ, ಆ ಸಮಯದಲ್ಲಿ ಕೈಗೆ ಸಿಗದಂತೆ ಓಡಾಡುತ್ತಿದ್ದರಂತೆ.
ಮುಂಬೈನಲ್ಲಿ ಮೂರು ಹೊತ್ತು ಊಟಕ್ಕೆ ಪರದಾಡಿದ್ದರು ಶ್ರೀಮುರಳಿ
ಅಂದ್ಹಾಗೆ, ಶ್ರೀಮುರಳಿ ಮತ್ತು ಪ್ರಶಾಂತ್ ನೀಲ್ ಸಂಬಂಧಿಕರು. ಪ್ರಶಾಂತ್ ಅವರ ತಂಗಿ ವಿದ್ಯಾ ಅವರನ್ನ ಶ್ರೀಮುರಳಿ ಪ್ರೀತಿಸಿ ಮದುವೆಯಾಗಿದ್ದಾರೆ. ಇವರೆಲ್ಲರೂ ಶೇಷಾದ್ರಿಪುರಂ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.
ಆ ದಿನ ಸತ್ತಿದ್ದೀನಾ, ಬದುಕಿದ್ದೀನಾ ಎಂದು ಯಾರೂ ಬಂದು ನೋಡಿಲ್ಲ
ಪ್ರೀತಿಸುತ್ತಿರುವ ವಿಚಾರ ಗೊತ್ತಾದ ಬಳಿಕವೇ ಶ್ರೀಮುರಳಿ ಜೊತೆ ಉಗ್ರಂ ಸಿನಿಮಾ ಮಾಡಿದ್ದು. ನಿನ್ನನ್ನು ಸ್ಟಾರ್ ಮಾಡ್ತೀನಿ ಎಂದು ಹೇಳಿಯೇ ಉಗ್ರಂ ಟೇಕ್ ಆನ್ ಮಾಡಿದ್ದರಂತೆ. ಕೊಟ್ಟ ಮಾತಿನಂತೆ ಉಗ್ರಂ ಚಿತ್ರದ ಮೂಲಕ ಶ್ರೀಮುರಳಿಗೆ ಮತ್ತೊಂದು ಲೈಫ್ ಕೊಟ್ಟರು ಅಂದ್ರೆ ತಪ್ಪಾಗಲ್ಲ.
ಈ ಬಗ್ಗೆ ಸ್ವತಃ ಪ್ರಶಾಂತ್ ನೀಲ್ ಅವರೇ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ''ಇದು ಶ್ರೀಮುರಳಿಗೆ ನಾನು ಕೊಟ್ಟ ವರದಕ್ಷಿಣೆ ಎಂದಿದ್ದಾರೆ.