Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯುತ್ತಮ ಖಳ ನಾಯಕಿ ಪ್ರಶಸ್ತಿ ಪಡೆದ 'ಅಗ್ನಿಸಾಕ್ಷಿ' ಚಂದ್ರಿಕಾ
ಕಲರ್ಸ್ ಕನ್ನಡ ವಾಹಿನಿಯ ಈ ವರ್ಷದ ಅತ್ಯುತ್ತಮ ಖಳ ನಾಯಕಿ ಪ್ರಶಸ್ತಿ 'ಅಗ್ನಿಸಾಕ್ಷಿ' ಧಾರಾವಾಹಿ ಪಾಲಾಗಿದೆ. ನಟಿ ಪ್ರಿಯಾಂಕ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಪಾತ್ರ ಬಹಳ ಮುಖ್ಯವಾಗಿರುವುದು. ಧಾರಾವಾಹಿಯ ನಾಯಕಿಯ ಪಾತ್ರಕ್ಕೆ ಪೈಪೋಟಿ ನೀಡುವಂತೆ ಈ ಪಾತ್ರ ಇದೆ. ಚಂದ್ರಿಕಾ ಪಾತ್ರವನ್ನು ಅಷ್ಟೇ ಗಟ್ಟಿಯಾಗಿ ಪ್ರಿಯಾಂಕ ನಿರ್ವಹಿಸುತ್ತಿದ್ದಾರೆ.
ತಮ್ಮ ಒಳ್ಳೆಯ ನಟನೆಗಾಗಿ ಇದೀಗ ಪ್ರಿಯಾಂಕ 'ಜನ ಮೆಚ್ಚಿದ ಮಂಥರೆ' ಪ್ರಶಸ್ತಿ ಪಡೆದಿದ್ದಾರೆ. ಅನುಬಂಧ ಕಾರ್ಯಕ್ರಮದ ಅದ್ದೂರಿ ವೇದಿಕೆಯಲ್ಲಿ ಪ್ರಿಯಾಂಕ ಕೈಗೆ ಪ್ರಶಸ್ತಿ ಸೇರಿದೆ.
ಅನುಬಂಧ ಅವಾರ್ಡ್ 2019: ಜನ ಮೆಚ್ಚಿದ ನಾಯಕ-ನಾಯಕಿ ಯಾರು?
ಪ್ರತಿ ಬಾರಿ ಅಗ್ನಿಸಾಕ್ಷಿ ಧಾರಾವಾಹಿಯ ನಟ ವಿಜಯ್ ಸೂರ್ಯ ಅನುಬಂಧ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆಯುತ್ತಿದ್ದರು. ಆದರೆ, ವಿಜಯ್ ಸೂರ್ಯ ಧಾರಾವಾಹಿಯಿಂದ ಆಚೆ ಹೋಗಿದ್ದಾರೆ.
ನಿಜ ಜೀವನದಲ್ಲಿ 'ಅಗ್ನಿಸಾಕ್ಷಿ' ಚಂದ್ರಿಕಾಗೆ ವಿಜಯ್ ಸೂರ್ಯ ಮೇಲೆ ಕಣ್ಣು.!
ಇಂದು (ಸಪ್ಟೆಂಬರ್ 29) ರಂದು ಅನುಬಂಧ ಕಾರ್ಯಕ್ರಮ ಸಂಜೆ 7 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. ಪುನೀತ್ ರಾಜ್ ಕುಮಾರ್, ರಚಿತಾ ರಾಮ್, ಗಣೇಶ್, ಜಗ್ಗೇಶ್, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅದ್ದೂರಿಯಾಗಿ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಮಾಡಲಾಗಿದೆ.