Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯುತ್ತಮ ಖಳ ನಾಯಕಿ ಪ್ರಶಸ್ತಿ ಪಡೆದ 'ಅಗ್ನಿಸಾಕ್ಷಿ' ಚಂದ್ರಿಕಾ
ಕಲರ್ಸ್ ಕನ್ನಡ ವಾಹಿನಿಯ ಈ ವರ್ಷದ ಅತ್ಯುತ್ತಮ ಖಳ ನಾಯಕಿ ಪ್ರಶಸ್ತಿ 'ಅಗ್ನಿಸಾಕ್ಷಿ' ಧಾರಾವಾಹಿ ಪಾಲಾಗಿದೆ. ನಟಿ ಪ್ರಿಯಾಂಕ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಪಾತ್ರ ಬಹಳ ಮುಖ್ಯವಾಗಿರುವುದು. ಧಾರಾವಾಹಿಯ ನಾಯಕಿಯ ಪಾತ್ರಕ್ಕೆ ಪೈಪೋಟಿ ನೀಡುವಂತೆ ಈ ಪಾತ್ರ ಇದೆ. ಚಂದ್ರಿಕಾ ಪಾತ್ರವನ್ನು ಅಷ್ಟೇ ಗಟ್ಟಿಯಾಗಿ ಪ್ರಿಯಾಂಕ ನಿರ್ವಹಿಸುತ್ತಿದ್ದಾರೆ.
ತಮ್ಮ ಒಳ್ಳೆಯ ನಟನೆಗಾಗಿ ಇದೀಗ ಪ್ರಿಯಾಂಕ 'ಜನ ಮೆಚ್ಚಿದ ಮಂಥರೆ' ಪ್ರಶಸ್ತಿ ಪಡೆದಿದ್ದಾರೆ. ಅನುಬಂಧ ಕಾರ್ಯಕ್ರಮದ ಅದ್ದೂರಿ ವೇದಿಕೆಯಲ್ಲಿ ಪ್ರಿಯಾಂಕ ಕೈಗೆ ಪ್ರಶಸ್ತಿ ಸೇರಿದೆ.
ಅನುಬಂಧ ಅವಾರ್ಡ್ 2019: ಜನ ಮೆಚ್ಚಿದ ನಾಯಕ-ನಾಯಕಿ ಯಾರು?
ಪ್ರತಿ ಬಾರಿ ಅಗ್ನಿಸಾಕ್ಷಿ ಧಾರಾವಾಹಿಯ ನಟ ವಿಜಯ್ ಸೂರ್ಯ ಅನುಬಂಧ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆಯುತ್ತಿದ್ದರು. ಆದರೆ, ವಿಜಯ್ ಸೂರ್ಯ ಧಾರಾವಾಹಿಯಿಂದ ಆಚೆ ಹೋಗಿದ್ದಾರೆ.
ನಿಜ ಜೀವನದಲ್ಲಿ 'ಅಗ್ನಿಸಾಕ್ಷಿ' ಚಂದ್ರಿಕಾಗೆ ವಿಜಯ್ ಸೂರ್ಯ ಮೇಲೆ ಕಣ್ಣು.!
ಇಂದು (ಸಪ್ಟೆಂಬರ್ 29) ರಂದು ಅನುಬಂಧ ಕಾರ್ಯಕ್ರಮ ಸಂಜೆ 7 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. ಪುನೀತ್ ರಾಜ್ ಕುಮಾರ್, ರಚಿತಾ ರಾಮ್, ಗಣೇಶ್, ಜಗ್ಗೇಶ್, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅದ್ದೂರಿಯಾಗಿ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಮಾಡಲಾಗಿದೆ.